ಮಂಜುಳಾ ನಾಯ್ಡು ವಿರುದ್ಧ ಪದ್ಮಾವತಿ ದೂರು
Team Udayavani, Jun 3, 2018, 12:33 PM IST
ಬೆಂಗಳೂರು: ರಾಜಾಜಿನಗರ ಕ್ಷೇತ್ರದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜುಳಾ ನಾಯ್ಡು, ಪಕ್ಷ ವಿರೋಧಿ ಚುಟುವಟಿಕೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಜಿ. ಪದ್ಮಾವತಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ಗೆ ದೂರು ನೀಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಮಂಜುಳಾ ನಾಯ್ಡು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರೊಂದಿಗೆ ಸೇರಿಕೊಂಡು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು ನನ್ನ ಸೋಲಿಗೆ ಕಾರಣರಾಗಿದ್ದಾರೆ. ಅವರೊಂದಿಗೆ ನಗರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ರಘುವೀರ್ ಗೌಡ ಸ್ವಜಾತಿ ಪ್ರೇಮದಿಂದ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ಅಲ್ಲದೇ ಬ್ಲಾಕ್ ಅಧ್ಯಕ್ಷ ಸುಧಾಕರ್ ಅವರ ವಿರುದ್ದವೂ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.