ಫ‌ಲಪುಷ್ಪ ಪ್ರದರ್ಶನಕ್ಕೆ ಜನಸಾಗರ


Team Udayavani, Aug 10, 2018, 12:14 PM IST

phalapushpa.jpg

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಫ‌ಲಪುಷ್ಪ ಪ್ರದರ್ಶನವನ್ನು ಆರು ದಿನಗಳಲ್ಲಿ 1.20 ಲಕ್ಷ ಜನ ಕಣ್ತುಂಬಿಕೊಂಡಿದ್ದಾರೆ. ಗುರುವಾರ 12 ಸಾವಿರ ಮಂದಿ ಸಸ್ಯಕಾಶಿಗೆ ಭೇಟಿ ನೀಡಿದ್ದು, ಫ‌ಲಪುಷ್ಪ ಪ್ರದರ್ಶನದ ಆಕರ್ಷಣೆಯಾಗಿರುವ ಹೂವಿನಲ್ಲಿ ಅನಾವರಣಗೊಂಡ ಭಾರತೀಯ ಸೇನೆ, ವಾಯುಪಡೆ ಹಾಗೂ ನೌಕಪಡೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರದರ್ಶನದಲ್ಲಿರುವ ಸಿಯಾಚಿನ್‌ ಪ್ರವರ್ತ ಶ್ರೇಣಿ ಪ್ರತಿಕೃತಿ, ಯುದ್ಧ ವಿಮಾನ, ನೌಕೆಗಳ ಮಾದರಿ, ನೌಕಪಡೆ, ಭೂಸೇನೆಗಳ ಮಾದರಿ ವಿದ್ಯಾರ್ಥಿಗಳನ್ನು ಹೆಚ್ಚು ಆಕರ್ಷಿಸುತ್ತಿದೆ. ಕೆೆಂಪುತೋಟದಲ್ಲಿ ಅರಳಿನಿಂತ ಚಂದನವನ (ಕನ್ನಡ ಚಿತ್ರರಂಗ) ಕಣ್ತುಂಬಿಕೊಳ್ಳಲು ವಾರದ ದಿನಗಳಿಗಿಂತ ವಾರಾಂತ್ಯದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಸ್ಯಕಾಶಿಗೆ ಆಗಮಿಸುತ್ತಿದ್ದಾರೆ. ಆರು ದಿನಗಳಲ್ಲಿ ಪ್ರವೇಶದರ ಶುಲ್ಕದಿಂದ 64.16 ಲಕ್ಷ ರೂ. ಸಂಗ್ರಹವಾಗಿದೆ. ಆ.15ರವರೆಗೆ ಫ‌ಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಫ‌ಲಪುಷ್ಪ ಪ್ರದರ್ಶನ ಅಂಗವಾಗಿ ನಿತ್ಯ ಬಿಎಸ್‌ಎಫ್, ಎಂಇಜಿ ಮತ್ತು ಕೆಎಸ್‌ಆರ್‌ಪಿ ತಂಡದ ಬ್ಯಾಂಡ್‌ ವಾದನ ಆಲಿಸಲು ಹೆಚ್ಚಿನ ಸಂಖ್ಯೆಯ ಜನ ಬರುತ್ತಿದ್ದು, ಬಂಡೆಗಲ್ಲುಗಳ ಮೇಲೆ ಕುಳಿತು ಬ್ಯಾಂಡ್‌ ವಾದನ ಆಲಿಸುತ್ತಾರೆ. ಅಲ್ಲದೆ ಬ್ಯಾಂಡ್‌ಸ್ಟಾಂಡ್‌ನ‌ಲ್ಲಿ ಗಾನಬಜಾನ ಕಾರ್ಯಕ್ರಮ ನಡೆಯುತ್ತಿದ್ದು, ಗಾಯಕರಿಗೆ ವೇದಿಕೆ ಸೃಷ್ಟಿಸಲಾಗಿದೆ.

ಹಾಡಲು ಆಸಕ್ತಿ ಇರುವ ಮಂದಿ ಲಾಲ್‌ಬಾಗ್‌ನ ಬ್ಯಾಂಡ್‌ಸ್ಟಾಂಡ್‌ಕ್ಕೆ ಭೇಟಿ ನೀಡಿದರೆ ತಮ್ಮೊಳಗಿನ ಪ್ರತಿಭೆ ಪ್ರದರ್ಶಿಸಲು ವೇದಿಕೆ ದೊರೆಯಲಿದೆ. ಶುಕ್ರವಾರ, ಸೋಮವಾರ ಮತ್ತು ಮಂಗಳವಾರ ಶಾಲಾ ವಿದ್ಯಾರ್ಥಿಗಳಿಗೆ ಫ‌ಲಪುಷ್ಪ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಲಾಲ್‌ಬಾಗ್‌ನಲ್ಲಿ ಫ‌ಲಪುಷ್ಪ ಪ್ರದರ್ಶನ ಆರಂಭವಾದ ಮೊದಲ ದಿನ 15 ಸಾವಿರ ಜನ ಭೇಟಿ ನೀಡಿದ್ದರು. ಒಟ್ಟು 8.29 ಲಕ್ಷ ರೂ. ಆದಾಯ ಸಂಗ್ರಹವಾಗಿದೆ. ಭಾನುವಾರ ವಾರಾಂತ್ಯವಷ್ಟೇ ಅಲ್ಲದೆ ಸ್ನೇಹಿತರ ದಿನಾಚರಣೆಯ ವಿಶೇಷವೂ ಇದ್ದರಿಂದ ಲಾಲ್‌ಬಾಗ್‌ಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿತ್ತು. ಭಾನುವಾರ ಒಟ್ಟು 55 ಸಾವಿರ ಜನ ಫ‌ಲಪುಷ್ಪ ಪ್ರದದರ್ಶನ ವೀಕ್ಷಿಸಿದ್ದು, ಟಿಕೇಟ್‌ ಶುಲ್ಕದಿಂದ ಒಟ್ಟು 29.24 ಲಕ್ಷ ರೂ.ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.