ಲಾಲ್‍ಬಾಗ್‍ನಲ್ಲಿ “ಆರ್ಕಿಡ್ ಪುಷ್ಪ ಮೇಳ’


Team Udayavani, Oct 20, 2019, 3:06 AM IST

lalbhag

ಬೆಂಗಳೂರು: ದಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಎರಡು ದಿನಗಳ “ಆರ್ಕಿಡ್ ಪುಷ್ಪ ಮೇಳ’ಕ್ಕೆ ಶನಿವಾರ ರಾಜ್ಯ ತೋಟಗಾರಿಕೆ ಇಲಾಖೆ ನಿರ್ದೇಶಕ ಬಿ. ವೆಂಕಟೇಶ್ ಚಾಲನೆ ನೀಡಿದರು.

ಮರಿಗೌಡ ಹಾಲ್‌ನಲ್ಲಿ ಸೊಸೈಟಿಯ ಸದಸ್ಯರು ಬೆಳೆದಿರುವ ಬಗೆ ಬಗೆಯ ಅಪರೂಪದ ಆರ್ಕಿಡ್‌ಗಳ ಪ್ರದರ್ಶನವಿದ್ದರೆ, ಹೊರಗಡೆ ಆರ್ಕಿಡ್ ಗಿಡಗಳ ಮಾರಾಟಕ್ಕೆಂದು 12 ಮಳಿಗೆಗಳನ್ನು ತೆರೆಯಲಾಗಿದೆ. ಮೇಳದಲ್ಲಿ ಸೊಸೈಟಿಯ 300 ಸದಸ್ಯರು ಬೆಳೆದಿರುವ ಡೆಂಡ್ರೋಬಿಯಮ್‌ಸ್‌, ಪ್ಯಾಪಿಲೊ ಪೀಡಿಯಂ, ವ್ಯಾಂಡಾ ಮತ್ತಿತರ 80 ತಳಿಯ ಆರ್ಕಿಡ್ ಹೂವಿನ ಸಸಿಗಳನ್ನು ಪ್ರದರ್ಶಿಸಲಾಗುತ್ತಿದೆ.

ಕನಿಷ್ಠ 200 ರೂ.ನಿಂದ 4000 ರೂ.ವರೆಗಿನ ಬೆಲೆಯುಳ್ಳ ಆರ್ಕಿಡ್‌ಗಳು ಮೇಳದಲ್ಲಿವೆ. ಹೈಬ್ರಿಡ್ ತಳಿಗಳಾದ ಫಲನೊಪ್ಸಿಸ್, ವ್ಯಾಂಡಾ, ವೊಕಾರಾ ಸೇರಿದಂತೆ ಸುಮಾರು 15-18ಕ್ಕೂ ಹೆಚ್ಚು ತಳಿಯ ಆರ್ಕಿಡ್‌ಗಳನ್ನು ಪ್ರದರ್ಶಿಸಲಾಗಿದೆ. ಅವುಗಳ ಜತೆಗೆ ಆಕರ್ಷಕವಾದ ಬಳ್ಳಿಯಾಕಾರದ ಹೂವುಗಳು, ಮೊಗ್ಗು-ಅರಳಿದ ಹೂವುಗಳು ಪಾಟ್‌ಗಳಲ್ಲಿ ಪ್ರದರ್ಶನಗೊಳ್ಳುತ್ತಿವೆ.

ಆರ್ಕಿಡ್ ಬೆಳೆಸುವವರಿಗಾಗಿ ಸಂಪೂರ್ಣ ಮಾರ್ಗದರ್ಶನ ಹಾಗೂ ಅಗತ್ಯ ಪರಿಕರಗಳು ಮೇಳದಲ್ಲಿ ಲಭ್ಯವಿವೆ. ಪ್ರತಿದಿನ 2 ಬಾರಿ ಆರ್ಕಿಡ್ ಬೆಳೆಯ ಬಗ್ಗೆ ಕಾರ್ಯಾಗಾರ ನಡೆಸಲಾಗುತ್ತಿದೆ. ಸಸಿಗಳು, ಪಾಟ್‌ಗಳು, ಅವುಗಳ ಆರೈಕೆಗೆ ಬೇಕಾದ ಮಣ್ಣು-ಗೊಬ್ಬರ ಸೇರಿದಂತೆ ಇತರೆ ಪರಿಕರಗಳ ಮಾರಾಟ ನಡೆಯುತ್ತಿದೆ. ಇನ್ನು ಮೇಳಕ್ಕೆ ಮೊದಲ ದಿನವೇ ಸಾವಿರಾರು ಮಂದಿ ಭೇಟಿ ನೀಡಿದ್ದರು.

ಹವ್ಯಾಸಿ ಆರ್ಕಿಡ್‌ಗಳ ಕಾಡಿನ ಕಲ್ಪನೆ ಹೋಲುವ ಆರ್ಕಿಡ್‌ಗಳು, ಆರ್ಕಿಡ್ ಮಂಟಪ ವೀಕ್ಷಕರನ್ನು ಆಕರ್ಷಿಸಿತ್ತು. ಮೇಳವು ಭಾನುವಾರವೂ ನಡೆಯಲಿದ್ದು, ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಶುಲ್ಕ 50 ರೂ. ನಿಗದಿ ಮಾಡಲಾಗಿದೆ. ಜಂಟಿ ನಿರ್ದೇಶಕ ಡಾ. ಎಂ. ಜಗದೀಶ್ ಅವರು ಸೊಸೈಟಿಯ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ದಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕದ ಅಧ್ಯಕ್ಷ ಡಾ. ಜಿ.ಡಿ. ಚಂದನ್, ಮಾಜಿ ಅಧ್ಯಕ್ಷ ಡಾ. ಕೆ.ಎಸ್. ಶಶಿಧರ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.