65 ವರ್ಷದಲ್ಲಾಗದ ಪ್ರಗತಿ 4 ವರ್ಷದಲ್ಲಿ


Team Udayavani, May 3, 2018, 11:50 AM IST

blore-3.jpg

ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಡಾ. ಅಶ್ವತ್ಥ್ ನಾರಾಯಣ್‌ ಪರವಾಗಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಬುಧವಾರ ಬಿರುಸಿನ ಪ್ರಚಾರ ನಡೆಸಿದರು.

ಬಿಜೆಪಿ ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿದ ಸಚಿವ ಸದಾನಂದ ಗೌಡ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತೂಮ್ಮೆ ಅಶ್ವತ್ಥ್ ನಾರಾಯಣ್‌ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಕಳೆದ 65 ವರ್ಷಗಳಲ್ಲಿ ಕಾಂಗ್ರೆಸ್‌ನಿಂದ ಸಾಧ್ಯವಾಗದ ಪ್ರಗತಿಯನ್ನು ನರೇಂದ್ರ ಮೋದಿ ಸರ್ಕಾರ ನಾಲ್ಕೇ ವರ್ಷಗಳಲ್ಲಿ ಸಾಧಿಸಿದೆ.
 
ದೇಶದ ಕಟ್ಟಕಡೆಯ ಗ್ರಾಮಕ್ಕೂ ವಿದ್ಯುತ್‌ ಬೆಳಕು ನೀಡಿದ್ದು, ಅಭಿವೃದ್ಧಿಗೆ ನಿಜ ಅರ್ಥ ಕೊಟ್ಟದ್ದೇ ಬಿಜೆಪಿ ಸರ್ಕಾರ. ಹೀಗಾಗಿ ಈ ಬಾರಿ ಬಿಜೆಪಿಯನ್ನು ಬೆಂಬಲಿಸುವಂತೆ ಕೋರಿದರು. ಮೈಸೂರು ಬೆಂಗಳೂರು ನಡುವೆ 2920 ಕೋಟಿ ರೂ. ಕೋಟಿ ವೆಚ್ಚದಲ್ಲಿ ಷಟ್ಪಥ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಶಂಕುಸ್ಥಾಪನೆಯಾಗಿದ್ದು ಕಾಮಗಾರಿಗೆ ಗುತ್ತಿಗೆಯನ್ನೂ ನೀಡಲಾಗಿದೆ. ಈ ಯೋಜನೆ ಯಿಂದ ಸಾಕಷ್ಟು ಪ್ರಮಾಣದಲ್ಲಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗಲಿವೆ. ಜತೆಗೆ ಪ್ರಮುಖ ನಗರಗಳಲ್ಲಿ ಮೇಲ್ಸೇತುವೆ ನಿರ್ಮಾಣದ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದೆ ಎಂದು ಸಚಿವರು ತಿಳಿಸಿದರು.

ಶಾಸಕ ಅಶ್ವತ್ಥ್ ನಾರಾಯಣ್‌ ಮಾತನಾಡಿ, ಕೇಂದ್ರ ಸರ್ಕಾರ ಅವಧಿಗೂ ಮುನ್ನವೇ ಯೋಜನೆಗಳನ್ನು ಪೂರ್ಣಗೊಳಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಕಾಮ ಗಾರಿ ಪೂರ್ಣಗೊಳ್ಳುವ ಮೊದಲು ಉದ್ಘಾಟನೆ ಮಾಡಿದ್ದನ್ನೇ ಸಾಧನೆ ಎಂದುಕೊಂಡಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಉತ್ತಮವಾಗಿದ್ದ ರಸ್ತೆಗಳನ್ನೂ ಅಗೆದು ಕಾಂಕ್ರಿಟ್‌ ಹಾಕಲಾಗಿದ್ದು, ಗುತ್ತಿಗೆ ಯೋಜನೆಗಳನ್ನು ಹಂಚುವಲ್ಲಿ ಪಡೆದ ಕಮಿಷನ್‌ ಹಣವನ್ನೇ ಚುನಾವಣೆಯಲ್ಲಿ ಖರ್ಚುಮಾಡುತ್ತಿದೆ
ಎಂದು ಆರೋಪಿಸಿದರು.

ಕ್ಷೇತ್ರದಾದ್ಯಂತ ಮತದಾರರ ಬೆಂಬಲ ಅಭೂತ ಪೂರ್ವವಾಗಿದ್ದು, ಈ ಬಾರಿ ಗೆಲುವು ಸಾಧಿಸಿದರೆ ಬೆಂಗಳೂರಿನ ಶುಚಿತ್ವಕ್ಕೆ ಮಹತ್ವ ಕೊಡುವುದಲ್ಲದೆ ಟ್ರಾಫಿಕ್‌ ಸಮಸ್ಯೆಗೆ ಪರಿಹಾರ ಕಾಣಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.