ಗ್ರಾಮ ಮಟ್ಟದಲ್ಲಿ ಪೌತಿ ಖಾತೆ ಆಂದೋಲನ

ಕೃಷಿ ಭೂಮಿಯಿದ್ದೂ ಹಕ್ಕು ಪತ್ರವಿಲ್ಲದವರಿಗೆ ಅನುಕೂಲ

Team Udayavani, Nov 9, 2020, 1:53 PM IST

ಗ್ರಾಮ ಮಟ್ಟದಲ್ಲಿ ಪೌತಿ ಖಾತೆ ಆಂದೋಲನ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೃಷಿ ಜಮೀನಿದ್ದರೂ ಹಕ್ಕು ಪತ್ರ ಇಲ್ಲದೆ ಹಲವು ರೈತರು ಸರ್ಕಾರದ ಸಾಲ ಸೌಲಭ್ಯ, ಬೆಳೆಪರಿಹಾರ ಸೇರಿದಂತೆ ಇನ್ನಿತರ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಂದಾಯ ಇಲಾಖೆ ಈಗಾಗಲೇ “ಪೌತಿ/ ವಾರಸಾಖಾತೆ ಆಂದೋಲನ’ರೂಪಿಸಿದ್ದು ಶೀಘ್ರದಲ್ಲೆ ಬೆಂಗಳೂರು ನಗರ ಜಿಪಂ ವ್ಯಾಪ್ತಿಯ ಗ್ರಾಮಮಟ್ಟದಲ್ಲಿ ನಡೆಸಲು ನಿರ್ಧರಿಸಿದೆ. ಕೃಷಿ ಜಮೀನಿನ ಮಾಲೀಕರು ಮರಣಹೊಂದಿದ ನಂತರ ವಾರಸಾ ರೀತ್ಯಾ ಮಾಲೀಕತ್ವವು ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆಯಾಗದೇ ಇದ್ದಲ್ಲಿ ಅಂತಹ ಜಮೀನುಗಳ ಸ್ವಾಧೀನ ಹೊಂದಿದ್ದರೂ ಕುಟುಂಬಸ್ಥರಿಗೆ ಆ ಜಮೀನು ಅಭಿವೃದ್ಧಿಪಡಿಸಲು ಸಾಧ್ಯವಾಗುವುದಿಲ್ಲ. ಜತೆಗೆ ಸರ್ಕಾರ ದಿಂದ ದೊರೆಯುವಂತಹ ಸಾಲ ಸೌಲಭ್ಯಗಳನ್ನು ಪಡೆಯಲಾಗದು. ಅಲ್ಲದೆ ಪ್ರಕೃತಿ ವಿಕೋಪದಂತಹ ವೇಳೆ ಬೆಳೆನಾಶವಾದಾಗ, ಬೆಳೆವಿಮೆ ಪರಿಹಾರ ಪಡೆಯಲು ಕಷ್ಟವಾಗುತ್ತದೆ. ಹಾಗೆ ಸರ್ಕಾರ ಸಾರ್ವಜನಿಕ ಉದ್ದೇಶಕ್ಕೆ ಭೂ ಸ್ವಾಧೀನ ಕಾಯ್ದೆಯಂತೆ ಭೂಮಿ ವಶಪಡಿಸಿಕೊಂಡಾಗಲೂ ಪರಿಹಾರದ ಹಣ ಪಡೆಯಲುವಿವಿಧಕಚೇರಿಗೆಅಲೆಯಬೇಕಾಗುತ್ತದೆ. ಈ ಎಲ್ಲಾ ಅಂಶಗಳನ್ನು ಮನಗಂಡು ಸರ್ಕಾರ ರೈತಾಪಿ ವರ್ಗದ ಸಮಸ್ಯೆ ಪರಿಹರಿಸಲು “ವಾರಸಾ ಖಾತೆ ಆಂದೋಲನ’ ರೂಪಿಸಿದೆ. ಅಲ್ಲದೆ ಈ ಸಂಬಂಧ ಕಂದಾಯ ಇಲಾಖೆ (ಭೂ ಕಂದಾಯ) ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.

ಆಯಾ ತಾಲೂಕುಗಳ ತಹಶೀಲ್ದಾರ್‌ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಲಕಾಲಕ್ಕೆ “ಪೌತಿ ವಹಿವಾಟುಗಳ ಆಂದೋಲನ’ದ ನೇತೃತ್ವ ವಹಿಸಿ ಆಂದೋಲನ ಹಮ್ಮಿಕೊಳ್ಳುವ ದಿನಾಂಕಗಳನ್ನು ಸಾರ್ವಜನಿಕರಿಗೆಪ್ರಚಾರ ಪಡಿಸುವಂತೆ ಕಂದಾಯ ಇಲಾಖೆ

ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ?: ಭೂ ಮಾಲೀಕರು ಮರಣವಾಗಿ ಒಂದು ವರ್ಷ ಮೀರಿದ್ದರೂ ಮರಣ ನೋಂದಾಣಿಯಾಗಿರದಿದ್ದಲ್ಲಿ ಸಂಬಂಧ ಪಟ್ಟ ಜೆಎಂಎಫ್ ನ್ಯಾಯಾಲಯದಲ್ಲಿ ಮರಣ ಆದೇಶ ಕುರಿತ ಪತ್ರ ಪಡೆದು, ಆ ನಂತರ ತಹಶೀಲ್ದಾರ್‌ ಅವರ ಕಾರ್ಯಾಲಯದಲ್ಲಿ ಮರಣ ಪತ್ರ ಪಡೆಯಬಹುದು. ಬಳಿಕ ಪೌತಿ ಖಾತೆ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು. ಹಾಗೆಯೇ ಆಧಾರ್‌ ಮತ್ತು ಪಡಿತರ ಚೀಟಿ ದಾಖಲೆಗಳನ್ನು ಪರಿಶೀಲಿಸಿಕೊಂಡು ಗ್ರಾಮಲೆಕ್ಕಿಗರು ಮತ್ತು ರಾಜಸ್ವ ನಿರೀಕ್ಷಕರು ಸ್ಥಳ ತನಿಖೆ/ಮಹರ್‌ಮಾಡಿ ಮೃತ ಖಾತೆದಾರರು ಮರಣ ಹೊಂದಿರುವ ಬಗ್ಗೆ ಸಂಬಂಧಪಟ್ಟ ವಾರಸುದಾರರಿಂದ ಅಫಿಡವಿಟ್‌ ಪಡೆದು, ಪೌತಿ ಖಾತೆಗಾಗಿ ಅರ್ಜಿ ದಾಖಲಿಸಬಹುದು.

ಮ್ಯುಟೇಶನ್‌ ಶುಲ್ಕ35ರೂ.ಆಗಿದ್ದು ಸಂಬಂಧ ಪಟ್ಟವರಿಂದ ಅರ್ಜಿಯನ್ನು ಪಡೆದು ಸ್ವೀಕೃತಿಯನ್ನು ಅರ್ಜಿ ದಾರರಿಗೆ ಗ್ರಾಮ ಲೆಕ್ಕಿಗರು ತಲುಪಿಸಬೇಕು. ಅಥವಾ ಸೂಕ್ತವಾಗಿ ಭರ್ತಿ ಮಾಡಿ, ಸಹಿ ಮಾಡಲ್ಪಟ್ಟ ಅರ್ಜಿಗಳನ್ನು (ನಮೂನೆ-1ರಂತೆ) ಸಂಬಂಧ ಪಟ್ಟನಾಡ ಕಚೇರಿಗಳಲ್ಲಿ ಅರ್ಜಿದಾರಾರು ದಾಖಲಿಸಬಹುದು.

ಮ್ಯುಟೇಶನ್‌ ವಿಲೇವಾರಿ 30 ದಿನಗಳ ಅವಕಾಶ :  ಮ್ಯುಟೇಶನ್‌ ವಿಲೇವಾರಿಗೆ ಮೂವ್ವತ್ತು ದಿನಗಳ ಅವಕಾಶ ನೀಡಲಾಗಿದೆ. ಇಂತಹ ಪ್ರಕರಣಗಳಲ್ಲಿ ಆಸಕ್ತರು ತಕರಾರು ಅರ್ಜಿಗಳನ್ನೂ ಸಲ್ಲಿಸಬಹುದಾಗಿದೆ. ತಕರಾರು ಬಂದರೆ ವಹಿವಾಟು ವಿವಾದಸ್ಪದ ಪ್ರಕರಣಗಳ ಪಟ್ಟಿಗೆ ಸೇರಿಸಲ್ಪಡುತ್ತದೆ. ಸದರಿ ಆಂದೋಲನದಲ್ಲಿ ಸ್ವೀಕೃತವಾಗುವ ತಕರಾರುಗಳನ್ನು ಖುದ್ದಾಗಿ ತಹಶೀಲ್ದಾರ್‌ ಗ್ರೇಡ್‌-1(ಕಸಬಾ ಹೋಬಳಿಗಳಿಗೆ),ತಹಶೀಲ್ದಾರ್‌ ಗ್ರೇಡ್‌- 2 (ಇತರೆ ಹೋಬಳಿಗಳಲ್ಲಿ) ಒಂದು ತಿಂಗಳ ಒಳಗೆ ಕ್ಯಾಂಪ್‌ ಮಾಡುವ ಮುಖಾಂತರ ಪರಿಹಾರ ಮಾಡಬಹುದಾಗಿದೆ.

ಗ್ರಾಮಲೆಕ್ಕಿಗರಿಂದ ಸಂದರ್ಶನ :  ಗ್ರಾಮಲೆಕ್ಕಿಗರೂ ಕೂಡ ಮರಣ ಹೊಂದಿದ ಖಾತೆದಾರರುಗಳ ವಿವರಗಳನ್ನು ಮರಣ ನೋಂದಣಿ ರಿಜಿಸ್ಟ್ರಾರ್‌, ಪರಿಹಾರ ತಂತ್ರಾಂಶ ಹಾಗೂ ಮನೆ ಮನೆಗಳನ್ನು ಸಂದರ್ಶಿಸುವ ಮೂಲಕ ಪಡೆಯಬಹುದಾಗಿದೆ. ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷವನ್ನು ಮೃತಪಟ್ಟಿರುವಕುಟುಂಬದವರಿಂದ ಪಡೆದು ಭೂಮಿ ತಂತ್ರಾಂಶದಲ್ಲಿ ಪೌತಿ ಖಾತೆಗಾಗಿ ನಮೂನೆ-1ರಲ್ಲಿ ಅರ್ಜಿ ದಾಖಲಿಸಬಹುದು.

ಈಗಾಗಲೇ ಕಂದಾಯ ಇಲಾಖೆ “ಪೌತಿ ಖಾತೆ ಆಂದೋಲನ’ಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಶೀಘ್ರದಲ್ಲೆ ನಗರ ಜಿಪಂ ವ್ಯಾಪ್ತಿಯಲ್ಲಿಈ ಆಂದೋಲನ ನಡೆಯುವ ಸಾಧ್ಯತೆ ಇದೆ. ಜೆ. ದಿನಕರ್‌, ಆನೇಕಲ್‌ ತಾಪಂ ಕಂದಾಯ ಇಲಾಖೆ ಅಧಿಕಾರಿ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.