ಕುಮಾರಸ್ವಾಮಿ ಬೆಂಬಲಕ್ಕೆ ನಿಂತ ಪರಮೇಶ್ವರ್‌


Team Udayavani, Jun 18, 2018, 6:00 AM IST

parameshwara-700.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಜೆಟ್‌ ಮಂಡನೆ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಿನ್ನ ಹೇಳಿಕೆ ನೀಡಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಹೊಸ ಸರ್ಕಾರ ಬಂದಾಗ ಬಜೆಟ್‌ ಮಂಡನೆ ಸಹಜ ಎನ್ನುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಜತೆಗೆ ಇನ್ನು ಮುಂದೆ ಸಮ್ಮಿಶ್ರ ಸರ್ಕಾರದ ಆಡಳಿತಾವಧಿ, ಕಾರ್ಯವೈಖರಿ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಸೂಚನೆ ನೀಡುವ ಮೂಲಕ ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಮಾಧ್ಯಮಗಳಿಂದ ಅಂತರ ಕಾಯ್ದುಕೊಳ್ಳಬೇಕೆಂಬ ಸಂದೇಶ ರವಾನಿಸಿದ್ದಾರೆ.

ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಭಾನುವಾರ ತಮ್ಮನ್ನು ಭೇಟಿಯಾದ ಸಚಿವ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸರ್ಕಾರ ರಚನೆಯಾದಾಗ ಬಜೆಟ್‌ ಮಂಡನೆ ಸಹಜ. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸದ ಹೊರತು ಬಜೆಟ್‌ ಮಂಡಿಸಲು ಸಾಧ್ಯವಿಲ್ಲ. 

ಬಜೆಟ್‌ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಜೆಟ್‌ ಕುರಿತು ಸಿದ್ಧತೆ ನಡೆಸುತ್ತಿದ್ದರೆ, ಹೊಸ ಬಜೆಟ್‌ ಬೇಡ. ಹಳೆಯ ಬಜೆಟ್‌ ಮುಂದುವರಿಸಬೇಕು. ಹೊಸ ಕಾರ್ಯಕಕ್ರಮಗಳಿದ್ದರೆ ಪೂರಕ ಅಂದಾಜಿನಲ್ಲಿ ಸೇರಿಸಿ ಅನುಮೋದನೆ ಪಡೆಯಬೇಕು ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಹೊಸ ಸರ್ಕಾರ ರಚನೆಯಾದಾಗ ಹೊಸ ಕಾರ್ಯಕ್ರಮಗಳನ್ನು ಘೋಷಿಸಬೇಕಾಗುತ್ತದೆ. ಹೊಸ ಬಜೆಟ್‌ ಮಂಡಿಸಬೇಕೆ ಅಥವಾ ಪೂರಕ ಅಂದಾಜು ಮಂಡಿಸಿದರೆ ಸಾಕೆ ಎಂಬ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಜಾರಿ ಬಗ್ಗೆ ಒಂದು ಸಮಿತಿ ರಚಿಸಲಾಗಿದ್ದು, ಹತ್ತು ದಿನದಲ್ಲಿ ಸಮಿತಿ ವರದಿ ನೀಡಲಿದೆ. ಬಳಿಕ ಈ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಸರ್ಕಾರದ ಆಡಳಿತಾವಧಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ಯಾರೊಬ್ಬರೂ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಬಾರದು. ಸರ್ಕಾರದ ಬಗ್ಗೆ ಮುಖ್ಯಮಂತ್ರಿಗಳು ಇಲ್ಲವೇ ನಾನು ಅಥವಾ ಸಮನ್ವಯ ಸಮಿತಿ ಅಧ್ಯಕ್ಷರಷ್ಟೇ ಮಾತನಾಡಬೇಕು. ಉಳಿದವರು ಮಾತನಾಡಿದರೆ ಗೊಂದಲ ಉಂಟಾಗಲಿದೆ ಎನ್ನುವ ಮೂಲಕ ಬಹಿರಂಗ ಹೇಳಿಕೆ ನಿಲ್ಲಿಸಬೇಕು ಎಂದು ಪಕ್ಷದ ಪ್ರಮುಖರಿಗೆ ಪರೋಕ್ಷವಾಗಿ ಸೂಚಿಸಿದರು.

ಸಚಿವ ಡಿ.ಕೆ.ಶಿವಕುಮಾರ್‌ ಮಾತನಾಡಿ, ಪಕ್ಷದ ಹಲವು ವಿಚಾರ ಸೇರಿದಂತೆ ಮಾಧ್ಯಮ ಹೇಳಿಕೆಗಳ ಬಗ್ಗೆಯೂ ಪರಮೇಶ್ವರ್‌ ಅವರೊಂದಿಗೆ ಚರ್ಚಿಸಿದ್ದೇನೆ. ಪಕ್ಷದವರಿಗೆ ತಿಳಿಸದೆ ಯಾರೊಬ್ಬರೂ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಎಂದು ಸೂಚಿಸಲಾಗುವುದು. ಶೀಘ್ರವಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು. ಮುಖ್ಯಮಂತ್ರಿಗಳಿಗೆ ಅನಗತ್ಯವಾಗಿ ಮುಜುಗರ ತರುವ ಕೆಲಸ ಮಾಡಬಾರದು. ಒಗ್ಗಟ್ಟಿನಿಂದ ಮೈತ್ರಿ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಿದರು.

ಯಾರೊಬ್ಬರೂ ವಿವಾದ ಸೃಷ್ಟಿಗೆ ಆಸ್ಪದ ನೀಡಬಾರದು. ಟೀಕೆ ಮಾಡುವ ಪ್ರಶ್ನೆಯೂ ಇಲ್ಲ. ಸಲಹೆ ಕೊಡುವ ಮಾತು ಇಲ್ಲ. ಎಲ್ಲವನ್ನು ಪಕ್ಷದ ಅಧ್ಯಕ್ಷರು ಮತ್ತು ನಮ್ಮ ಬಳಿ ಚರ್ಚಿಸಬೇಕು. ಶಾಸಕಾಂಗ ಪಕ್ಷದ ನಾಯಕರು ಹಾಗೂ ಪಕ್ಷದ ಅಧ್ಯಕ್ಷರೊಂದಿಗೆ ಚರ್ಚಿಸಬೇಕು. ಒಳ್ಳೆಯ ಕಾರ್ಯಕ್ಕೆ ಯಾರೂ ಅಡ್ಡ ಬರಬಾರದು. ಜೆಡಿಎಸ್‌ ನಾಯಕರು ಕೂಡ ಬಹಿರಂಗ ಹೇಳಿಕೆ ನೀಡಬಾರದೆಂದು ಕೋರಲಾಗುವುದು ಎಂದು ಹೇಳಿದರು.

ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಯೋಜನೆಗಳನ್ನು ಜಾರಿಗೊಳಿಸಬೇಕು. ಜನರಿಗೆ ನೀಡಿರುವ ಭರವಸೆಗಳನ್ನು ಐದು ವರ್ಷದೊಳಗೆ ಈಡೇರಿಸದಿದ್ದರೆ ನಗೆಪಾಟಲಿಗೆ ಈಡಾಗುತ್ತೇವೆ. ಸರ್ಕಾರದ ಬಗ್ಗೆ ಜನರ ವಿಶ್ವಾಸ ಮೂಡಿಸುವ ರೀತಿಯಲ್ಲಿ ಕೆಲಸ ಮಾಡಬೇಕು. ಸಮ್ಮಿಶ್ರ ಸರ್ಕಾರವನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ರಾಹುಲ್‌ಗಾಂಧಿಯವರಿಗೆ ಭರವಸೆ ನೀಡಿದ್ದೇವೆ. ಅದರಂತೆ ಕಾರ್ಯ ನಿರ್ವಹಿಸುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.