ಪಾಕ್‌ ದಂಪತಿ ಗಡಿಪಾರಿಗೆ ಮೇ 5ರ ಗಡುವು


Team Udayavani, Apr 27, 2019, 5:00 AM IST

highcourt3

ಬೆಂಗಳೂರು: “ಬೇರೆ ದೇಶದ ಅಪರಾಧಿಗಳು ನಮ್ಮ ನೆಲದಲ್ಲಿರಲು ಯೋಗ್ಯರಲ್ಲ. ಅವರಿಗಾಗಿ ಭಾರತದ ಪ್ರಜೆಗಳ ತೆರಿಗೆ ಹಣ ವೆಚ್ಚ ಮಾಡುವುದು ಸರಿಯಲ್ಲ. ಮೇಲಾಗಿ ಇದು ದೇಶದ ಭದ್ರತೆಗೆ ಅಪಾಯ.

ಆದ್ದರಿಂದ ಮದುವೆಯಾಗಲು ಭಾರತದ ಗಡಿ ಪ್ರವೇಶಿಸಿ ಬೆಂಗಳೂರಿಗೆ ಬಂದು ಇಲ್ಲಿಯೇ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನದ ದಂಪತಿ ಕಾಸಿಫ್‌ ಶಂಷುದ್ದೀನ್‌ ಮತ್ತು ಕಿರಣ್‌ ಗುಲಾಮ್‌ ಆಲಿ ಅವರನ್ನು ಮೇ 5ರೊಳಗೆ ಪಾಕಿಸ್ತಾನಕ್ಕೆ ಗಡಿಪಾರು ಮಾಡಲೇಬೇಕು,’ ಎಂದು ಹೈಕೋರ್ಟ್‌ ಶುಕ್ರವಾರ ಮಹತ್ವದ ಆದೇಶ ನೀಡಿದೆ.

ಶಿಕ್ಷೆ ಅವಧಿ ಕಡಿತಗೊಳಿಸುವಂತೆ ಕೋರಿ ಪಾಕ್‌ ಮೂಲದ ದಂಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯಪೀಠ, ಶುಕ್ರವಾರ ಕೇಂದ್ರ ಗೃಹ ಸಚಿವಾಲಯ ಮತ್ತು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್‌ಆರ್‌ಆರ್‌ ಓ) ಆದೇಶಿಸಿದೆ. ಅಲ್ಲದೇ, ದಂಪತಿಯನ್ನು ಗಡಿಪಾರು ಮಾಡಲು ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿತು.

ಇದೇ ವೇಳೆ ದಂಪತಿಗೆ ನಗರದ ಎರಡು ಅಧೀನ ನ್ಯಾಯಾಲಯಗಳು ವಿಧಿಸಿದ್ದ ತಲಾ 21 ತಿಂಗಳ ಜೈಲು ಶಿಕ್ಷೆ ಏಕಕಾಲದಲ್ಲಿ ಜಾರಿಗೆ ತರುವಂತೆ ಮತ್ತು ಅಧೀನ ನ್ಯಾಯಾಲಯ ವಿಧಿಸಿದ್ದ ದಂಡದ ಮೊತ್ತವನ್ನು ಮನ್ನಾ ಮಾಡಿ ನ್ಯಾಯಪೀಠ ಆದೇಶಿಸಿತು. ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಪಾಕಿಸ್ತಾನ ರಾಯಭಾರ ಕಚೇರಿ ಮೂಲಕ ದಂಪತಿಯನ್ನು ಮೇ 5ರೊಳಗೆ ಅವರ ದೇಶಕ್ಕೆ ಹಸ್ತಾಂತರ ಮಾಡುವಂತೆ ನ್ಯಾಯಪೀಠ ಆದೇಶದಲ್ಲಿ ತಿಳಿಸಿತು.

ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, ದಂಪತಿ ತಾವು ಪಾಕಿಸ್ತಾನದ ಪ್ರಜೆಗಳು ಎಂದು ಹೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಪಾಕಿಸ್ತಾನ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಪರಿಶೀಲಿಸಿ ಅವರ ಪೌರತ್ವ ಮತ್ತು ರಾಷ್ಟ್ರೀಯತೆಯನ್ನು ಖಚಿತಪಡಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ದಂಪತಿ ಬಗ್ಗೆ ಮಾಹಿತಿಯನ್ನು ಪಾಕಿಸ್ತಾನ ರಾಯಭಾರ ಕಚೇರಿಗೆ ರವಾನಿಸಲಾಗಿದೆ. ಅವರ ಉತ್ತರಕ್ಕಾಗಿ ಕಾಯುತ್ತಿದ್ದೇವೆ. ಇದೊಂದು ಗಂಭೀರ ವಿಚಾರ ಆಗಿರುವುದರಿಂದ ಒಂದಿಷ್ಟು ಕಾಲಾವಕಾಶಬೇಕು ಎಂದು ನ್ಯಾಯಪೀಠವನ್ನು ಕೋರಿದರು.

24 ಗಂಟೆಯಲ್ಲಿ ವಾಘಾ ಗಡಿಗೆ ಬಿಟ್ಟು ಬನ್ನಿ: ಕೇಂದ್ರ ಸರ್ಕಾರದ ಪರ ವಕೀಲರ ವಾದಕ್ಕೆ ಕೋಪಗೊಂಡ ನ್ಯಾಯಪೀಠ, ಯಾವುದೇ ಕಾರಣಕ್ಕೂ ಸಮಯ ಕೊಡುವುದಿಲ್ಲ. ದಂಪತಿಗಳೇ ತಾವು ಪಾಕಿಸ್ತಾನದ ಪ್ರಜೆಗಳು ಎಂದು ಹೇಳಿಕೊಂಡಿರುವಾಗ ಪರಿಶೀಲನೆ ಎಲ್ಲಿಂದ ಬಂತು. ಅವರನ್ನು ನಮ್ಮ ದೇಶದಲ್ಲಿ ಇಟ್ಟುಕೊಂಡು ಕಾಲ ದೂಡುತ್ತಾ ಏಕೆ ಕೂತಿದ್ದೀರಿ.

ಅವರಿಗಾಗಿ ನಮ್ಮ ಜನರ ತೆರಿಗೆ ದುಡ್ಡು ಏಕೆ ಖರ್ಚು ಮಾಡಬೇಕು. ಅವರು ವೀಸಾ ಇಲ್ಲದೇ ಇಲ್ಲಿಗೆ ಬಂದಿದ್ದು ಹೇಗೆ, ಇಲ್ಲಿಯೇ ಅಕ್ರಮವಾಗಿ ನೆಲೆಸಿದ್ದು ಹೇಗೆ. ಇತರೆ ದೇಶದ ಕ್ರಿಮಿನಲ್‌ಗ‌ಳು ನಮ್ಮ ನೆಲದಲ್ಲಿ ವಾಸ ಮಾಡಲು ಯೋಗ್ಯರಲ್ಲ 24 ಗಂಟೆಯಲ್ಲಿ ಅವರನ್ನು ವಾಘಾ ಗಡಿಗೆ ಬಿಟ್ಟು ಬನ್ನಿ ಎಂದು ಕಟು ಮಾತಿನಲ್ಲಿ ಹೇಳಿತು. ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಮನವಿ ಒಪ್ಪಿದ ನ್ಯಾಯಪೀಠ ಮೇ 5ರೊಳಗೆ ಗಡಿಪಾರು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಗಡುವು ನೀಡಿತು.

ಈ ಮಧ್ಯೆ ದಂಪತಿ ಕುರಿತ ಸಂಪೂರ್ಣ ಮಾಹಿತಿ ಹಾಗೂ ಅವರ ಪಾಸ್‌ಪೋರ್ಟ್‌ಗಳನ್ನು ರಾಜ್ಯ ಪೊಲೀಸರು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ಸರ್ಕಾರಿ ಪ್ಲೀಡರ್‌ ರಾಚಯ್ಯ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.