ಪಾರ್ವತಮ್ಮ ರಾಜಕುಮಾರ್ ಪುಣ್ಯಸ್ಮರಣೆ
Team Udayavani, Jun 1, 2018, 11:55 AM IST
ಬೆಂಗಳೂರು: ಪಾರ್ವತಮ್ಮ ರಾಜಕುಮಾರ್ ಅವರ ಪ್ರಥಮ ಪುಣ್ಯಸ್ಮರಣೆ ಗುರುವಾರ ಕಂಠೀರವ ಸ್ಟುಡಿಯೋದಲ್ಲಿರುವ ಪಾರ್ವತಮ್ಮ ಅವರ ಸಮಾಧಿ ಬಳಿ ನಡೆಯಿತು. ಪುತ್ರರಾದ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಮತ್ತು ಪುನೀತ್ರಾಜಕುಮಾರ್ ಹಾಗೂ ಡಾ.ರಾಜ್ಕುಮಾರ್ ಸಹೋದರಿ ನಾಗಮ್ಮ ಸೇರಿದಂತೆ ರಾಜ್ ಕುಟುಂಬ ವರ್ಗ ಸಮಾಧಿಗೆ ಪೂಜೆ ಸಲ್ಲಿಸಿದರು.
ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಸ್ಮರಣೆ ಅಂಗವಾಗಿ ಡಾ.ರಾಜ್ಕುಮಾರ್ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಅವರ ಸಮಾಧಿಗೆ ವಿಶೇಷ ಹೂವಿನಾಲಂಕಾರ ಮಾಡಲಾಗಿತ್ತು.
ಇದೇ ವೇಳೆ ಸಿರಿಗೇರಿ ಯರಿಸ್ವಾಮಿಯವರು ಬರೆದಿರುವ “ದೊಡ್ಮನೆ ಅಮ್ಮ’ ಪುಸ್ತಕವನ್ನು ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಮತ್ತು ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದರು. ಕಂಠೀರವ ಸ್ಟುಡಿಯೋದಿಂದ ಸದಾಶಿವ ನಗರದ ಮನೆಗೆ ತೆರಳಿದ ರಾಜ್ ಕುಟುಂಬ ಅಲ್ಲಿ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ