ಸಂಸ್ಕೃತಿ ಕಟ್ಟಿ ಬೆಳೆಸಿದ ನಮ್ಮ ಹಿರಿಯರು


Team Udayavani, Mar 13, 2019, 6:46 AM IST

samskruti.jpg

ಬೆಂಗಳೂರು: ಓದು, ಬರಹ ಬಲ್ಲವರಲ್ಲದ ನಮ್ಮ ಹಿರಿಯರು ಈ ದೇಶದ ಸಂಸ್ಕೃತಿ ಕಟ್ಟಿ ಬೆಳೆಸಿದರು ಎಂದು ಹಿರಿಯ ಸಾಹಿತಿ ಮತ್ತು ವಿಮರ್ಶಕ ಡಾ.ಎಚ್‌.ಎಸ್‌.ಶಿವಪ್ರಕಾಶ್‌ ಅಭಿಪ್ರಾಯಪಟ್ಟರು.

ನಗರದ ಸಂತ ಜೋಸೆಫ‌ರ ಕಾಲೇಜಿನಲ್ಲಿ ಆರಂಭವಾಗಿರುವ “ಸಾಹಿತ್ಯದ ಓದು’ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಯಾವುದೇ ಸಾಹಿತ್ಯವನ್ನು ಓದದ ನಮ್ಮ ಪೂರ್ವಜರು ಜಾನಪದ ಸಾಹಿತ್ಯ, ವೈದಿಕ ಸಾಹಿತ್ಯ, ಭಕ್ತಿ ಸಾಹಿತ್ಯವನ್ನು ಬಿಟ್ಟುಹೋಗಿದ್ದಾರೆ. ಅವುಗಳಲ್ಲಿ ಸತ್ವ ಅಡಗಿದೆ ಎಂದರು.

ಅಕ್ಷರಗಳ ಅರ್ಥ ಮತ್ತು ಅವುಗಳ ಹಿಂದಿರುವ ಮರ್ಮ ಗೊತ್ತಾಗದೆ ಇದ್ದರೆ ಆ ಓದು ಕೇವಲ ಅಕ್ಷರ ಕಲಿಕೆ ಅಷ್ಟೇ. ಅದರಿಂದ ಏನೂ ಪ್ರಯೋಜನವಿಲ್ಲ. ಓದು ಕಲಿಸುವ ಸಂಬಂಧ ಹಲವು ವಿಶ್ವವಿದ್ಯಾಲಯಗಳು ನಮ್ಮಲ್ಲಿವೆ. ಆದರೆ ಅವುಗಳಿಂದ ಕಲಿತು ಹೋರ ಬಂದವರು ಇನ್ನೂ ಮಾಧ್ಯಮಗಳ ಜಾಹೀರಾತುಗಳಿಗೆ ಮಾರು ಹೋಗುತ್ತಿದ್ದಾರೆ ಎಂದು ದೂರಿದರು.

ಕಾಯುವಿಕೆ ಕವಿಗಳಿಗಿಲ್ಲ: ನಮ್ಮ ಶಿಕ್ಷಣ ಪದ್ಧತಿ ಕಾವ್ಯ, ಕಾವ್ಯತ್ವದ ಗುಣ ಸವಿಯುವುದನ್ನು ಕಳೆದುಕೊಂಡಿದೆ. ಕಾರಣ ಯಾವುದಕ್ಕೂ ಸಮಯವಿಲ್ಲ. ಅಲ್ಲದೆ ಕಾಯುವಿಕೆ ಇಂದಿನ ಯುವ ಕವಿಗಳಿಗೂ ಆಗುತ್ತಿಲ್ಲ. ಪ್ರಥಮ ಸಂಕಲನ ಹೊರಬಂದರೆ ಸಾಕು ಪ್ರಶಸ್ತಿಗಾಗಿ ಎದುರು ನೋಡುತ್ತಾರೆ ಎಂದರು.

ಹಿರಿಯ ಸಾಹಿತಿ ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌, ಸಂತ ಜೋಸೆಫ‌ರ ಕಾಲೇಜಿನ ಪ್ರಾಚಾರ್ಯ ಫಾದರ್‌ ಡಾ.ವಿಕ್ಟರ್‌ ಲೋಬೊ, ಉದಯಭಾನು ಕಲಾ ಸಂಘದ ಗೌರವ ಕಾರ್ಯದರ್ಶಿ ಎಂ.ನರಸಿಂಹ, ಡಾ.ಬಿ.ಎನ್‌.ಪೂರ್ಣಿಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಾಹಿತ್ಯ ವಿದ್ಯಾರ್ಥಿಗಳು ಭಾಗಿ: ಬೆಳಗ್ಗೆಯಿಂದ ಸಂಜೆವರೆಗೂ ನಡೆದ ವಿಚಾರ ಸಂಕಿರಣದಲ್ಲಿ ವಿವಿಧ ಕಾಲೇಜಿನ ಸಾಹಿತ್ಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾಗವಹಿಸಿದ್ದರು. “ಸಾಹಿತ್ಯದ ಓದಿನ ಸ್ವರೂಪ ಉದ್ದೇಶ’ ಕುರಿತ ವಿಚಾರ ಸಂಕಿರಣದಲ್ಲಿ ಬೆಂವಿವಿ ಕನ್ನಡ ಅಧ್ಯನ ಕೇಂದ್ರದ ಡಾ.ಎಚ್‌.ಶಶಿಕಲಾ, ಡಾ.ರಾಮಲಿಂಗಪ್ಪ ಟಿ.ಬೇಗೂರು, ಡಾ.ವಿಕ್ರಂ ವಿಸಾಜಿ ಭಾಗವಹಿಸಿದ್ದರು.

“ಸಾಹಿತ್ಯದ ಪ್ರಕಾರಗಳನ್ನು ಓದುವ ಬಗೆಗಳು’, ಕುರಿತ ವಿಚಾರ ಸಂಕಿರಣದಲ್ಲಿ ವಿಮರ್ಶಕ ಎಸ್‌.ಆರ್‌.ವಿಜಯ ಶಂಕರ್‌, ಡಾ.ನಟರಾಜ ಹುಳಿಯಾರ್‌ ಸೇರಿದಂತೆ ಹಲವು ಮಂದಿ ಪಾಲ್ಗೊಂಡಿದ್ದರು. ಬುಧವಾರ ಕೂಡ ಸಾಹಿತ್ಯದ ಓದು ಕುರಿತ ವಿಚಾರ ಸಂಕಿರಣ ನಡೆಯಲಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.