ಸ್ವಚ್ಛತೆಗೆ ಪಕ್ಷಾತೀತವಾಗಿ ಕೈ ಜೋಡಿಸಿ
Team Udayavani, Sep 17, 2018, 12:23 PM IST
ಕೆಂಗೇರಿ: ಗಾಂಧೀಜಿಯವರ ಮಹಾಕಲ್ಪನೆಯನ್ನು ಸಾಕಾರ ಮಾಡಲು ಹೂರಟಿರುವ ಪ್ರಧಾನಿ ನರೇಂದ್ರ ಮೋದಿಯವರ “ಸ್ವಚ್ಛತೆಯೇ ಸೇವೆ’ ಆಭಿಯಾನಕ್ಕೆ ಪಕ್ಷಾತೀತವಾಗಿ ಕೈ ಜೋಡಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮನವಿ ಮಾಡಿದರು.
ಕೆಂಗೇರಿ ಉಪನಗರದಲ್ಲಿ ಏರ್ಪಡಿಸಿದ್ದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಂಧೀಜಿಯವರ 150ನೇ ಜನ್ಮದಿನದ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಸ್ವಚ್ಛತೆಯು ಸಾಕಾರವಾಗಲು ಪ್ರತಿಯೂಬ್ಬ ನಾಗರಿಕರು, ರಾಜಕೀಯ ನಾಯಕರು ಈ ಕಾರ್ಯದಲ್ಲಿ ಭಾಗಿಯಾಗಬೇಕು. ಈ ಕೆಲಸವು ನಿರಂತರವಾಗಿ ಮುಂದುವರಿಯಬೇಕು ಎಂದರು.
ಮುಂದಿನ 20 ದಿನಗಳ ಕಾಲ ಸ್ವಚ್ಛತಾ ಕಾರ್ಯಕ್ರಮಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಪ್ರಧಾನಿ ಮೋದಿಯವರು ಶಾಲೆಯೊಂದರಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ “ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ ಎಂದರು. ಬಿಜೆಪಿ ಮಂಡಲಾಧ್ಯಕ್ಷ ಸಿ.ಎಂ.ಮಾರೇಗೌಡ, ಪುರಸಭೆ ಮಾಜಿ ಅಧ್ಯಕ್ಷ ಆಂಜಿನಪ್ಪ, ಪಾಲಿಕೆ ಸದಸ್ಯ ವಿ.ವಿ.ಸತ್ಯನಾರಾಯಣ್, ಜೆ.ರಮೇಶ್, ಸುಧೀರ್, ಸೌಮ್ಯಾ ಭಾರ್ಗವಿ ಹಾಗೂ ಇತರರು ಇದ್ದರು.