ಅಪಪ್ರಚಾರ ಮಾಡುವವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ


Team Udayavani, Apr 30, 2018, 12:31 PM IST

apaprachara.jpg

ಬೆಂಗಳೂರು: ಇಡೀ ಕ್ಷೇತ್ರ ನನ್ನ ಕುಟುಂಬ ಇದ್ದಂತೆ. ಜನ ನನ್ನನ್ನು ಬಿಟ್ಟುಕೊಡಲ್ಲ, ನನ್ನ ವಿರುದ್ಧ ಅಪಪ್ರಚಾರ ಮಾಡುವವರಿಗೆ ಜನರೇ ಸರಿಯಾದ ಉತ್ತರ ಕೊಡುತ್ತಾರೆ ಎಂದು ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆ ಅಭ್ಯರ್ಥಿ ಹಾಗೂ ಶಾಸಕ ಎನ್‌.ಎ.ಹ್ಯಾರಿಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಭಾನುವಾರ ಜೋಗುಪಾಳ್ಯ, ಮೋಟಪ್ಪನ ಪಾಳ್ಯದಲ್ಲಿ ಮತ ಯಾಚನೆ ಮಾಡಿದ ಅವರು, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಕಳೆದ ಹತ್ತು ವರ್ಷದಲ್ಲಿ ಶಾಂತಿ ನಗರ ಜನರ ಜತೆ ಬೆರೆತು ಕೆಲಸ ಮಾಡಿದ್ದೇನೆ. ಜನರು ಈಗಲೂ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಇನ್ನೊಂದು ಕಡೆ ಕಾರ್ಯಕರ್ತರು ಉತ್ಸಾಹದಿಂದ ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.

ಎದುರಾಳಿಯಾಗಿ ಕಣಕ್ಕಿಳಿದವರಿಗೆ ಯಾವುದೇ ಸಿದ್ಧಾಂತವಿಲ್ಲ. ಒಂದೊಂದು ದಿನ ಒಂದೊಂದು ಪಕ್ಷ. ಒಂದು ಪಕ್ಷದಲ್ಲಿ ಟಿಕೆಟ್‌ ಸಿಕ್ಕಿಲ್ಲ ಎಂದು ಮತ್ತೂಂದು ಪಕ್ಷಕ್ಕೆ ಹೋದವರು. ಇವರನ್ನು ಜನ ಯಾವ ರೀತಿಯಲ್ಲಿ ನಂಬಬೇಕು ಎಂದು ಪ್ರಶ್ನಿಸಿದರು.

ಗುಡಿಸಲುಗಳ ಅಸ್ತಿತ್ವ ಕ್ಷೇತ್ರದ ದೊಡ್ಡ$ಸಮಸ್ಯೆಯಾಗಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿ ಗುಡಿಸಲು ಮುಕ್ತ ಕ್ಷೇತ್ರವಾಗಿಸಿ, ಅಲ್ಲಿನ ನಿವಾಸಿಗಳಿಗೂ ಗುಣಮಟ್ಟದ ವಸತಿ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ವಿವಿಧ ಯೋಜನೆಯಡಿ ವಸತಿ ನಿರ್ಮಾಣವಾಗಿದೆ. ಕ್ಷೇತ್ರ ವ್ಯಾಪ್ತಿಯ ಜೋಗುಪಾಳ್ಯದಲ್ಲಿ ಗುಡಿಸಲು ವಾಸಿಗಳಿಗೆ ಸಮೂಹ ವಸತಿ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಸುಮಾರು 1,520 ಕುಟುಂಬಗಳಿಗೆ ಮನೆ ಕಟ್ಟಿಕೊಡುವ ಕೆಲಸ ಸಮರೋಪಾದಿಯಲ್ಲಿ ನಡೆದಿದೆ ಎಂದು ವಿವರಿಸಿದರು.

ಸಕಲ ಸೌಲಭ್ಯದೊಂದಿಗೆ ಸುಮಾರು 356 ಚದರ ಅಡಿ ಅಳತೆಯ ಮನೆಗಳನ್ನು ನಿರ್ಮಾಣ ಮಾಡಲಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 10 ವರ್ಷದಲ್ಲಿ ಸುಮಾರು 7,000 ಮನೆಗಳನ್ನು ನಿರ್ಮಿಸಲಾಗಿದೆ. ಏಷಿಯನ್‌ ಗೇಮ್ಸ್‌ ಸಂದರ್ಭದಲ್ಲಿ ಮನೆಯು ಮಂಜೂರಾದ ಪ್ರಕರಣದಲ್ಲಿ 1520 ಕಟುಂಬಗಳಿಗೆ ಮನೆ ಒದಗಿಸುವ ಕಾರ್ಯ ಅಂತಿಮ ಹಂತಕ್ಕೆ ಬಂದಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವ ಅನ್ವಯ ಇದನ್ನು ಕಾರ್ಯಗತಗೊಳಿಸಲಾಗಿದೆ ಎಂದರು.

ಚುನಾವಣೆ ಬಳಿಕ ಬಹುತೇಕರಿಗೆ ಹಕ್ಕುಪತ್ರ, ಮಂಜೂರಾತಿ ನೀಡಲಾಗುತ್ತದೆ. ಉಳಿದಂತೆ ಹೆಚ್ಚುವರಿಯಾಗಿ 900 ಜನರಿಗೆ ಸೂಳೆಗುಂಟೆಯಲ್ಲಿ ವಸತಿ ನಿರ್ಮಿಸಲು ಚಾಲನೆ ನೀಡಲಾಗುವುದು. ಅಲ್ಲಿಯೂ ಬಹುತೇಕ ಆರು ತಿಂಗಳಲ್ಲಿ ಮನೆ ಹಂಚಿಕೆ ಮಾಡುವ ಗುರಿ ಇದೆ.

1520 ಬಡ ಕುಟುಂಬ ಸದ್ಯ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಬಾಡಿಗೆ ಕಟ್ಟುವುದೂ ಅವರಿಗೆ ಕಷ್ಟದ ಕೆಲಸ. ಇಂಥ ಸಂದರ್ಭದಲ್ಲಿ ಮನೆ ಹಂಚಿಕೆ ಆಗುವವರೆಗೆ ಅವರಿಗೆ ಬಾಡಿಗೆ ಮೊತ್ತ ಪಾವತಿಸಬೇಕು ಎಂದು ಮುಖ್ಯಮಂತ್ರಿಗೆ ನಾನು ಮನವಿ ಮಾಡಿದ್ದೇನೆ. ಅವರು ಸಹ ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ಎಲ್ಲ ಮಕ್ಕಳೂ ಶಾಲೆಗೆ ಹೋಗ್ತಾರೆ: ನಾವು ವರ್ಷ ಪೂರ್ತಿ ಜನರ ಪರ ಕೆಲಸ ಮಾಡಿಕೊಂಡೇ ಬಂದಿದ್ದೇವೆ. ಎದುರಾಳಿಗಳಿಂದ ಒಂದೇ ಒಂದು ಜನಪರ ಕೆಲಸವಿಲ್ಲ. ಶಾಂತಿ ನಗರದ ಜನ ಬುದ್ಧಿವಂತರು. ಎಲ್ಲವನ್ನೂ ಗಮನಿಸುತ್ತಾರೆ. ಬಡತನ ನಿರ್ಮೂಲನೆ ಶಿಕ್ಷಣದಿಂದ ಮಾತ್ರ ಸಾಧ್ಯ. ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ, ನಮ್ಮ ಕ್ಷೇತ್ರದಲ್ಲಿ ಎಲಾ ಮಕ್ಕಳು ಶಾಲೆಗೆ ಹೋಗುತ್ತಾರೆ. ಮಕ್ಕಳ ಕಲಿಕೆಗೆ ನಾನು ಪೂರಕ ವಾತಾವರಣ ಕಲ್ಪಿಸಿಕೊಟ್ಟಿದ್ದೇನೆ ಎಂದರು.

ಟಾಪ್ ನ್ಯೂಸ್

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-11

ಮಗು ಕಳವು ಮಾಡಿದ್ದವಳ ಬಂಧನ

tdy-10

ಶೇ.60 ಭಾರತೀಯರಿಗೆ ಸಾಂದರ್ಭಿಕ ನಿದ್ರಾಹೀನತೆ

ಮೀಸಲಾತಿ ಕುರಿತ ಬೊಮ್ಮಾಯಿ ಸರ್ಕಾರದ ತೀರ್ಮಾನಗಳು ಕೇವಲ ಚುನಾವಣಾ ಗಿಮಿಕ್ಕು: ಸಿದ್ದು ಕಿಡಿ

ಮೀಸಲಾತಿ ಕುರಿತ ಬೊಮ್ಮಾಯಿ ಸರ್ಕಾರದ ತೀರ್ಮಾನಗಳು ಕೇವಲ ಚುನಾವಣಾ ಗಿಮಿಕ್ಕು: ಸಿದ್ದು ಕಿಡಿ

tdy-10

ಸೋಲಾರ್‌ ಪ್ಲಾಂಟ್‌ ಹೆಸರಲ್ಲಿ ವಂಚನೆ: ಸೆರೆ

tdy-9

ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.