ಕನ್ನಡಕ್ಕಾಗಿ ಎಂಥವರನ್ನೂ ಎದುರಿಸುವ ಪಾಪು


Team Udayavani, Jan 12, 2019, 7:09 AM IST

kannadakagi.jpg

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಮಾಜಿ ಸಂಸದ ಪಾಟೀಲ ಪುಟ್ಟಪ್ಪ(ಪಾಪು)ಅವರ ಜನ್ಮ ಶತಮಾನೋತ್ಸವವು ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆಯಿತು.

ಬಸವ ಸಮಿತಿ, ಡಾ.ನಾಡೋಜ ಪಾಟೀಲ ಪುಟ್ಟಪ್ಪ ಜನ್ಮಶತಮಾನೋತ್ಸವ ಸಮಿತಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿವತಿಯಿಂದ ನಡೆದ ಕಾರ್ಯಕ್ರಮದಲ್ಲಿ  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಅವರು ಮುಖ್ಯಮಂತ್ರಿ ಅವರ ಲಿಖೀತ ಸಂದೇಶ ಸಭೆಗೆ ಓದಿ ಹೇಳಿದರು.

ಪಾಪು ಅವರು ಹುಡುಗನಾಗಿದ್ದಾಗ ಮಹಾತ್ಮಗಾಂಧಿ ಅವರು ಬೆಳಗಾವಿಯ ಬ್ಯಾಡಗಿಗೆ ಭೇಟಿ ನೀಡಿದ್ದರು. ಆ ವೇಳೆ ಗಾಂಧೀಜಿ ಅವರು ಪಾಪು ಅವರ ಬೆನ್ನು ಸವರಿದ್ದರು. ಅಂದಿನಿಂದ ಪಾಪು ಅವರು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಂಡರು. ತಾನು ನಂಬಿದ ತತ್ವ ಸಿದ್ಧಾಂತದ ಅನುಸರಣೆಯಲ್ಲಿ ಎಂದೂ ರಾಜಿಯಾಗಿಲ್ಲ. ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಪಾಪು ಅವರು ಮಾಡಿದ ಕೆಲಸದಿಂದಲೇ ಇವತ್ತು ಆಡಳಿತದಲ್ಲಿ ಕನ್ನಡ ಗಟ್ಟಿಯಾಗಿದೆ ಎಂದು ತಮ್ಮ ಸಂದೇಶದಲ್ಲಿ ಉಲ್ಲೇಖೀಸಿದ್ದರು.

ವಿಧಾನ ಪರಿಷತ್‌ ಮಾಜಿ ಸಭಾಪತಿ ಬಿ.ಎಲ್‌.ಶಂಕರ್‌ ಮಾತನಾಡಿ, ಜಿಲ್ಲೆಯಲ್ಲಿ ಸಮುದಾಯ ಭವನಕ್ಕೆ ಮೀಸಲಿಟ್ಟ ಹಣದಲ್ಲಿ ಜಿಲ್ಲೆಗೊಂದರಂತೆ ವಸ್ತುಸಂಗ್ರಹಾಲಯ ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡಿದರು. ಜಿಲ್ಲೆ ವ್ಯಾಪ್ತಿಯಲ್ಲಿ ಸಾಹಿತ್ಯ, ಕೃಷಿ, ಸ್ವಾತಂತ್ರ ಹೋರಾಟ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರ ಜೀವನ ಚರಿತ್ರೆಯನ್ನು ವಸ್ತುಸಂಗ್ರಹಾಲಯದ ಮೂಲಕ ಪ್ರಚಾರ ಪಡಿಸಬೇಕು. ಸಾಧಕರ ಜನ್ಮದಿನವನ್ನು ಒಟ್ಟಿಗೆ ಆಚರಿಸುವಂತೆ ಆಗಬೇಕು ಎಂದು ಹೇಳಿದರು.

ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ, ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಜನ್ಮಶತಮಾನೋತ್ಸವ ಸಮಿತಿಯ ಸಂಚಾಲಕ ಲೋಹಿತ್‌ ನಾಯ್ಕರ್‌, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ಹೂಡೇ ಪಿ.ಕೃಷ್ಣ, ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್‌, ಮಾಜಿ ಸಂಸದ ಎಚ್‌.ಹನುಮಂತಪ್ಪ, ವಿಶ್ರಾಂತ ಕುಲಪತಿ ಡಾ.ಮಹದೇವಪ್ಪ, ಶಿಕ್ಷಣ ತಜ್ಞ ಕೆ.ಇ.ರಾಧಾಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

ಜ.14ಕ್ಕೆ ಪಾಪು ಜನ್ಮದಿನ: ಪಾಪು ಅವರು ವಿದ್ಯಾರ್ಥಿ ಆಗಿದ್ದಾಗಲೇ ಹೋರಾಟದಲ್ಲಿ ತೊಡಗಿಸಿಕೊಂಡವರು, ಪ್ರಪಂಚ ಮತ್ತು ವಿಶ್ವವಾಣಿ ಎಂಬ ಪತ್ರಿಕೆ ನಡೆಸಿದವರು, ಧಾರವಾಡ ವಿದ್ಯಾವರ್ಧಕ ಸಂಘಕ್ಕೆ ದೀಘಕಾಲ ಅಧ್ಯಕ್ಷರಾಗಿದ್ದರು. ಜ.14ರಂದು ಅವರಿಗೆ ನೂರು ವರ್ಷ ತುಂಬಲಿದೆ. ಇದರ ಅಂಗವಾಗಿ ಕಾಸರಗೋಡು, ದೆಹಲಿ, ಧಾರವಾಡ ಸೇರಿ ವಿವಿಧೆಡೆ ಜನ್ಮಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪಾಪು ವ್ಯಕ್ತಿ, ಶಕ್ತಿ ಎಂಬ ಆತ್ಮಚರಿತ್ರೆ ಬಿಡುಗಡೆ ಮಾಡಲಾಗುತ್ತಿದೆ. ಆರು ಕಡೆ ವಿಚಾರ ಸಂಕಿರಣಗಳು ನಡೆಯಲಿದೆ ಎಂದು ಜನ್ಮಶತಮಾನೋತ್ಸವ ಸಮಿತಿಯ ಸಂಚಾಲಕ ಲೋಹಿತ್‌ ನಾಯ್ಕರ್‌ ಮಾಹಿತಿ ನೀಡಿದರು.

ನಾನೊಬ್ಬ ಗಾಂಧಿವಾದಿ, ಗಾಂಧೀಜಿಯವರ ದರ್ಶನದ ನಂತರ ಖಾದಿ ಬಿಟ್ಟು ಬೇರೆ ಬಟ್ಟೆಯನ್ನೇ ತೊಟ್ಟಿಲ್ಲ. ಅಮೆರಿಕಾಕ್ಕೆ  ಹೋದಾಗ ಗಾಂಧಿ ಟೋಪಿ ಧರಿಸಿದ್ದರಿಂದ ಅಲ್ಲಿನವರು ಗಾಂಧಿಯವರ ನಾಡಿನಿಂದ ಬಂದವರು ಎಂದು ಗೌರವಿಸಿದ್ದರು. ನಮ್ಮ ಗುರುಗಳಾದ ಗಂಗಾಧರ ಸವದತ್ತಿಯವರ ಮಾರ್ಗದರ್ಶನವೂ ನನ್ನ ಸಾಧನೆಯ ಹಿಂದಿದೆ 
-ಪಾಟೀಲ ಪುಟ್ಟಪ್ಪ, ಮಾಜಿ ಸಂಸದ 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.