ಪಾದರಾಯನಪುರ ಗಲಭೆ: 375 ಮಂದಿ ವಿರುದ್ಧದ ಪ್ರಕರಣ ರದ್ದು


Team Udayavani, Mar 20, 2024, 9:59 AM IST

ಪಾದರಾಯನಪುರ ಗಲಭೆ: 375 ಮಂದಿ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಕೋವಿಡ್‌-19 ಲಾಕ್‌ಡೌನ್‌ ಸಮಯ ದಲ್ಲಿ 2020ರ ಏಪ್ರಿಲ್‌ 19ರಂದು ನಗರದ ಪಾದರಾಯ ನಪುರದಲ್ಲಿ ನಡೆದ ಗಲಭೆ ಸಂಬಂಧ 375 ಮಂದಿ ವಿರುದ್ಧದ ಪ್ರಕರಣವನ್ನು ಪಾದರಾಯನಪುರ ಗಲಭೆ: 375 ಮಂದಿ ವಿರುದ್ಧದ ಪ್ರಕರಣ ರದ್ದುಗೊಳಿಸಿದೆ.

ಪ್ರಕರಣ ರದ್ದು ಕೋರಿ ನವಾಜ್‌ ಪಾಷಾ ಮತ್ತಿತರರ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾ.ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಅಕ್ರಮವಾಗಿ ಗುಂಪು ಸೇರಿ ಪಾಲಿಕೆ ಅ ಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದಲ್ಲಿ ದಾಖಲಿಸಲಾಗಿದ್ದ ಪ್ರಕರಣಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಸಾಕ್ಷಿಗಳ ಹೇಳಿಕೆಗಳನ್ನು ಒಂದೇ ರೀತಿಯಲ್ಲಿ ದಾಖಲಿ ಸಲಾಗಿದೆ. ಪೊಲೀಸರು 120 ಕ್ಕೂ ಅಧಿಕ ಮಂದಿ ವಿರುದ್ಧ ಕೇಸುಗಳನ್ನು ದಾಖಲಿಸಿದ್ದರೂ ಗಲಭೆ ನಡೆದಿದೆ ಎನ್ನಲಾದ ಸಮಯದಲ್ಲಿ ಯಾವುದೇ ಆಸ್ತಿ ಪಾಸ್ತಿ ನಷ್ಟವಾಗಿಲ್ಲ, ಪೊಲೀಸರು ಯಾವುದೇ ವಸ್ತು ವಶಪಡಿಸಿಕೊಂಡಿಲ್ಲ. ಅಲ್ಲದೆ, ಭಾರತೀಯ ದಂಡ ಸಂಹಿತೆ ಸೆಕ್ಷನ್‌ 172ರಿಂದ 188 ರವರೆಗೆ ಮತ್ತು ವಿಪತ್ತು ನಿರ್ವಹಣಾ ಕಾಯಿದೆ ಉಲ್ಲಂಘಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಸಕ್ಷಮ ಪ್ರಾಧಿಕಾರ ದೂರು ದಾಖಲಿಸಿಲ್ಲ. ಜತೆಗೆ ಬಿಬಿಎಂಪಿ ಅಧಿಕಾರಿಗಳು ಪಾದರಾಯನಪುರಕ್ಕೆ ಸೀಲ್‌ಡೌನ್‌ ಮಾಡಲು ಹೋದಾಗ 51 ಜನರಿಗೆ ಕೋವಿಡ್‌ ಸೋಂಕು ದೃಢ ಪಟ್ಟಿತ್ತು ಎಂದು ಹೇಳುತ್ತಾರೆ. ಆದರೆ, ಆ ಯಾರಿಗೆ ಸೋಂಕು ತಗುಲಿತ್ತು ಎಂಬ ಬಗ್ಗೆ ಯಾವುದೇ ವಿವರ ಗಳನ್ನು ಆರೋಪಪಟ್ಟಿಯಲ್ಲಿ ದಾಖಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಬಿಬಿಎಂಪಿ ಅಧಿಕಾರಿಗಳು ಆ ಪ್ರದೇಶವನ್ನು ಸೀಲ್‌ಡೌನ್‌ ಮಾಡಲು ಮುಂದಾದಾಗ ಅಲ್ಲಿನ ಜನರು ಹಾಲು, ತರಕಾರಿ ಮತ್ತಿತರ ಅಗತ್ಯ ವಸ್ತುಗಳನ್ನು ತರಲು ತೊಂದರೆ ಆಗಬಹುದೆಂದು ಪ್ರತಿರೋಧ ಮಾಡಿರಬ ಹುದು, ಆಗ ಒಂದು ರೀತಿಯ ಬಿಗುವಿನ ವಾತಾವರಣ ನಿರ್ಮಾಣವಾಗಿರಬಹುದು. ಜತೆಗೆ ಮ್ಯಾಜಿಸ್ಟ್ರೇಟ್‌ ಐಪಿಸಿ ಸೆಕ್ಷನ್‌ 188ರಡಿ ಕಾಗ್ನಿಜೆನ್ಸ್‌ ತೆಗೆದುಕೊಳ್ಳಲು ನಿರ್ಬಂಧವಿದೆ. ಆದರೂ, ಕಾಗ್ನಿಜೆನ್ಸ್‌ ತೆಗೆದುಕೊಂಡು ಮುಂದುವರಿದಿರುವುದು ಸರಿಯಲ್ಲ, ಹಾಗಾಗಿ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸ ಲಾಗುವುದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಪ್ರಾಸಿಕ್ಯೂಷನ್‌ ಪರ ವಾದ ಮಂಡಿಸಿದ್ದ ಹೆಚ್ಚುವರಿ ಎಸ್‌ಪಿಪಿ ಬಿ.ಎನ್‌.ಜಗದೀಶ್‌, 2020ರ ಏ.19ರಂದು ಸಂಜೆ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಕೋವಿಡ್‌ ಸೋಂಕು ತಗುಲಿದ್ದ 58 ಮಂದಿಯನ್ನು ವಶಕ್ಕೆ ತೆಗೆದಕೊಳ್ಳಲು ಪಾದರಾಯನಪುರದಲ್ಲಿ ಹೋಗಿದ್ದಾಗ ಅಲ್ಲಿ ಅಕ್ರಮವಾಗಿ ಗುಂಪು ಸೇರಿದ್ದವರು ಕೈಯಲ್ಲಿ ಚಾಕು, ದೊಣ್ಣೆ ಮತ್ತು ರಾಡ್‌ಗಳನ್ನು ಹಿಡಿದುಕೊಂಡು ಆಶಾ ಕಾರ್ಯಕರ್ತರು, ವೈದ್ಯಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಆರೋಪಿಗಳು ಚೇರು, ಟೇಬಲ್‌ಗ‌ಳನ್ನು ಒಡೆದು ಟೆಂಟ್‌ ಕಿತ್ತು ಹಾಕಿ ಅಕ್ಕ ಪಕ್ಕದ ರಸ್ತೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟು ಮಾಡಿದ್ದರು. ಹಾಗಾಗಿ ಪ್ರಕರಣ ದಾಖಲಿಸಲಾಗಿತ್ತು ಎಂದು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅರ್ಜಿದಾರರ ಪರ ವಕೀಲರು, ಅರ್ಜಿದಾರರಿಗೂ ಪ್ರಕರಣಕ್ಕೂ ಸಂಬಂಧವಿಲ್ಲ. ಅವರ ಮನೆಗಳು ಬೇರೆ ಕಡೆ ಇವೆ. ನಿಜ ವಾದ ಆರೋಪಿಗಳನ್ನು ಗುರುತಿಸದೆ ಪೊಲೀಸರು ಸಿಕ್ಕ ಸಿಕ್ಕವರ ಮೇಲೆ ಕೇಸ್‌ ಹಾಕಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದಾಗ ಅವರಲ್ಲಿ ಸೋಂಕಿತರ ಪಟ್ಟಿಯೇ ಇರಲಿಲ್ಲ, ಗಲಭೆ ನಡೆದಿದೆ ಎನ್ನಲಾಗಿದೆ. ಆದರೆ, ಯಾರೊಬ್ಬರಿಗೂ ಗಾಯವಾಗಿಲ್ಲ. ಹಾಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.