ಕಾಮಗಾರಿ ಮರುಪರಿಶೀಲನೆ ಬಳಿಕ ಬಿಲ್‌ ಪಾವತಿ


Team Udayavani, May 30, 2018, 11:53 AM IST

samapth-mayor.jpg

ಬೆಂಗಳೂರು: ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೆಲವು ದಿನಗಳ ಹಿಂದಷ್ಟೇ ನಡೆಸಿದ್ದ ರಸ್ತೆ ಕಾಮಗಾರಿಗಳು ಹಾಳಾಗಿರುವ ಜತೆಗೆ ಕೆಲವು ಗುತ್ತಿಗೆದಾರರು ಕಾಮಗಾರಿ ಕೈಗೊಳ್ಳದೆ ಬಿಲ್‌ ಪಾವತಿ ಮಾಡಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ. ಆ ಹಿನ್ನೆಲೆಯಲ್ಲಿ ಮರುಪರಿಶೀಲನೆ ನಡೆಸಿ ವರದಿ ಪಡೆದ ಬಳಿಕವೇ ಬಿಲ್‌ ಪಾವತಿಸಬೇಕು ಎಂದು ಮೇಯರ್‌ ಸಂಪತ್‌ ರಾಜ್‌ ಸೂಚನೆ ನೀಡಿದ್ದಾರೆ.

ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಎಂಟು ವಲಯಗಳ ಜಂಟಿ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಬಿಬಿಎಂಪಿಯಲ್ಲಿ ಮಂಗಳವಾರ ಸಭೆ ನಡೆಸಿ ಮಾತನಾಡಿದ ಅವರು, ನಗರದಲ್ಲಿ ಟೆಂಡರ್‌ಶ್ಯೂರ್‌ ವಿಧಾನದಡಿ ಅಭಿವೃದ್ಧಿಪಡಿಸಿದ ರಸ್ತೆಗಳಲ್ಲೂ ನೀರು ನಿಲ್ಲುತ್ತಿದೆ.

ಮಳೆ ಬಂದ ವೇಳೆ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಪಾಲಿಕೆಗೆ ಸಾಕಷ್ಟು ದೂರುಗಳು ಬಂದಿವೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಕೂಡಲೇ ನ್ಯೂನತೆ ಸರಿಪಡಿಸಿಕೊಳ್ಳಬೇಕು. ಯಾವುದೇ ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಹೇಳಿದರು.

ಕಳೆದ ಮಳೆಗಾಲದಲ್ಲಿ ಉಂಟಾದಂತೆ ಅವಘಡಗಳು ಈ ಬಾರಿ ಸಂಭವಿಸದಂತೆ ಎಚ್ಚರ ವಹಿಸಬೇಕು. ಮಳೆಗಾಲದಲ್ಲಿ ರಸ್ತೆ ಗುಂಡಿ ಸೃಷ್ಟಿಯಾಗದಂತೆ ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ಸಂಭವಿಸುವ ಅನಾಹುತಗಳಿಗೆ ಸಂಬಂಧಪಟ್ಟ ಎಂಜಿನಿಯರ್‌ಗಳನ್ನೇ ಹೊಣೆ ಮಾಡಲಾಗುವುದು ಎಂದರು.

ರಾಜರಾಜೇಶ್ವರಿನಗರ ಹಾಗೂ ಜಯನಗರ ಕ್ಷೇತ್ರಗಳ ಮತದಾನ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸಾಕಷ್ಟು ಅಧಿಕಾರಿ, ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಹಾಗಾಗಿ ಮಳೆ ಸುರಿದ ತಕ್ಷಣವೇ ಸ್ಪಂದಿಸುವುದು ಕಷ್ಟವಾಗಲಿದೆ ಎಂಬ ವಿಚಾರವನ್ನು ಕೆಲ ಅಧಿಕಾರಿಗಳು ಮೇಯರ್‌ ಗಮನಕ್ಕೆ ತಂದು ಉತ್ತರ ಪಡೆದರು.

ಮಳೆಗಾಲ ಮುಗಿಯುವವರೆಗೆ ಪಾಲಿಕೆ ಕೇಂದ್ರ ಕಚೇರಿ ಸೇರಿದಂತೆ ವಲಯದ ಎಲ್ಲಾ ಸಹಾಯವಾಣಿ ಕೇಂದ್ರಗಳು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು. ಅವಘಡಗಳು ಸಂಭವಿಸಿದರೆ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದರು. ಮಾಜಿ ಮೇಯರ್‌ ಪದ್ಮಾವತಿ, ನರಸಿಂಹ ಮೂರ್ತಿ, ಆಡಳಿತ ಪಕ್ಷದ ನಾಯಕರು ಇದ್ದರು.

ಅಧಿಕಾರಿಗಳಿಗೆ ಸೂಚನೆ: ಚುನಾವಣೆ ಕಾರ್ಯದ ಜತೆಗೆ ಜನರ ಯೋಗಕ್ಷೇಮ ಮುಖ್ಯ. ಚುನಾವಣೆ ಕೆಲಸದ ನೆಪ ಹೇಳಿ, ಬಿಬಿಎಂಪಿ ಕೆಲಸ ಕಾರ್ಯ ಮಾಡದಿರುವುದು ಸರಿಯಲ್ಲ. ಮಳೆಗಾಲ ಆರಂಭವಾಗುತ್ತಿದ್ದಂತೆ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಹಾಗೂ ತುರ್ತು ಪರಿಹಾರ ಕಾರ್ಯ ಕೈಗೊಳ್ಳಲು ಅಧಿಕಾರಿಗಳು ಸನ್ನದ್ಧರಾಗಿಬೇಕು. ರಕ್ಷಣಾ ಕಾರ್ಯಕ್ಕೆ ಅಗತ್ಯವಾದ ಎಲ್ಲಾ ಸಾಧನ, ಸಲಕರಣೆಗಳನ್ನು ಹೊಂದಿಸಿಕೊಳ್ಳಬೇಕು ಎಂದು ಮೇಯರ್‌ ಸಂಪತ್‌ರಾಜ್‌ ಸೂಚನೆ ನೀಡಿದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.