ಲಾಠಿ ಬೀಸಿದ ಪ್ರಕರಣ ತನಿಖೆಗೆ ಆದೇಶ


Team Udayavani, Nov 16, 2017, 11:08 AM IST

lathicharge.jpg

ಬೆಂಗಳೂರು: ತಡರಾತ್ರಿವರೆಗೆ ಹೋಟೆಲ್‌ ತೆರೆದಿದ್ದಕ್ಕೆ ಆಕ್ರೋಶಗೊಂಡ ಜೆ.ಸಿ.ನಗರ ಎಸಿಪಿ ಮಂಜುನಾಥ್‌ ಬಾಬು ಆರ್‌.ಟಿ.ನಗರದ ದಿನ್ನೂರಿನಲ್ಲಿರುವ ಶೆಟ್ಟಿ ಲಂಚ್‌ ಹೋಮ್‌ ಮಾಲೀಕರು ಮತ್ತು ಸಿಬ್ಬಂದಿ ಮೇಲೆ ಲಾಠಿ ಪ್ರಹಾರ ನಡೆಸಿದ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ಚೇತನ್‌ಸಿಂಗ್‌ ರಾಥೋಡ್‌ಗೆ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಆದೇಶಿಸಿದ್ದಾರೆ.

ನ.9ರಂದು ಜೆ.ಸಿ.ನಗರದ ಉಪವಿಭಾಗದ ಎಸಿಪಿ ಮಂಜುನಾಥ್‌ ಬಾಬು ರಾತ್ರಿ ಪಾಳಿಯ ರೌಂಡ್ಸ್‌ನಲ್ಲಿ ಇದ್ದರು. ಈ ವೇಳೆ ದಿನ್ನೂರು ರಸ್ತೆಯಲ್ಲಿ ಶೆಟ್ಟಿ ಲಂಚ್‌ ಹೋಂ ಹೋಟೆಲ್‌ ಮಧ್ಯರಾತ್ರಿ 12 ಗಂಟೆಯಾಗಿದ್ದರೂ ಮುಚ್ಚಿರಲಿಲ್ಲ. ಇದಕ್ಕೆ ಅಸಮಾಧಾನಗೊಂಡ ಎಸಿಪಿ, ಹೋಟೆಲ್‌ ಪ್ರವೇಶಿಸಿ ಮಾಲೀಕನನ್ನು ಪ್ರಶ್ನಿಸಿ, ರಾಜೀವ ಶೆಟ್ಟಿ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಈ ದೃಶ್ಯಗಳು ಹೋಟೆಲ್‌ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿಸಿಟಿವಿ ದೃಶ್ಯಗಳು  ಮಾಧ್ಯಮಗಳಲ್ಲಿ ವೈರಲ್‌ ಆದ ಪರಿಣಾಮ ಘಟನೆ ಸಂಬಂಧ ವರದಿ ನೀಡುವಂತೆ ನಗರ ಪೊಲೀಸ್‌ ಆಯುಕ್ತರು ಉತ್ತರ ವಿಭಾಗದ ಡಿಸಿಪಿ ಚೇತನ್‌ಸಿಂಗ್‌ ರಾಥೋಡ್‌ ಅವರಿಗೆ ಸೂಚಿಸಿದ್ದಾರೆ. 

ಏನಿದು ಘಟನೆ?: ರಾಜೀವ್‌ ಶೆಟ್ಟಿ ಎಂಬುವರು ಶೆಟ್ಟಿ ಲಂಚ್‌ ಹೋಮ್‌’ ಎಂಬ ಹೋಟೆಲ್‌ ನಡೆಸುತ್ತಿದ್ದರು. ನಿತ್ಯ ರಾತ್ರಿ 12.30 ಗಂಟೆಯಾದರೂ ಹೋಟೆಲ್‌ ಮುಚ್ಚುತ್ತಿರಲಿಲ್ಲ. ನ.9 ರಂದು ಜೆ.ಸಿ.ನಗರ ಎಸಿಪಿ ಮಂಜುನಾಥ್‌ ಬಾಬು ಅವರು ರಾತ್ರಿ ಗಸ್ತಿನಲ್ಲಿದ್ದರು.

ಗಸ್ತಿನಲ್ಲಿದ್ದ ಪೇದೆ ಹೋಟೆಲ್‌ ಮುಚ್ಚುವಂತೆ ಸೂಚಿಸಿದ್ದರು. ಇದನ್ನು ಲೆಕ್ಕಿಸದ ಮಾಲೀಕ ರಾಜೀವ್‌ ಶೆಟ್ಟಿ ಪೇದೆ ನಿಂದಿಸಿ ಕಳುಹಿಸಿದ್ದ. ಇದರಿಂದ ಕೋಪಗೊಂಡ ಎಸಿಪಿ ರಾಜೇಶ್‌ ಶೆಟ್ಟಿ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಇತ್ತ ಪೇದೆ ಕೂಡ ಸಿಬ್ಬಂದಿಯನ್ನು ಹೊರಗೆ ಕಳುಹಿಸಿದ್ದಾರೆ. ಈ ದೃಶ್ಯಗಳು ಹೋಟೆಲ್‌ನ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿವೆ. ಇತರೆ ಹೋಟೆಲ್‌ ಮಾಲೀಕರು ಸರಿಯಾಗಿ ಬಂದ್‌ ಮಾಡಿದರೂ, ರಾಜೀವ್‌ ಶೆಟ್ಟಿ ತಡರಾತ್ರಿಯಾದರೂ ಹೋಟೆಲ್‌ ಬಂದ್‌ ಮಾಡುತ್ತಿರಲಿಲ್ಲ. ಎಷ್ಟು ಬಾರಿ ಸೂಚಿಸಿದರೂ ಹೀಗೆ ವರ್ತಿಸುತ್ತಿದ್ದ. ಲೌಖೀಕ ಮತ್ತು ಲಿಖೀತ ರೂಪದಲ್ಲಿ ಎಚ್ಚರಿಕೆ ಕೂಡ ನೀಡಲಾಗಿತ್ತು. ಆದರೂ ತನ್ನ ವರ್ತನೆಯಲ್ಲಿ ಬದಲಾವಣೆ ಕಾಣಲಿಲ್ಲ. ಹೀಗಾಗಿ ಕಳೆದ ಗುರುವಾರ ರಾತ್ರಿ ಗಸ್ತಿನಲ್ಲಿದ್ದ ವೇಳೆ ಹೋಟೆಲ್‌ ಮುಚ್ಚುವಂತೆ ಪೇದೆ ಹೇಳಿದಾಗ ಏಕವಚನದಲ್ಲಿ ನಿಂದಿಸಿ ಮುಚ್ಚುವುದಿಲ್ಲ ಎಂದು ಹೇಳಿದ್ದ. ಆಗ ನಾನೇ ಹೋಟೆಲ್‌ಗೆ ತೆರಳಿ ಈ ರೀತಿಯಾಗಿ ಎಚ್ಚರಿಕೆ ನೀಡಬೇಕಾಯಿತು ಎಂದು ಎಸಿಪಿ ಮಂಜುನಾಥ್‌ ಬಾಬು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ರಾಜೀವ್‌ ಶೆಟ್ಟಿ ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಡಿಸಿಪಿ ಚೇತನ್‌ಸಿಂಗ್‌ ರಾಥೋಡ್‌ಗೆ ವರದಿ ನೀಡುವಂತೆ ನಗರ ಪೊಲೀಸ್‌ ಆಯುಕ್ತರು ಆದೇಶಿಸಿದ್ದಾರೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.