ಪೆಡಲ್‌ ಪೊಲೀಸ್‌ರಿಂದ ಗಸ್ತು ಆರಂಭ


Team Udayavani, Dec 16, 2019, 11:13 AM IST

bng-tdy-3

ಬೆಂಗಳೂರು: ಕಬ್ಬನ್‌ ಉದ್ಯಾನವನದಲ್ಲಿ ರಾತ್ರಿ ಹಾಗೂ ಹಗಲು ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಂತಹ ಚಟುವಟಿಕೆಗಳ ನಿಯಂತ್ರಣಕ್ಕೆ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ “ಪೆಡಲ್‌ ಪೊಲೀಸ್‌’ ಎಂಬ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಪೊಲೀಸ್‌ ಸಿಬ್ಬಂದಿ ಪಾರ್ಕ್‌ನ ಎಲ್ಲೆಡೆ ಗಸ್ತು ತಿರುಗಲಿದ್ದಾರೆ.

ಅದು ಬೈಸಿಕಲ್‌ ಮೂಲಕ. ನಗರದ ಪೆಡಲ್‌ ಎಂಬ ಖಾಸಗಿ ಸಂಸ್ಥೆ ಬೆಂಗಳೂರು ಪೊಲೀಸರಿಗೆ ಬೈಸಿಕಲ್‌ಗ‌ಳನ್ನು ಉಚಿತವಾಗಿ ನೀಡಿದ್ದು, ಭಾನುವಾರ ಈ ಬೈಸಿಕಲ್‌ ಗಳನ್ನು ಪೊಲೀಸ್‌ ಸಿಬ್ಬಂದಿಗೆ ವಿತರಣೆ ಮಾಡುವ ಮೂಲಕ ಹೊಸ ಪ್ರಯೋಗಕ್ಕೆ ಚಾಲನೆ ನೀಡಿದ ಪೊಲೀಸ್‌ ಆಯುಕ್ತರು, ಸೈಕಲ್‌ನಲ್ಲಿಯೇ ಪಾರ್ಕ್‌ನಲ್ಲಿ ಒಂದು ಸುತ್ತು ಗಸ್ತು ತಿರುಗಿದರು. ಕಬ್ಬನ್‌ಪಾರ್ಕ್‌ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಆದರೆ, ವಾಹನ ಪ್ರವೇಶ ನಿರ್ಬಂಧ ಇರುವುದರಿಂದ ಪೊಲೀಸರು ಗಸ್ತು ತಿರುಗುತ್ತಿರಲಿಲ್ಲ. ಅದನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿದ್ದ ಕೆಲ ಕಿಡಿಗೇಡಿಗಳು ಅಕ್ರಮ ಚುಟುವಟಿಕೆ ನಡೆಸುತ್ತಿದ್ದರು. ಇದೀಗ ಬೈಸಿಕಲ್‌ ಮೂಲಕ ಪೊಲೀಸ್‌ ಸಿಬ್ಬಂದಿ ಹಗಲು, ರಾತ್ರಿ ಕಬ್ಬನ್‌ ಪಾರ್ಕ್‌ನ ಮೂಲೆ ಮೂಲೆಯಲ್ಲೂ ಗಸ್ತು ತಿರುಗಲಿದ್ದಾರೆ ಎಂದು ಪೊಲೀಸರು ಹೇಳಿದರು.

ಇದರಿಂದ ಪಾರ್ಕ್‌ಗೆ ಬರುವ ವಾಯುವಿಹಾರಿಗಳ ರಕ್ಷಣೆ ಮಾತ್ರವಲ್ಲ. ಪೊಲೀಸ್‌ ಸಿಬ್ಬಂದಿಗೂ ಉಪಯೋಗವಾಗಲಿದೆ. ಜತೆಗೆ ಪರಿಸರ ಮಾಲಿನ್ಯ ಕೂಡ ತಗ್ಗಲಿದೆ ಎಂಬುದು ಪೊಲೀಸ್‌ ಅಧಿಕಾರಿಗಳ ಅಭಿಪ್ರಾಯ. ಮುಂಜಾನೆ, ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಪೊಲೀಸರು ಸೈಕಲ್‌ ತುಳಿಯುವುದರಿಂದ ಅವರ ದೈಹಿಕ ದೃಢತೆ ಹೆಚ್ಚಾಗಲಿದೆ. ಸದ್ಯ ಕಬ್ಬನ್‌ಪಾರ್ಕ್‌ ಠಾಣೆಗೆ ಐದು ಬೈಸಿಕಲ್‌ಗಳನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ನಗರದ ಪ್ರತಿ ಠಾಣೆಗೆ ಐದರಿಂದ ಆರು ಬೈಸಿಕಲ್‌ಗ‌ಳನ್ನು ವಿತರಿಸುವ ಯೋಜನೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸೈಬರ್‌ ತಡೆಗೆ ಸಾರ್ವಜನಿಕರಿಗೆ ಮನವಿ: ವರ್ಷಾಂತ್ಯದಲ್ಲಿ ನಗರದಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಹತ್ತು ಸಾವಿರ ಗಡಿ ದಾಡಿದೆ. ಹೀಗಾಗಿ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಅವರೇ ಖುದ್ದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಸಾರ್ವಜನಿಕರು ತಮ್ಮ ಮೊಬೈಲ್‌ ಸಂಖ್ಯೆಯನ್ನು ಅಂಗಡಿ, ಶಾಪಿಂಗ್‌ ಮಾಲ್‌ಗ‌ಳು ಹಾಗೂ ಇತರೆ ಯಾವುದೇ ಸ್ಥಳದಲ್ಲಿಯೂ ಎಲ್ಲಿಯೂ ಬಹಿರಂಗಪಡಿಸಬೇಡಿ. ಒಂದು ವೇಳೆ ಶೇರ್‌ ಮಾಡಿದರೆ ಅದರಿಂದ ಸುಲಭವಾಗಿ ನಿಮ್ಮ ಆಧಾರ್‌ ನಂಬರ್‌, ಮನೆ ವಿಳಾಸ ಸೇರಿ ಎಲ್ಲ ವೈಯಕ್ತಿಕ ಮಾಹಿತಿಗಳನ್ನು ಹ್ಯಾಕರ್ಸ್‌ಗಳು ಕಳುವು ಮಾಡುತ್ತಾರೆ. ಈ ಮೂಲಕ ಸೈಬರ್‌ ಅಪರಾಧಕ್ಕೆ ತಾವೇ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.