ಜನ ಜೀವನಕ್ಕೆ ತೊಡಕಾಗದ ಬಂದ್‌


Team Udayavani, Jan 9, 2019, 9:02 AM IST

jana-jeevana.jpg

ಬೆಂಗಳೂರು: ಕಾರ್ಮಿಕ ಸಂಘನೆಗಳು ನೀಡಿದ್ದ ಭಾರತ್‌ ಬಂದ್‌ಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು, ದಿನಪೂರ್ತಿ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದ್ದರಿಂದ ರಜೆಯ ವಾತಾವರಣ ಕಂಡುಬಂತು. ಈ ನಡುವೆ ಶಾಲಾ ಕಾಲೇಜು ಹೊರತುಪಡಿಸಿ ಬಹುತೇಕ ಸರ್ಕಾರಿ, ಖಾಸಗಿ ಸಂಸ್ಥೆಗಳು ತೆರೆದಿದ್ದವು.

ಮಂಗಳವಾರ ಮುಂಜಾನೆ ಮೆಜೆಸ್ಟಿಕ್‌, ಯಶವಂತಪುರ, ಜಯನಗರ ಮೊದಲಾದ  ಕಡೆಗಳಿಂದ ಬಿಎಂಟಿಸಿ ಬಸ್‌ ಹೊರಟವಾದರೂ, ಮಲ್ಲೇಶ್ವರ, ಯಶವಂತಪುರ, ಚಿಕ್ಕಜಾಲ, ಶೇಷಾದ್ರಿಪುರ, ಬ್ಯಾಟರಾಯನಪುರದಲ್ಲಿ ಬಸ್‌ಗೆ ಕಲ್ಲು ಎಸೆದಿದ್ದರಿಂದ ದಿಢೀರನೇ ಬಸ್‌ ಸೇವೆ ಸ್ಥಗಿತಗೊಳಿಸಲಾಗಿತ್ತು. ಆಟೋ ಮತ್ತು ಟ್ಯಾಕ್ಸಿಗಳು ಎಂದಿನಂತೆ ಸಂಚರಿಸುತ್ತಿದ್ದರೂ, ವಾಹನ ಸಂಚಾರದ ಪ್ರಮಾಣ ತುಂಬ ಕಡಿಮೆ ಇತ್ತು. ಜನ ಜೀವನದ ಮೇಲೆ ಬಂದ್‌ ಯಾವುದೇ ಪರಿಣಾಮ ಬೀರಿರಲಿಲ್ಲ.

ಬೆಳಗ್ಗೆ 11 ಗಂಟೆಯವರೆಗೆ ಬಿಎಂಟಿಸಿ ಬಸ್‌ ಸಂಚಾರ ಬಹುತೇಕ ಕಡೆ ನಿಲ್ಲಿಸಲಾಗಿತ್ತು. 11 ಗಂಟೆಯ ನಂತರ ಎಲ್ಲ ರೂಟ್‌ಗಳಲ್ಲಿ ಬೆರಳೆಣಿಕೆಯ ಬಸ್‌ ಸಂಚಾರ ಆರಂಭವಾಯಿತು. ಮಧ್ಯಾಹ್ನ 2 ಗಂಟೆಯ ನಂತರ ಬಸ್‌ಗಳ ಸಂಖ್ಯೆ ಹೆಚ್ಚಾಯಿತು. ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಮಾಲ್‌ಗ‌ಳು ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ್ದರೂ, ಚಲನಚಿತ್ರ ಪ್ರದರ್ಶನ ಎಂದಿನಂತೆ ನಡೆದಿದೆ.

ಆಸ್ಪತ್ರೆ, ಔಷಧಾಲಯ, ದಿನಸಿ ಅಂಗಡಿಗಳು, ಟೀ-ಕಾಫಿ ಸ್ಟಾಲ್‌ ಹಾಗೂ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ಎಂದಿನಂತೆ ತೆರೆದಿದ್ದವು. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಹಾಗೂ ನೃಪತುಂಗ ರಸ್ತೆಯ ಶಿಕ್ಷಣ ಇಲಾಖೆ ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳು ಎಂದಿನಂತೆ ತೆರೆದಿದ್ದವು. ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸೇವೆಗೆ ಹಾಜರಾಗಲು ಯಾವುದೇ ರೀತಿಯ ಅಡೆತಡೆಯಾಗಿರಲಿಲ್ಲ. ಕಚೇರಿಯಲ್ಲಿ ಹಾಜರಾತಿ ಸ್ವಲ್ಪ ಕಡಿಮೆ ಇತ್ತು. ಐಟಿ, ಬಿಟಿ ಹಾಗೂ ಹಲವು ಖಾಸಗಿ ಸಂಸ್ಥೆಗಳು ಮುಂಚಿತವಾಗಿಯೇ ರಜೆ ಘೋಷಣೆ ಮಾಡಿದ್ದವು. ಇನ್ನು ಕೆಲವು ಖಾಸಗಿ ಸಂಸ್ಥೆಗಳು ಎಂದಿನಂತೆ ಕಾರ್ಯ ನಿರ್ವಹಿಸಿವೆ.

ಪರೀಕ್ಷೆ ಮುಂದೂಡಿಕೆ: ಸೋಮವಾರ ಸಂಜೆಯೇ ಶಾಲಾ ಕಾಲೇಜುಗಳಿಗೆ ರಜೆ ಘೋಸಿದ್ದರಿಂದ ಯಾವುದೇ ರೀತಿಯ ಶೈಕ್ಷಣಿಕ ಚುಟುವಟಿಕೆ ನಡೆದಿರಲಿಲ್ಲ. ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಕೇಂದ್ರ ವಿವಿಯ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ನಗರದಾದ್ಯಂತ ಇರುವ ಗಾರ್ಮೆಂಟ್‌ಗಳು ಬಂದ್‌ಗೆ ಬೆಂಬಲ ರಜೆ ಘೋಸಿದ್ದವು. ಕೆಲವು ಖಾಸಗಿ ಶಾಲೆಗಳಲ್ಲಿ ಬಂದ್‌ ನಿಮಿತ್ತ ಎರಡು ದಿನ ರಜೆ ಘೋಷಿಸಲಾಗಿದೆ ಎಂದು ಶಾಲಾ ಸೂಚನ ಫ‌ಲಕದಲ್ಲಿ ನೋಟಿಸ್‌ ಹಾಕಲಾಗಿದೆ.

ಬೆಳಗ್ಗೆಯಿಂದಲೇ ರಸ್ತೆಗೆ ಇಳಿದ ಕಾರ್ಮಿಕ ಸಂಘಟನೆಯ ಪ್ರಮುಖರು ಮತ್ತು ಕಾರ್ಯಕರ್ತರು, ಟೌನ್‌ಹಾಲ್‌ನಿಂದ ಕೆ.ಜಿ.ರಸ್ತೆ ಮಾರ್ಗವಾಗಿ ಸ್ವಾತಂತ್ರ್ಯ ಉದ್ಯಾನದವರೆಗೂ ಕೆಂಪು ಬಾವುಟ ಹಿಡಿದು ಬೃಹತ್‌ ಪ್ರತಿಭಟನೆ ನಡೆಸಿದರು. ಇನ್ನೊಂದೆಡೆ ಪೀಣ್ಯ ಎರಡನೇ ಹಂತದಿಂದ ಜಾಲಹಳ್ಳಿ ಕ್ರಾಸ್‌ವರೆಗೂ ಸುಮಾರು 3 ಸಾವಿರ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕೆ.ಆರ್‌.ಪುರ ಸಹಿತ ನಗರದ ಹೊರವಲಯದ ಹಲವುಕಡೆ ಪ್ರತಿಭಟನಾ ರ್ಯಾಲಿ ನಡೆಯಿತು. ಕಾರ್ಮಿಕ ಸಂಘಟನೆಗಳ ಬಂದ್‌ ಕರೆಗೆ ಬೆಂಬಲ ಸೂಚಿಸಿ ಕನ್ನಡ ಸಂಘಟನೆಗಳ ಒಕ್ಕೂಟದಿಂದ ವಾಟಾಳ್‌ ನಾಗರಾಜ್‌, ಸಾ.ರಾ.ಗೋವಿಂದು, ಗಿರೀಶ್‌ಗೌಡ ಮೊದಲಾದವರು ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ರಸ್ತೆ ಮೇಲೆ ಮಲಗುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ವಹಿವಾಟು ಕುಸಿತ: ಕೆ.ಆರ್‌.ಮಾರುಕಟ್ಟೆ, ಯಶವಂತಪುರ ಮಾರುಕಟ್ಟೆ ಹಾಗೂ ಎಪಿಎಂಸಿ ಯಾರ್ಡ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಯಶವಂತಪುರ ಎಪಿಎಂಸಿಗೆ ಮಂಗಳವಾರ ದವಸಧ್ಯನ ಮತ್ತು ಬೆಳೆಕಾಳು ತುಂಬಿಕೊಂಡು ರಾಜ್ಯದ ಬೇರೆ ಬೇರೆ ಕಡೆಗಳಿಂದ ಬಂದಿರುವ ಲಾರಿಗಳ ಸಂಖ್ಯೆ ಕಡಿಮೆ ಇತ್ತು. ದಿನಪೂರ್ತಿ ಸರಿಸುಮಾರು 50 ಕೋಟಿಯಷ್ಟು ನಡೆಯುತ್ತಿದ್ದ ವಹಿವಾಟು ಬಂದ್‌ನಿಂದ 30ರಿಂದ 25 ಕೋಟಿಗೆ ಇಳಿದೆ ಎಂದು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಬಿ.ಎಲ್‌.ಶಂಕರಪ್ಪ ಮಾಹಿತಿ ನೀಡಿದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.