ರಸ್ತೆಗಳಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಕ್ರಮ


Team Udayavani, Sep 26, 2021, 11:41 AM IST

ರಸ್ತೆಗಳಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಕ್ರಮ

ಬೆಂಗಳೂರು: ರಸ್ತೆಗಳಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನಿಲ್ಲಿಸಿದರೆ, ಟೋಯಿಂಗ್‌ ಮಾಡಿ ದಂಡ ಹಾಕಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಎಚ್ಚರಿಕೆ ನೀಡಿದರು.

ಮಾಸಿಕ ಜನಸಂಪರ್ಕ ಸಭೆ ಹಿನ್ನೆಲೆಯಲ್ಲಿ ಶನಿವಾರ ಕೋರಮಂಗಲ ಠಾಣೆ ಆವರಣದಲ್ಲಿ ಆಯೋಜಿಸಿದ್ದಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಭೆಯಲ್ಲಿ ವೈದ್ಯರು, ಸರ್ಕಾರೇತರ ಸಂಸ್ಥೆಗಳು, ಎಂಜಿನಿಯರ್‌ಗಳು ಸೇರಿ ಸುಮಾರು 150ಕ್ಕೂ ಅಧಿಕ ಮಂದಿ ಪಾಲ್ಗೊಂಡು, ಆಯುಕ್ತರಿಗೆ ಪ್ರಶ್ನೆಗಳನ್ನು ಕೇಳಿದರು.

ನಗರದ ರಸ್ತೆಗಳ ಇಕ್ಕೆಲಗಳಲ್ಲಿಯೇ ವಾಹನಗಳನ್ನು ನಿಲ್ಲಿಸಿ ಹೋಗಲಾಗುತ್ತಿದೆ. ಕೆಲವು ರಸ್ತೆಗಳ ಪಾದಚಾರಿ ಮಾರ್ಗದಲ್ಲೂ ವಾಹನಗಳನ್ನು ಅಡ್ಡದಿಡ್ಡಿ ನಿಲ್ಲಿಸಲಾಗಿದೆ. ಪಾರ್ಕಿಂಗ್‌ ವ್ಯವಸ್ಥೆಯೂ ಇಲ್ಲ. ಅಲ್ಲದೆ, ರಾತ್ರಿ 11 ಗಂಟೆ ನಂತರ ಯುವಕರು ಹೆಚ್ಚಿನ ಶಬ್ಧ ಬರುವ ಹಾರನ್‌ ಹಾಗೂ ಸೈಲೆನ್ಸರ್‌ ಪೈಪ್‌ ಹಾಕಿಕೊಂಡು ಓಡಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರು ನೀಡಿದರು.

ಅದಕ್ಕೆ ಉತ್ತರಿಸಿದ ಆಯುಕ್ತರು, ಯಾವ ಪ್ರದೇಶದಲ್ಲಿ ಯುವಕರು ಆ ರೀತಿ ಬೈಕ್‌ ರೈಡಿಂಗ್‌ಮಾಡುತ್ತಿದ್ದಾರೆ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿನೀಡಿದರೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಬಗ್ಗೆ ಸಮೀಪದ ಸಂಚಾರ ಠಾಣೆ ಅಥವಾ ಪೊಲೀಸ್‌ ಸಹಾಯವಾಣಿಗೆ ಮಾಹಿತಿ ನೀಡಿದರೆ ಟೋಯಿಂಗ್‌ ಮೂಲಕ ವಾಹನ ಟೋಯಿಂಗ್‌ ಮಾಡಿ ದಂಡ ವಿಧಿಸಲಾಗುತ್ತದೆ ಎಂದರು.

ಇನ್ನು ನಗರದಲ್ಲಿ ರಸ್ತೆ ಉಬ್ಬುಗಳು ಹೆಚ್ಚಾಗುತ್ತಿವೆ. ಅದರಿಂದಲೂ ಅಪಘಾತಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರೊಬ್ಬರು ದೂರಿದರು. ಅದಕ್ಕೆ ಉತ್ತರಿಸಿದ ಕೆಲವು ರಸ್ತೆಯಲ್ಲಿ ಮೀತಿಗಿಂತ ಹೆಚ್ಚಿನ ವೇಗದಲ್ಲಿ ವಾಹನಗಳನ್ನು ಚಲಾಯಿಸುತ್ತಾರೆ. ಹೀಗಾಗಿ, ರಸ್ತೆಯ ಉಬ್ಬುಗಳನ್ನು ನಿರ್ಮಿಸಲಾಗಿದೆ ಎಂದರು.

ಟೋಯಿಂಗ್‌ ಸಿಬ್ಬಂದಿ ವಿರುದ್ಧ ದೂರು: ಪಾರ್ಕಿಂಗ್‌ಸ್ಥಳದಲ್ಲಿಯೂ ಟೋಯಿಂಗ್‌ ಸಿಬ್ಬಂದಿ ವಾಹನ ಎತ್ತೂಯ್ಯುತ್ತಿದ್ದಾ. ಕೇವಲ ಐದು ಅಥವಾ ಹತ್ತು ನಿಮಿಷದ ಕೆಲಸಕ್ಕಾಗಿ ವಾಹನ ನಿಲ್ಲಿಸಿ ಕಚೇರಿಯೊಳಗೆ ಹೋಗಿ ಬರುವಷ್ಟರಲ್ಲೇ ವಾಹನ ಟೋಯಿಂಗ್‌ ಮಾಡಿರುತ್ತಾರೆ ಎಂದು ಸಾರ್ವಜನಿಕರು ಕೇಳಿದರು.

ಅದಕ್ಕೆ ಉತ್ತರಿಸಿ ಆಯುಕ್ತರು, ಸಂಚಾರ ನಿಯಮ ಉಲ್ಲಂಘಿಸಿ ನೋ ಪಾರ್ಕಿಂಗ್‌ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಿದರೇ ವಾಹನ ಟೋಯಿಂಗ್‌ ಮಾಡುತ್ತಾರೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸಂಚಾರ ನಿಯಮ ಮಾಡಲಾಗಿದೆ ಎಂದರು.

ಸಿಬ್ಬಂದಿ ಕುಂದು-ಕೊರತೆ ಪರಿಶೀಲನೆ: ಸಾರ್ವಜನಿಕ ಸಭೆ ಬಳಿಕ ಕೋರಮಂಗಲ ಪೊಲೀಸ್‌ ಠಾಣೆಯ ಅಧಿಕಾರಿ-ಸಿಬ್ಬಂದಿ ಜತೆ ಕೆಲ ಹೊತ್ತು ಚರ್ಚಿಸಿದಆಯುಕ್ತರು, ಅವರ ಕುಂದು-ಕೊರತೆಗಳನ್ನು ಆಲಿಸಿದರು. ಬಳಿಕ ರಾತ್ರಿ ಮತ್ತು ಹಗಲು ಸಂದರ್ಭದಲ್ಲಿ ಬೀಟ್‌ ವ್ಯವಸ್ಥೆ ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್‌ ಮಹದೇವ್‌ ಜೋಶಿ, ಮಡಿವಾಳ ಉಪವಿಭಾಗ ಎಸಿಪಿ ಶ್ರೀಧರ್‌ ಎಂ. ಹೆಗಡೆ, ಕೋರಮಂಗಲ ಠಾಣೆ ಇನ್‌ಸ್ಪೆಕ್ಟರ್‌ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.