ಕ್ಯಾನ್ಸರ್‌ ಪೀಡಿತ ತಂದೆ ತಾಯಿ ಚಿಕಿತ್ಸೆಗಾಗಿ ಕಳ್ಳತನ


Team Udayavani, Aug 31, 2017, 6:04 PM IST

Arrest.jpg

ಬೆಂಗಳೂರು: ಕ್ಯಾನ್ಸರ್‌ ಪೀಡಿತ ತಂದೆ ತಾಯಿಗೆ ಚಿಕಿತ್ಸೆ ಕೊಡಿಸಲೆಂದು ಕಳ್ಳತನ ಮಾಡುತ್ತಿದ್ದ ಯುವಕ ಮತ್ತು ಆತನಿಗೆ ನೆರವಾಗುತ್ತಿದ್ದ ವ್ಯಕ್ತಿ ಸೇರಿ ಇಬ್ಬರನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತ್ರಿಪುರಾ ಮೂಲದ, ಸದ್ಯ ಬೇಗೂರಿನ ನಿವಾಸಿ ಪರೇಶ್‌ಕುಮಾರ್‌ ಸಿನ್ಹಾ ಹಾಗೂ ಈತನ ಸ್ನೇಹಿತ ಒರಿಸ್ಸಾದ ಬಿಜಯ್‌ದಾಸ್‌ ಬಂಧಿತರು. ಇವರಿಂದ 25 ಲಕ್ಷ ರೂ. ಮೌಲ್ಯದ ಎಲೆಕ್ಟ್ರಾನಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಕ್ಷಿಣ ವಿಭಾಗದ
ಡಿಸಿಪಿ ಶರಣಪ್ಪ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪರೇಶ್‌ ಕುಮಾರ್‌ನ ತಂದೆ-ತಾಯಿ ಇಬ್ಬರೂ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗೆ ಹಣ ಹೊಂದಿಸಲು ಪರೇಶ್‌ ಕಳ್ಳತನಕ್ಕೆ ಇಳಿದಿದ್ದ. ಆತನಿಗೆ ಬಿಜಯದಾಸ್‌ ನೆರವಾಗುತ್ತಿದ್ದ. ಸಣ್ಣ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿದ್ದ ಪರೇಶ್‌ ಹೆಚ್ಚಿನ
ಹಣ ಸಂಪಾದನೆಗೆ ಕೆಲಸ ಬಿಟ್ಟು ಬೆಂಗಳೂರಿಗೆ ಬಂದು ಕಳ್ಳತನವನ್ನು ವೃತ್ತಿಯನ್ನಾಗಿಸಿಕೊಂಡಿದ್ದ.

 ತಾತ್ಕಾಲಿಕವಾಗಿ ಭದ್ರತಾ ಸಿಬ್ಬಂದಿಯಾಗಿ ಕೆಲಸಕ್ಕೆ ಸೇರಿದ್ದ ಈತ, ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ವಸ್ತುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ. ಎಲೆಕ್ಟ್ರಾನಿಕ್‌ ವಸ್ತುಗಳನ್ನು ಕದಿಯುವ ಸಲುವಾಗಿಯೇ ಸಾಫ್ಟ್‌ವೇರ್‌ ಕಂಪನಿಗಳಲ್ಲಿ
ಸೆಕ್ಯೂರಿಟಿ ಗಾರ್ಡ್‌ ಕೆಲಸಕ್ಕೆ ಸೇರುತ್ತಿದ್ದ. ಹೀಗೆ ಜೆ.ಪಿ.ನಗರದ ರಿಲೇ-2 ಇಂಡಿಯಾ ಕಂಪನಿಯಲ್ಲಿ ನಡೆದಿದ್ದ 21 ಲ್ಯಾಪ್‌ಟಾಪ್‌, 15 ಟ್ಯಾಬ್‌, 2 ಮೊಬೈಲ್‌ ಕಳ್ಳತನ ಪ್ರಕರಣದಲ್ಲಿ ಆರೋಪಿಗಳ ಬೆನ್ನು ಬಿದ್ದಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಶರಣಪ್ಪ ವಿವರಿಸಿದ್ದಾರೆ.

ಕೆಲಸ ಮಾಡುವ ಕಂಪನಿಯ ಒಳ ಹೋಗುವ ಮತ್ತು ಹೊರಗೆ ಬರುವ ಮಾರ್ಗಗಳನ್ನು ತಿಳಿದುಕೊಂಡಿದ್ದ ಈತ ಎರಡು ಮೂರು ದಿನದಲ್ಲಿ ಕಳ್ಳತನ ಮುಗಿಸಿ ನಾಪತ್ತೆಯಾಗುತ್ತಿದ್ದ. ಈ ಬಗ್ಗೆ ಹಲವು ಕಡೆಗಳಿಂದ ದೂರುಗಳು ಬಂದಿತ್ತು.

ಇತ್ತೀಚೆಗೆ ಸೇರಿಕೊಂಡಿದ್ದ ಸೆಕ್ಯೂರಿಟಿ ಏಜೆನ್ಸಿ ಯಾವುದೇ ಗುರುತಿನ ಚೀಟಿ ನೀಡಿಲ್ಲ. ಅಲ್ಲದೇ ಈತ ಕರ್ತವ್ಯ ನಿರ್ವಹಿಸಿರುವ ಸ್ಥಳಗಳಲ್ಲಿ ರಾತ್ರಿ ಪಾಳಿಯಲ್ಲೇ ಹೆಚ್ಚು ಕೆಲಸ ಮಾಡಿದ್ದಾನೆ.

ಪರಿಶೀಲನೆ ಇಲ್ಲದೆ ಕೆಲಸ: ಆರೋಪಿಗಳು ಭದ್ರತಾ ಸಿಬ್ಬಂದಿ ಕೆಲಸ ಕೇಳಿಕೊಂಡು ಬಂದಾಗ ಸೆಕ್ಯುರಿಟಿ ಏಜೆನ್ಸಿಯವರು ಆರೋಪಿಗಳ ಪೂರ್ವಾಪರ ಪರಿಶೀಲಿಸದೆ ಕೇವಲ ಮೊಬೈಲ್‌ ನಂಬರ್‌ ಪಡೆದು ಕೆಲಸ ಕೊಟ್ಟಿದ್ದರು. ಕಳ್ಳತನ ನಡೆದ ಕಂಪನಿಯ ಸಿಸಿಟಿವಿಯಲ್ಲಿ ದಾಖಲಾಗಿದ್ದ ದೃಶ್ಯ ಮತ್ತು ಏಜೆನ್ಸಿಯಲ್ಲಿದ್ದ ಆರೋಪಿಯ ಫೋಟೋ ಹೊಂದಾಣಿಕೆ ಆಗಿತ್ತು. ಈ ಕಾರಣದಿಂದ ಆರೋಪಿಯ ಸುಳಿವು ಹಿಡಿದು ಬಂದಿಸಿದ್ದೇವೆ. ಪೂರ್ವಾಪರ ಪರಿಶೀಲನೆ ನಡೆಸದೆ ಕೆಲಸಕ್ಕೆ ಸೇರಿಸಿಕೊಂಡ ಆರೋಪಕ್ಕಾಗಿ ಏಜೆನ್ಸಿ ವಿರುದ್ಧವೂ ಕಾನೂನು ಕ್ರಮ ತೆಗೆದುಕೊಳ್ಳಲಾಗು ವುದು ಎಂದು ಶರಣಪ್ಪ ತಿಳಿಸಿದರು. 

ಸೆಕ್ಯೂರಿಟಿ ಏಜೆನ್ಸಿ, ಕಂಪನಿಗಳಿಗೆ ಡಿಸಿಪಿ ಎಚ್ಚರಿಕೆ
ಸೆಕ್ಯೂರಿಟಿ ಏಜೆನ್ಸಿಗಳು ನೇಮಕ ಮಾಡಿಕೊಳ್ಳುವ ಸಿಬ್ಬಂದಿ ಮತ್ತು ಸೆಕ್ಯೂರಿಟಿ ಸೂಪರ್‌ವೈಸರ್‌ಗಳ ಜೊತೆಗೆ ಕಂಪನಿಯ ಹೆಚ್‌ಆರ್‌ ಮ್ಯಾನೇಜರ್‌ ನಿತ್ಯ ಸಂಪರ್ಕದಲ್ಲಿರಬೇಕು. ಸೆಕ್ಯೂರಿಟಿ ಏಜೆನ್ಸಿಗಳು ಸೆಕ್ಯೂರಿಟಿ ಗಾರ್ಡ್‌ಗಳನ್ನು ನೇಮಕ ಮಾಡಿಕೊಳ್ಳುವ ಮುನ್ನ ಗಾರ್ಡ್‌ನ ಪೂರ್ವಪರ ಚರಿತ್ರೆಯ ಬಗ್ಗೆ ತಿಳಿದುಕೊಳ್ಳಬೇಕು. ಕಂಪನಿಯವರು ಸಿಸಿ ಕ್ಯಾಮೆರಾವನ್ನು ಅವಶ್ಯಕ ಸ್ಥಳದಲ್ಲಿ ಅಳವಡಿಸಬೇಕು.

ಅಳವಡಿಸಿರುವ ಸಿಸಿ ಕ್ಯಾಮೆರಾಗಳು ರಾತ್ರಿ ವೇಳೆಯೂ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಮಾನಿಟರಿಂಗ್‌ ಮಾಡಲು ಒಬ್ಬ ಸಿಬ್ಬಂದಿ ನಿಯೋಜಿಸಬೇಕು ಎಂದು ಡಿಸಿಪಿ ಶರಣಪ್ಪ ಎಚ್ಚರಿಕೆ ನೀಡಿದ್ದಾರೆ. 

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.