ಹೊರಾಂಗಣ ಜಾಹೀರಾತು ಮತ್ತೆ ಮುನ್ನೆಲೆಗೆ

ಹಿಂಬಾಗಿಲಿನಿಂದ ಹೋರ್ಡಿಂಗ್ಸ್‌ ಅಳವಡಿಕೆಗೆ ಸಿದ್ಧತೆ; ಆರೋಪ

Team Udayavani, Sep 6, 2020, 11:56 AM IST

ಹೊರಾಂಗಣ ಜಾಹೀರಾತು ಮತ್ತೆ ಮುನ್ನೆಲೆಗೆ

ಬೆಂಗಳೂರು: ಹಿಂಬಾಗಿಲಿನ ಮೂಲಕ ನಗರದಲ್ಲಿ ಹೋರ್ಡಿಂಗ್ಸ್‌ ಅಳವಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಖುದ್ದು ಮೇಯರ್‌ ಎಂ. ಗೌತಮ್‌ ಕುಮಾರ್‌ ಅವರು ಆರೋಪಿಸಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ.

ಪಾಲಿಕೆ 2018ರಲ್ಲಿ “ಹೊರಾಂಗಣ ಸೈನೇಜ್‌ ಮತ್ತು ಸಾರ್ವಜನಿಕ ಸಂದೇಶನೀತಿ ಹಾಗೂ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ-2018′ ಈಗಾಗಲೇ ಜಾರಿಯಲ್ಲಿದ್ದು, ಇದರಿಂದ ನಗರದಲ್ಲಿ ಅನಧಿಕೃತ ಫ್ಲೆಕ್ಸ್‌, ಬ್ಯಾನರ್ಗಳಿಲ್ಲದೆ ನಗರ ಸುಂದರವಾಗಿದೆ. ಅಲ್ಲದೆ, ನಗರದ ಸೌಂದರ್ಯ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹೋರ್ಡಿಂಗ್ಸ್‌ ನಿಷೇಧಿಸಲು ಪಾಲಿಕೆ ನಿರ್ಣಯ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಇರುವುದಿಲ್ಲ. ಅದರಂತೆ ಬಿಬಿಎಂಪಿಯ ಬೈಲಾ-2018′ ಜಾಹೀರಾತಿಗೆ ವ್ಯತಿರಿಕ್ತವಾದ ಯಾವುದೇ ನಿಯಮಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದರೂ, ಅದು ಪಾಲಿಕೆ ಸಂವಿಧಾನದತ್ತ ಅಧಿಕಾರ ಉಲ್ಲಂಘನೆ ಆಗುತ್ತದೆ ಎಂದು ಮೇಯರ್‌ ಪತ್ರದಲ್ಲಿ ವಿವರಿಸಿದ್ದಾರೆ.

ಈ ಮಧ್ಯೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾಹೀರಾತು ಅಳವಡಿಸಿಕೊಳ್ಳಲು ಜಾಹೀರಾತು ಅಸೋಸಿಯೇಷನ್‌ ಪ್ರತಿನಿಧಿಗಳು ತಮಗೆಅನುಕೂಲವಾಗುವಂತೆ ಮತ್ತು ಕೆಎಂಸಿ ಕಾಯ್ದೆಗೆ ವಿರುದ್ಧವಾಗಿ ಸರ್ಕಾರದ ಮೂಲಕ ಲಾಬಿ ನಡೆಸಿ, ಬಿಬಿಎಂಪಿ “ಜಾಹೀರಾತು ನಿಯಮ2019’ರೂಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಹಿಂಬಾಗಿಲಿನಿಂದ ಹೋರ್ಡಿಂಗ್ಸ್‌ ಪ್ರದರ್ಶಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ ಎಂದು ದೂರಿದ್ದಾರೆ.

ಹಿಂಬಾಗಿಲಿನಿಂದ ಹೋರ್ಡಿಂಗ್ಸ್‌: ನಗರದಲ್ಲಿ ಈಗ ಜಾರಿ ಮಾಡಲು ಪ್ರಯತ್ನಿಸುತ್ತಿರುವ ಜಾಹೀರಾತು ನಿಯಮಗಳಲ್ಲಿ ಪುನಃ ಹೋರ್ಡಿಂಗ್ಸ್‌ಗಳಿಗೆ ಅವಕಾಶ ಮಾಡಿಕೊಡಲು ಪ್ರಯತ್ನ ನಡೆದಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹೋರ್ಡಿಂಗ್ಸ್‌ಗಳು ಯಥೇತ್ಛವಾಗಿ ಅಳವಡಿಸಲು ಅವಕಾಶ ಕಲ್ಪಿಸಿದಂತಾಗುತ್ತದೆ. ಅಲ್ಲದೆ, ಹೋರ್ಡಿಂಗ್ಸ್‌ಗಳನ್ನು ಅಳವಡಿಕೆಗೆ ಸಾರ್ವಜನಿಕರಿಂದಲೂ ಆಕ್ಷೇಪವಿದೆ. ಹೋರ್ಡಿಂಗ್ಸ್‌ ಅಳವಡಿಕೆ ವಿಚಾರವಾಗಿ ಪರಿಶೀಲನೆ ಮಾಡಲು ರಚನೆ ಮಾಡಿದ್ದ ಸಮಿತಿಯ ಸದಸ್ಯರೇ ಹೋರ್ಡಿಂಗ್ಸ್‌ ನಿಷೇಧಿಸುವಂತೆ ಶಿಫಾರಸು ಮಾಡಿದ್ದಾರೆ.ಆದರೆ, ಮೆಟ್ರೋ (ಬಿಎಂಆರ್‌ ಸಿಎಲ್‌) ಸಂಸ್ಥೆ ಜಾಹೀರಾತು ಬೈಲಾಗಳಿಗೆ ಕೋರಿರುವ ಬದಲಾವಣೆಗಳನ್ನು ಅಳವಡಿಸಿಕೊಳ್ಳವ ನೆಪವನ್ನು ಮರೆಮಾಚಿ, ಕೆಎಂಸಿ ಕಾಯ್ದೆ ಹಾಗೂ ಬಿಬಿಎಂಪಿ ಅಧಿಕಾರಕ್ಕೆ ವಿರುದ್ಧವಾಗಿ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕಡತ ಮಂಡನೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ-2018′ ಜಾಹೀರಾತಿಗೆ ವ್ಯತಿರಿಕ್ತವಾದ ಯಾವುದೇ ನಿಯಮಗಳನ್ನು ರೂಪಿಸದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರಕ್ಕಿದೆ ಅಧಿಕಾರ :  ಕರ್ನಾಟಕ ಪೌರ ಆಡಳಿತ ಕಾಯ್ದೆ-1976ರ ಕಲಂ 425 ಪ್ರಕಾರ ಬಿಬಿಎಂಪಿ ಬೈಲಾ ರಚಿಸಬಹುದು. ಇದರಲ್ಲಿ ಲೋಪವಾದರೆ ಅಥವಾ ಬೈಲಾ ರೂಪಿಸುವಲ್ಲಿ ವಿಫ‌ಲವಾದರೆ ಸರ್ಕಾರ ಕೆಎಂಸಿ ಕಾಯ್ದೆಯ ಕಲಂ 427ರ ಪ್ರಕಾರ ಮಧ್ಯ ಪ್ರವೇಶಿಸಿ, ಹೊಸ ನೀತಿಯನ್ನು ಜಾರಿ ಮಾಡುವುದಕ್ಕೆ ಅವಕಾಶವಿದೆ. ಆದರೆ, ಬಿಬಿಎಂಪಿ ರೂಪಿಸಿರುವ “ಹೊರಾಂಗಣ ಸೈನೇಜ್‌ ಮತ್ತು ಸಾರ್ವಜನಿಕ ಸಂದೇಶನೀತಿ ಹಾಗೂ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ-2018′ ಕರಡಿನ ಬಗ್ಗೆ ಸರ್ಕಾರಕ್ಕೆ ಎಲ್ಲ ವರದಿಗಳನ್ನು ಬಿಬಿಎಂಪಿ ನೀಡಿದೆ. ಇದೀಗ ಮತ್ತೆ ಚರ್ಚೆ ಮುನ್ನೆಲೆಗೆ ಬಂದಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.