ವಾಹನಕ್ಕಿಂತ ಪಾದಚಾರಿಗಳೇ ಫಾಸ್ಟು!


Team Udayavani, Aug 11, 2019, 3:09 AM IST

vahanakinta

ಬೆಂಗಳೂರು: ಬೆಳಗ್ಗೆ ಮತ್ತು ಸಂಜೆ ಪೀಕ್‌ಅವರ್‌ನಲ್ಲಿ ಇಲ್ಲಿ ಬೈಕ್‌ ಮತ್ತು ಕಾರುಗಳಿಗಿಂತ ವೇಗವಾಗಿ ಪಾದಚಾರಿಗಳು ನಡೆದು ಹೋಗುತ್ತಾರೆ! ಸಂದಿ ಸಿಕ್ಕರೂ ನುಸುಳಿಕೊಂಡು ಹೋಗುವ ಬೈಕ್‌ ಸವಾರರೂ ಪಾದಚಾರಿಗಳ ಮುಂದೆ ಸೋಲೊಪ್ಪಿಕೊಳ್ಳುವುದು ಶೇಷಾದ್ರಿ ರಸ್ತೆಯಲ್ಲಿ. ನಿತ್ಯ ಸಾವಿರಾರು ಪ್ರಯಾಣಿಕರು ಬಳಸುವ ಸುಮಾರು ಒಂದೂವರೆ ಕಿ.ಮೀ. ಉದ್ದದ ಶೇಷಾದ್ರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಲು ಹಲವು ಕಾರಣಗಳಿವೆ.

ಕೆಂಪೇಗೌಡ ಬಸ್‌ ನಿಲ್ದಾಣ, ರೈಲು ನಿಲ್ದಾಣ, ವಿಕಾಸಸೌಧ, ವಿಧಾನಸೌಧ ಮತ್ತು ಮಹಾರಾಣಿ ಮಹಿಳಾ ಕ್ಲಸ್ಟರ್‌, ಪಾಲಿಟೆಕ್ನಿಕ್‌ ಕಾಲೇಜು, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ, ಇನ್ಸ್‌ಟಿಟ್ಯೂಟ್‌ ಆಫ್ ಬಿಸಿನೆಸ್‌ ಮ್ಯಾನೇಜ್‌ಮೆಂಟ್‌ ಹಾಗೂ ಕಲಾ ಕಾಲೇಜುಗಳು ಇದೇ ಮಾರ್ಗಗಳಲ್ಲಿ ಇರುವುದರಿಂದ ಸಾವಿರಾರು ಉದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಈ ಮಾರ್ಗವಾಗೇ ಕಾಲೇಜು ಮತ್ತು ಉದ್ಯೋಗ ಸ್ಥಳಗಳನ್ನು ತಲುಲುತ್ತಾರೆ.

ಇದೇ ಭಾಗದಲ್ಲಿ ಬರುವ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟಿರುವುದರಿಂದ, ಪ್ರತಿಭಟನೆ ನಡೆಯುತ್ತಿದ್ದರೆ, ಈ ರಸ್ತೆಯಲ್ಲಿ ಒಂದೂವರೆ ಕಿ.ಮೀ ತಲುಪುವುದಕ್ಕೆ ಒಂದು ಗಂಟೆಗೂ ಹೆಚ್ಚು ಸಮಯ ತಗುಲುತ್ತಿದೆ. ವಿಧಾನಸೌಧ ಮುತ್ತಿಗೆ, ಮೆರವಣಿಗೆ, ಜಾಥಾಗಳಿಗೆ ವಿವಿಧ ಸಂಘಟನೆಗಳ ಸದಸ್ಯರು ಇದೇ ಮಾರ್ಗದ ಮೂಲಕ ಹಾದು ಹೋಗುತ್ತಾರೆ. ಇನ್ನು ಶಕ್ತಿ ಕೇಂದ್ರದ ಅಧಿಕಾರಿಗಳು ಮತ್ತು ನಾಯಕರೂ ಇದೇ ಮಾರ್ಗ ಬಳಸುತ್ತಾರೆ.

ಅನಿರೀಕ್ಷಿತ ಪ್ರತಿಭಟನೆಗಳು ನಡೆದರಂತೂ ಈ ರಸ್ತೆಗಳು ಪ್ರತಿಭಟನಾಕಾರರಿಂದ “ಹೈಜಾಕ್‌’ ಆಗುತ್ತವೆ. ಇತ್ತೀಚೆಗೆ ವಾಲ್ಮೀಕಿ ಸಮುದಾಯ ಮೀಸಲಾತಿ ಸಂಬಂಧ ನಡೆಸಿದ ಅನಿರೀಕ್ಷಿತ ಪ್ರತಿಭಟನೆಯಿಂದ ನಗರದ ಸಂಚಾರವೇ ಅಸ್ತವ್ಯಸ್ತವಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಶೇಷಾದ್ರಿ ರಸ್ತೆಯ ಸ್ವಾತಂತ್ರ್ಯ ಉದ್ಯಾನ ಮತ್ತು ಮತ್ತೂಂದು ಭಾಗದಲ್ಲಿನ ಮೈಸೂರು ಬ್ಯಾಂಕ್‌ ವೃತ್ತಗಳು ಪ್ರತಿಭಟನೆಗಳಿಗೆ ಪ್ರಸಿದ್ಧಿ ಗಳಿಸಿವೆ.

ನಗರಕ್ಕೆ ಸಂಬಂಧಿಸಿದ ಸಮಸ್ಯೆಗಳಷ್ಟೇ ಅಲ್ಲ, ರಾಜ್ಯದ ಹಲವು ಜಿಲ್ಲೆಯ ವಿವಿಧ ಸಂಘಟನೆಗಳ ಸದಸ್ಯರು ಸರ್ಕಾರದ ಗಮನ ಸೆಳೆಯುವುದಕ್ಕೆ ಇಲ್ಲಿಗೇ ಬಂದು ಪ್ರತಿಭಟನೆ ನಡೆಸುತ್ತಾರೆ. ಇದು ಸುತ್ತಮುತ್ತಲಿನ ರಸ್ತೆಗಳಲ್ಲಿನ ಸಂಚಾರ ಮಿಡಿತವನ್ನೇ ಸ್ತಬ್ಧಗೊಳಿಸಿತ್ತಿದ್ದು, ಗಂಟೆಗಟ್ಟಲೆ ವಾಹನಗಳು ಆಮೆ ವೇಗದಲ್ಲಿ ಸಾಗುತ್ತವೆ. ಇದರೊಂದಿಗೆ ವಿವಿಧ ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಿಂದ ಇಲ್ಲಿಗೆ ತಲುಪುವುದಕ್ಕೆ ಬಳಸುವ ವಾಹನಗಳಿಂದ ಸಂಚಾರ ದಟ್ಟಣೆ ಮತ್ತಷ್ಟು ತೀವ್ರ ಸ್ವರೂಪ ಪಡೆಯುತ್ತದೆ. ಈ ಭಾಗದಲ್ಲಿ ಕಾಲೇಜುಗಳ ಸಂಖ್ಯೆ ಹೆಚ್ಚಿರುವುದರಿಂದ ಪ್ರತಿಭಟನೆಗೆ ಪರ್ಯಾಯ ಸ್ಥಳ ನೀಡಬೇಕು ಎನ್ನುವ ಬೇಡಿಕೆಯೂ ಇದೆ.

ಜೀವ ಕೈಯಲ್ಲಿ: ಮಹಾರಾಣಿ ಮಹಿಳಾ ಕ್ಲಸ್ಟರ್‌ನ ಮುಂದೆ ವಿದ್ಯಾರ್ಥಿಗಳ ಅನುಕೂಲಕ್ಕೆ ಸ್ಕೈವಾಕ್‌ ನಿರ್ಮಿಸಲಾಗಿದೆಯಾದರೂ ಇದನ್ನು ಮೇಲ್ದರ್ಜೆಗೆ ಏರಿಸಿಲ್ಲ ಮತ್ತು ಇದು ಎಲ್ಲರಿಗೂ ಅನುಕೂಲವಾಗುವ ಸ್ಥಳದಲ್ಲಿಲ್ಲ. ಹೀಗಾಗಿ, ಇಂದಿಗೂ ವಿದ್ಯಾರ್ಥಿಗಳು, ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಸ್ಥಿತಿ ಇದೆ.

ಜೀರೊ ಟ್ರಾಫಿಕ್‌ ಹೆಚ್ಚು: ಮುಖ್ಯಮಂತ್ರಿ, ಸಚಿವರ ಸಹಿತ ಬಹುತೇಕರು ಅರಮನೆ ರಸ್ತೆ ಮೂಲಕವೇ ವಿಧಾನಸೌಧ ತಲುಪುತ್ತಾರೆ. ಈ ಸಮಯದಲ್ಲಿ ಸಂಚಾರ ಪೊಲೀಸರ ಸರ್ಪಗಾವಲಿನಲ್ಲೇ ಈ ರಸ್ತೆ ಇರುತ್ತದೆ ಮತ್ತು ಸಾರ್ವಜನಿಕರು ರಸ್ತೆ ದಾಟುವುದಕ್ಕೆ ನಿಷೇಧ ವಿಧಿಸಲಾಗುತ್ತದೆ.

ಪತ್ರ ಬರೆಯಲಾಗಿದೆ: ಮಹಾರಾಣಿ ಮಹಿಳಾ ಕ್ಲಸ್ಟರ್‌ನ ಮುಂದೆ ಇರುವ ಸ್ಕೈವಾಕ್‌ ಅನ್ನು ಉತ್ತಮ ದರ್ಜೆಗೆ ಏರಿಸಲು ಮತ್ತು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ, ನಿರ್ವಹಣೆ ಶಾಸ್ತ್ರ ಕಾಲೇಜು ಹಾಗೂ ಗೃಹ ವಿಜ್ಞಾನ ಕಾಲೇಜುಗಳ ನಡುವೆ ಸಂಪರ್ಕ ಕಲ್ಪಿಸುವ ರೀತಿ ಬದಲಾಯಿಸುವಂತೆ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅವರಿಗೆ ಕಳೆದ ತಿಂಗಳು ಮನವಿ ಮಾಡಲಾಗಿದೆ.

ಕ್ಲಸ್ಟರ್‌ನಲ್ಲಿ 7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಈಗ ಸ್ಕೈವಾಕ್‌ ಇದ್ದೂ ಇಲ್ಲದಂತಾಗಿದೆ. ವಿಕಲಚೇತನ ವಿದ್ಯಾರ್ಥಿಗಳೂ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದರಿಂದ ಸ್ಕೈವಾಕ್‌ಗೆ ಲಿಫ್ಟ್ ಅಳವಡಿಸುವಂತೆ ಮನವಿ ಮಾಡಲಾಗಿದೆ ಎಂದು ಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯ ವಿಶೇಷಾಧಿಕಾರಿ ಡಾ.ಎಂ.ಎಸ್‌.ರೆಡ್ಡಿ ತಿಳಿಸಿದ್ದಾರೆ.

ಅಗತ್ಯವಿರುವ ಸ್ಥಳದಲ್ಲಿ ಸ್ಕೈವಾಕ್‌ ನಿರ್ಮಾಣ ಮಾಡದೆ ಬೇರೆ ಪ್ರದೇಶದಲ್ಲಿ ಮಾಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಎಷ್ಟೂ ಅನುಕೂಲವಿಲ್ಲ.
-ರಾಜಗೋಪಾಲ್‌, ವಕೀಲ

ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಯಾವುದೇ ವೇಗ ಮಿತಿ ಅಳವಡಿಸಿಲ್ಲ. ಒಮ್ಮೆ ರಸ್ತೆ ದಾಟುವಾಗ ಅಪಘಾತ ಒಳಗಾಗುವ ಸಾಧ್ಯತೆಯಿಂದ ತಪ್ಪಿಸಿಕೊಂಡಿದ್ದೇನೆ. ಸ್ಕೈವಾಕ್‌ಗೆ ಲಿಫ್ಟ್ ಇದ್ದರೆ ಅನುಕೂಲ.
-ನಂದಿನಿ ಆರ್‌, ವಿದ್ಯಾರ್ಥಿನಿ

ರಸ್ತೆಯಲ್ಲಿ ಸದಾ ವಾಹನ ಸಂಚಾರ ಇದ್ದೇ ಇರುತ್ತದೆ. ಸ್ಕೈವಾಕ್‌ವರೆಗೆ ಹೋಗಿ ಮತ್ತೆ ಆ ಭಾಗದಿಂದ ಹತ್ತು ನಿಮಿಷ ನಡೆದು ಬರಬೇಕು. ಸಮಯ ಉಳಿಸುವ ಉದ್ದೇಶದಿಂದ ಸ್ಕೈವಾಕ್‌ ಬಳಸದೆ ರಸ್ತೆ ದಾಟುತ್ತೇವೆ.
-ಶಶಿಧರ್‌, ವಿದ್ಯಾರ್ಥಿ

* ಹಿತೇಶ್‌ ವೈ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.