ಮೇಕೆದಾಟು ಪಾದಯಾತ್ರೆ; ಡಿಕೆಶಿ ಕನಕಪುರ ನಿವಾಸದಲ್ಲಿ ತಂತ್ರಗಾರಿಕೆ ಸಭೆ
ಪಾದಯಾತ್ರೆ ಕೈ ಬಿಡಿ ಎಂದು ಸರಕಾರ ಪದೇ ಪದೇ ಆಗ್ರಹಿಸುತ್ತಿದೆ.
Team Udayavani, Jan 8, 2022, 12:05 PM IST
ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಮಧ್ಯಾಹ್ನ ೩ ಗಂಟೆಗೆ ಮಹತ್ವದ ತಂತ್ರಗಾರಿಕೆ ಸಭೆ ನಡೆಯಲಿದೆ.
ಕನಕಪುರದಲ್ಲಿರುವ ಶಿವಕುಮಾರ್ ನಿವಾಸದಲ್ಲಿ ನಡೆಯುವ ಈ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗ್ರೆಸ್ನ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಪಾದಯಾತ್ರೆ ಕೈ ಬಿಡಿ ಎಂದು ಸರಕಾರ ಪದೇ ಪದೇ ಆಗ್ರಹಿಸುತ್ತಿದೆ. ಜತೆಗೆ ವಾರಾಂತ್ಯದ ಲಾಕ್ಡೌನ್ ಜಾರಿಗೆ ತಂದಿದೆ. ಪಾದಯಾತ್ರೆ ಸಾಗುವ ಕನಕಪುರ-ಸಂಗಮ ಮಾರ್ಗದಲ್ಲಿ ಭಾರಿ ಬಂದೋಬಸ್ತ್ ಜಾರಿಯ ಜತೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಅನುಷ್ಠಾನ ಮಾಡುವಂತೆ ಸೂಚಿಸಿದೆ. ಕಾಂಗ್ರೆಸ್ನ ಒಂದು ಮೂಲಗಳ ಪ್ರಕಾರ ಪಾದಯಾತ್ರೆ ಆರಂಭಕ್ಕೆ ಮುನ್ನವೇ ಕಾಂಗ್ರೆಸ್ ನಾಯಕರ ಬಂಧನ ಸಾಧ್ಯತೆಯೂ ಇದೆ. ಇದೆಲ್ಲದರ ಹಿನ್ನೆಲೆಯಲ್ಲಿ ಮುಂದಿನ ನಡೆ ನಿರ್ಧರಿಸುವ ಬಗ್ಗೆ ಸಭೆ ನಡೆಸಲಾಗುತ್ತಿದೆ.
ಕೆಪಿಸಿಸಿ ಮೂಲಗಳ ಪ್ರಕಾರ ಯಾವುದೇ ಸಂದರ್ಭ ಎದುರಾದರೂ ಪಾದಯಾತ್ರೆ ನಿಲ್ಲಿಸದೇ ಇರಲು ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಒಂದೊಮ್ಮೆ ಬಂಧನವಾದರೆ ಎಲ್ಲಿ ಬಂಧಿಸಿದ್ದಾರೋ ಅಲ್ಲಿಂದಲೇ ಮರುದಿನ ಪಾದಯಾತ್ರೆ ಆರಂಭಿಸುವುದಕ್ಕೆ ಪ್ರತ್ಯೇಕ ತಂಡ ರಚನೆ ಮಾಡಲಾಗುತ್ತಿದೆ. ಹೀಗಾಗಿ ಮಧ್ಯಾಹ್ನ 3 ಗಂಟೆಯಿಂದ ಆರಂಭವಾಗುವ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ