ಬೆಂಗಳೂರು: ನಾಲ್ವರು ಪಾದಚಾರಿಗಳಿಗೆ ಗುದ್ದಿದ ಕಾರು; ಓರ್ವ ಬಲಿ
ಅತೀವೇಗದಲ್ಲಿ ಬಂದ ಕಾರು ಢಿಕ್ಕಿಯಾಗಿ ಮೂರು ವಾಹನಗಳೂ ಜಖಂ
Team Udayavani, May 20, 2022, 4:06 PM IST
ಬೆಂಗಳೂರು : ನಗರದ ಕತ್ರಿಗುಪ್ಪೆ ಜಂಕ್ಷನ್ ಬಳಿ ಅತೀವೇಗದಲ್ಲಿ ಬಂದ ಕಾರೊಂದು ಪಾದಚಾರಿಗಳಿಗೆ ಗುದ್ದಿದ ಪರಿಣಾಮ ಓರ್ವ ಸಾವನ್ನಪ್ಪಿ , ಮೂವರು ಗಂಭೀರವಾಗಿ ಗಾಯಗೊಂಡ ಅವಘಡ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಅಪಘಾತಕ್ಕೀಡಾದ ಪಾದಚಾರಿ ಸುರೇಶ್ (28) ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಳಿದ ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.
ಬೆಳಗ್ಗೆ 7.20 ರ ವೇಳೆ ಕತ್ರಿಗುಪ್ಪೆ ಜಂಕ್ಷನ್ ಕಡೆಯಿಂದ ಇಟ್ಟಮಡು ಜಂಕ್ಷನ್ ಕಡೆಗೆ ಮುಕೇಶ್ ಎಂಬಾತ ಕಾರನ್ನು ವೇಗವಾಗಿ ಮತ್ತು ನಿರ್ಲಕ್ಷತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಚಿನ್, ಶೀವರಾಜು, ಸುರೇಶ್ ಮತ್ತು ಶೈಲೇಂದ್ರ ಎಂಬ 4 ಜನ ಪಾದಚಾರಿಗಳಿಗೆ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ನಾಲ್ವರೂ ಗಾಳಿಯಲ್ಲಿ ಹಾರಿ ರಸ್ತೆಗೆ ಅಪ್ಪಳಿಸಿದ್ದಾರೆ.
ಬಳಿಕ ಕಾರು ಫುಟ್ಪಾತ್ ಮೇಲೆ ನಿಂತಿದ್ದ ಒಂದು ಕಾರು ಮತ್ತು ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿಯಾಗಿದ್ದು ವಾಹನಗಳು ಜಂಖಗೊಂಡಿವೆ.
ಕಾರು ಚಾಲಕ ಮುಕೇಶ್ ನನ್ನ ಪಶ್ಚಿಮ ಸಂಚಾರಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ