ಹೊರಜಿಲ್ಲೆ ಸೋಂಕಿತರ ನಿರ್ವಹಣೆ ಸಮಸ್ಯೆ

ಪೂರ್ವ ಮಾಹಿತಿ ನೀಡದೆ ನಗರದ ಆಸ್ಪತ್ರೆಗಳಿಗೆ ದಾಖಲು

Team Udayavani, Oct 14, 2020, 11:30 AM IST

bng-tdy-2

ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಗಳಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕೋವಿಡ್ ಸೋಂಕಿತರು ಚಿಕಿತ್ಸೆಗೆ ದಾಖಲಾಗುತ್ತಿದ್ದು, ಸಕಾಲದಲ್ಲಿ ಮಾಹಿತಿ ಸಿಗದೆ ಸಮಸ್ಯೆ ಆಗುತ್ತಿದೆಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಈ ಸಂಬಂಧ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್ ಸೋಂಕಿತರು ವಿವಿಧ ಜಿಲ್ಲೆಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆಗೆ ಬರುವ ಸಂದರ್ಭದಲ್ಲಿಮಾಹಿತಿ ನೀಡದೆಇರುವುದರಿಂದ ಸೋಂಕಿತರಿಗೆ ಹಾಸಿಗೆ ವ್ಯವಸ್ಥೆ ಕಲ್ಪಿಸಲು ಸಮಸ್ಯೆ ಆಗುತ್ತಿದೆ. ಹೀಗಾಗಿ, ಒಂದು ನಿರ್ದಿಷ್ಟ ಮಾರ್ಗಸೂಚಿ ರೂಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.

ಸೋಂಕು ದೃಢಪಟ್ಟವರು ಬೇರೆ ಜಿಲ್ಲೆಗೆ ಹೋಗಿ ಚಿಕಿತ್ಸೆ ಪಡೆಯಬೇಕಾದರೆ, ಆಯಾ ಜಿಲ್ಲಾಧಿಕಾರಿ ಅನುಮತಿ ಪಡೆಯಬೇಕು. ಆದರೆ, ಈ ನಿಯಮ ಉಲ್ಲಂಘನೆಯಾಗುತ್ತಿದ್ದು, ಪೂರ್ವ ಮಾಹಿತಿ ನೀಡದೆ ಬರುವುದರಿಂದ ಸಮಸ್ಯೆ ಆಗುತ್ತಿದೆ. ಒಂದು ವಾರದಲ್ಲಿ ಅಂದಾಜು 350ಕ್ಕೂ ಹೆಚ್ಚು ಸೋಂಕಿತರು ವಿವಿಧ ಜಿಲ್ಲೆಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮೊದಲೇ ಮಾಹಿತಿ ಲಭ್ಯವಾದರೆ ಬೇರೆ ಜಿಲ್ಲೆಗಳಿಂದ ಬರುವ ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಅನುಕೂಲವಾಗಲಿದೆ. ಅದ್ದರಿಂದ ಈ ಕುರಿತು ಮಾಹಿತಿ ಸಂಗ್ರಹಕ್ಕೆ ನಿರ್ದೇಶಿಸಲಾಗಿದೆ ಎಂದರು.

ಸೌಮ್ಯ ಲಕ್ಷಣ ಇದ್ದವರೂ ಆಸ್ಪತ್ರೆಗೆ ದಾಖಲು: ನಗರದಲ್ಲಿ ಕೋವಿಡ್ ಸೌಮ್ಯ ಲಕ್ಷಣ ಇರುವವರೂ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಹಾಸಿಗೆ ಸಮಸ್ಯೆ ಸೃಷ್ಟಿಯಾಗುತ್ತಿದೆ. ಶೇ 15- 20ರಷ್ಟು ಜನ ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದಾಗಿ ತೀವ್ರ ಆರೋಗ್ಯ ಸಮಸ್ಯೆ ಇರುವ ರೋಗಿಗಳಿಗೆ ಸಮಸ್ಯೆ ಉಂಟಾಗುತ್ತಿದೆ ಎಂದರು.

ಏಳು ದಿನದಲ್ಲಿ ಬಿಡುಗಡೆ: ನಗರದಲ್ಲಿ ಸೋಂಕು ರಹಿತರೂ ಆಸ್ಪತ್ರೆಗೆ ದಾಖಲಾಗುತ್ತಿರುವುದು ಹಾಗೂ ಹಾಸಿಗೆಗಳ ನಿರ್ವಹಣೆ ಮಾಡುವ ದೃಷ್ಟಿಯಿಂದ ಲಕ್ಷಣ ರಹಿತ ಸೋಂಕಿತರನ್ನು 7 ದಿನಕ್ಕೆ ಬಿಡುಗಡೆ ಮನವಿ ಮಾಡಲಾಗುವುದು. ಲಕ್ಷಣ ರಹಿತ ಸೋಂಕಿತರು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಅವರನ್ನು 10 ದಿನಕ್ಕೆ ಬಿಡುಗಡೆ ಮಾಡಲಾಗುತ್ತಿದೆ. ಏಳು ದಿನಕ್ಕೆ ಹಾಗೂ ಆಸ್ಪತ್ರೆಯ ಆರೈಕೆ ಅವಶ್ಯಕತೆ ಇಲ್ಲ ಎಂದು ವೈದ್ಯರಿಗೆ ತಿಳಿದು ಬಂದರೆ ಮೂರು ಅಥವಾ ನಾಲ್ಕೇ ದಿನಕ್ಕೆಬಿಡುಗಡೆ ಮಾಡುವುದಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿಅನುಮೋದನೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

ನಿತ್ಯ 50 ಸಾವಿರ ಮಂದಿ ಕೋವಿಡ್ ಪರೀಕ್ಷೆಗೆ ಸಿದ್ಧತೆ :

ಬೆಂಗಳೂರು: ನಗರದಲ್ಲಿ ಮುಂದಿನ ದಿನಗಳಲ್ಲಿ ನಿತ್ಯ 50 ಸಾವಿರ ಜನರನ್ನು ಕೋವಿಡ್  ಸೋಂಕು ಪರೀಕ್ಷೆಗೆ ಒಳಪಡಿಸಲು ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ಈ ಸಂಬಂಧ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉಳಿದ ನಗರಗಳಿಗಿಂತ ಹೆಚ್ಚು ಸೋಂಕು ಪರೀಕ್ಷೆ ಮಾಡಲಾಗುತ್ತಿದೆ. ಹೀಗಾಗಿ,ನಿತ್ಯಹೆಚ್ಚುಸೋಂಕುಪ್ರಕರಣಗಳು ದೃಢಪಡುತ್ತಿವೆ. ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸುವುದರಿಂದ ಸೋಂಕಿತರನ್ನು ಪ್ರತ್ಯೇಕಿಸಿ, ಉಳಿದವರಿಗೆ ಸೋಂಕು ಹಬ್ಬುವುದಕ್ಕೆ ಕಡಿವಾಣ ಹಾಕಬಹುದು. ಸೂಚ್ಯಾಂಕದ ಮಾದರಿಯಲ್ಲಿ ನಗರದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗಿ, ನಂತರದಲ್ಲಿ ಇಳಿಕೆ ಕಾಣಲಿದೆ. ಸೋಂಕು ದೃಢಪಡುವ ಪ್ರಕರಣಗಳ ಸಂಖ್ಯೆಯ 10ರಷ್ಟು ಹೆಚ್ಚು ಸೋಂಕು ಪರೀಕ್ಷೆ ಮಾಡಬೇಕು ಎಂಬ ನಿರ್ದೇಶನ ಇದೆ. ಈ ರೀತಿಮಾಡುವುದರಿಂದ ಸೋಂಕು ಪ್ರಮಾಣ ಇಳಿಕೆಯಾಗಲಿದೆ.ಕೋವಿಡ್‌ ಕೇರ್‌ ಸೆಂಟರ್‌ ಅವಶ್ಯವಿದ್ದರೆ ಹೆಚ್ಚಿಸಲಾಗುವುದು ಎಂದರು.

ವಿಶ್ಲೇಷಣೆಗೆ ಮತ್ತಷ್ಟು ಕಮಿಟಿ: ನಗರದಲ್ಲಿ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಡೆತ್‌ ಅನಾಲಿಸಸ್‌ (ಸೋಂಕಿನಿಂದ ಮೃತಪಟ್ಟ ಪ್ರಕರಣಗಳ ವಿಶ್ಲೇಷಣೆ)ಕಮಿಟಿ ರಚನೆ ಮಾಡಲಾಗಿದೆ. ಈ ಕಮಿಟಿ ವರದಿ ನೀಡಿದ ಆಧಾರದಮೇಲೆ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.