ಮಗನ ಸೇನೆ ಪಾಸ್‌ ಬಳಸಿ ಕಳವು ಮಾಡುತ್ತಿದ್ದ ಪಾಲಕರ ಸೆರೆ


Team Udayavani, Feb 12, 2020, 3:10 AM IST

magana

ಬೆಂಗಳೂರು: ಪುತ್ರ ಸೇನೆಯಲ್ಲಿದ್ದ ಕಾರಣಕ್ಕೆ ರಕ್ಷಣಾ ಇಲಾಖೆಯಿಂದ ನೀಡಲಾಗಿದ್ದ “ಪಾಸ್‌’ದುರ್ಬಳಕೆ ಮಾಡಿಕೊಂಡ ದಂಪತಿ ಕಳ್ಳತನ ಆರೋಪದಲ್ಲಿ ಇದೀಗ ಜೈಲು ಸೇರಿದ್ದಾರೆ. ದೊಡ್ಡಬೊಮ್ಮಸಂದ್ರದ ನಿವಾಸಿಗಳಾದ ರಾಮಕೃಷ್ಣ ಯ್ಯ (61) ಪತ್ನಿ ರತ್ನಾ( 53) ಬಂಧಿತರು. ಇವರ ಪುತ್ರ ಪ್ಯಾರಾ ರೆಜಿಮೆಂಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪೋಷಕರಾದ ಇವರಿಗೆ ಸೇನಾ ಕ್ಯಾಂಪಸ್‌ಗಳ ಪ್ರವೇಶಕ್ಕೆ ಪಾಸ್‌ ನೀಡಲಾಗಿತ್ತು.

ಆ ಪಾಸ್‌ ದುರ್ಬಳಕೆ ಮಾಡಿಕೊಂಡು ಸೇನಾ ಕ್ಯಾಂಪಸ್‌ಗಳ ಒಳಗೆ ಹೋಗುತ್ತಿದ್ದ ದಂಪತಿ ಮನೆ ಕಳವು ಮಾಡುತ್ತಿದ್ದರು ಎಂಬುದು ಪತ್ತೆಯಾಗಿದೆ. ಹೆಬ್ಬಾಳದಲ್ಲಿರುವ ವಾಯುಸೇನೆಯ ತರಬೇತಿ ಕೇಂದ್ರ ಕಚೇರಿಯ ಆವರಣದಲ್ಲಿರುವ ಸೇನಾ ಅಧಿಕಾರಿಯೊಬ್ಬರ ಮನೆಯಲ್ಲಿ ಫೆ.5 ರಂದು ನಡೆದಿದ್ದ ಕಳವು ಪ್ರಕರಣದ ಬೆನ್ನತ್ತಿದ್ದ ಸದಾಶಿವನಗರ ಠಾಣೆ ಪೊಲೀಸರಿಗೆ ರಾಮಕೃಷ್ಣಯ್ಯ ದಂಪತಿ ಸಿಕ್ಕಿಬಿದ್ದಿದ್ದಾರೆ.

ಇವರ ಬಂಧನದಿಂದ ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆಸಿದ್ದ ಕಳವು ಪ್ರಕರಣವೂ ಪತ್ತೆಯಾಗಿದೆ. ಆರೋಪಿಗಳಿಂದ ಒಂದು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇನೆಯಿಂದ ಪಡೆದಿದ್ದ ಪಾಸ್‌ಗಳನ್ನು ಜಪ್ತಿ ಮಾಡಿ ಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಆರೋಪಿ ರಾಮಕೃಷ್ಣಯ್ಯ ಮಹಾರಾಷ್ಟ್ರದ ವಾಯುಸೇನೆ ಕಚೇರಿಯಲ್ಲಿ ಸಹಾಯಕ (ಸಿವಿಲಿಯನ್‌) ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದು 2009ರಲ್ಲಿ ಕೆಲಸ ಬಿಟ್ಟಿದ್ದಾನೆ. ಅಂದಿನಿಂದ ಪತ್ನಿ ಜತೆ ಸೇರಿ ನಿರಂತರವಾಗಿ ಕಳ್ಳತನ ಕೆಲಸಗಳಲ್ಲಿ ಭಾಗಿಯಾಗಿದ್ದಾರೆ. ಈ ಹಿಂದೆ 2015ರಲ್ಲಿ ಗಂಗಮ್ಮನಗುಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಕಳವು ಪ್ರಕರಣಗಳಲ್ಲಿ ಆರೋಪಿ ದಂಪತಿ ಬಂಧಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನ ಹೇಗೆ?: ಸೇನೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಪೋಷಕರಿಗೆ ಸೇನಾ ಆವರಣ ಕಚೇರಿಗಳಿಗೆ ತೆರಳಲು ಪಾಸ್‌ ನೀಡಲಾಗಿರುತ್ತದೆ. ಆರೋಪಿ ದಂಪತಿ ಮಗ ಕೂಡ ಪ್ಯಾರಾ ರೆಜಿಮೆಂಟ್‌ನಲ್ಲಿ ಕಾರ್ಯನಿರ್ವಹಿಸು ತ್ತಿದ್ದಾರೆ. ಹೀಗಾಗಿ ಇವರಿಗೂ ಪಾಸ್‌ ದೊರೆತಿತ್ತು. ಹೆಬ್ಬಾಳದಲ್ಲಿರುವ ವಾಯುಸೇನೆಯ ತರಬೇತಿ ಕೇಂದ್ರಕ್ಕೆ ದಂಪತಿ ಆಗಮಿಸುತ್ತಿದ್ದರು. ರಾಮಕೃಷ್ಣಯ್ಯ ಮೈದಾನದಲ್ಲಿ ಕುಳಿತುಕೊಂಡು ಅಲ್ಲಿನ ಸಿಬ್ಬಂದಿ ಜತೆ ಮಾತುಕತೆಯಲ್ಲಿ ತೊಡಗುತ್ತಿದ್ದ.

ಈ ವೇಳೆ ರತ್ನ ಅಧಿಕಾರಿಗಳ ವಸತಿಗೃಹಗಳ ಬಳಿ ಸುತ್ತಾಡಿ ಬೀಗ ಹಾಕಿದ ಮನೆಗಳ ಬೀಗ ಒಡೆದು ಚಿನ್ನಾಭರಣ, ವಾಚ್‌, ಮದ್ಯ ಸೇರಿ ಮತ್ತಿತರ ವಸ್ತುಗಳನ್ನು ಕಳವು ಮಾಡಿಕೊಂಡು ಬರುತ್ತಿದ್ದಳು. ಅದೇ ರೀತಿ ಕಳೆದ ವರ್ಷ ಆ. 22ರಂದು ಲೆಫ್ಟಿನೆಂಟ್‌ ಕರ್ನಲ್‌ವೊಬ್ಬರ ಮನೆಯಲ್ಲೂ ಕಳವು ಮಾಡಿದ್ದಳು. ಇದೇ ಫೆ. 5ರಂದು ಮತ್ತೂಬ್ಬ ಅಧಿಕಾರಿಯ ಮನೆಯಲ್ಲಿ 45 ಸಾವಿರ ರೂ. ಮೌಲ್ಯದ ಆಭರಣ ಕಳವು ಮಾಡಿದ್ದಳು.

ಈ ಎರಡೂ ಪ್ರಕರಣಗಳ ತನಿಖೆ ನಡೆಸಿದ ಶೇಷಾದ್ರಿ ಪುರಂ ಉಪವಿಭಾಗದ ಎಸಿಪಿ ಬಷೀರ್‌ ಅಹಮದ್‌, ಇನ್ಸ್‌ಪೆಕ್ಟರ್‌ ಎಂ. ಮಂಜುನಾಥ್‌, ಪಿಎಸ್‌ಐಎನ್‌. ಶೋಭಾ ನೇತೃತ್ವದ ತಂಡ ಆರೋಪಿ ದಂಪತಿಯನ್ನು ಬಂಧಿಸಿ ಕಳವು ಆಭರಣ ವಶಪಡಿಸಿಕೊಂಡಿದ್ದಾರೆ.

ಬುದ್ಧಿ ಕಲಿಯಲಿಲ್ಲ: ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಗ ಹಲವು ಬಾರಿ ಪೋಷಕರಿಗೆ ಬುದ್ಧಿವಾದ ಹೇಳಿದ್ದ ಆದರೂ ಕೇಳಿರಲಿಲ್ಲ. ಇದರಿಂದ ಬೇಸರಗೊಂಡ ಮಗ ಇವರ ಜತೆ ಸಂಪರ್ಕ ಕಡಿದುಕೊಂಡಿದ್ದ. ದೊಡ್ಡಬೊಮ್ಮ ಸಂದ್ರದಲ್ಲಿ ಆರೋಪಿ ದಂಪತಿ ನೆಲೆಸಿದ್ದು ಕಳವು ಮಾಡಿದ ಆಭರಣಗಳನ್ನು ಮಾರಾಟ ಮಾಡಿ ದುಶ್ಚಟಗಳಿಗೆ ವೆಚ್ಚ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ದಂತೆ ಆರೋಪಿ ದಂಪತಿಯನ್ನು ಬಂಧಿಸಲಾಗಿದ್ದು ಕಳವು ಮಾಡಿದ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
-ಡಾ.ಚೇತನ್‌ಸಿಂಗ್‌ ರಾಥೋರ್‌, ಡಿಸಿಪಿ, ಕೇಂದ್ರ ವಿಭಾಗ

* ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.