ತತ್ವ ಪ್ರಚಾರಕ್ಕೆ ಜನರ ಭಾಷೆ ಬಳಕೆ


Team Udayavani, Apr 20, 2019, 3:00 AM IST

tatva

ಬೆಂಗಳೂರು: ದಾರ್ಶನಿಕರಾದ ಬುದ್ಧ ಮತ್ತು ಮಹಾವೀರ ತಮ್ಮ ತತ್ವ ಸಿದ್ಧಾಂತ ಪ್ರಚಾರಕ್ಕಾಗಿ ಸಂಸ್ಕೃತದ ಬದಲಿಗೆ ಜನಸಾಮಾನ್ಯರ ಭಾಷೆ ಬಳಸಿದ್ದರಿಂದ ಜನಾನುರಾಗಿಯಾಗಿದ್ದಾರೆ ಎಂದು ಸಾಹಿತಿ ನಾಡೋಜ ಡಾ.ಹಂಪಾ ನಾಗರಾಜಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ಜೈನ ಸಂಘದಿಂದ ಶುಕ್ರವಾರ ಜೈನಭವನದಲ್ಲಿ ಹಮ್ಮಿಕೊಂಡಿದ್ದ ಮಹಾವೀರ ಜಯಂತ್ಯುತ್ಸವ ಹಾಗೂ ಸಿದ್ಧಾಂತಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳ ಪುರಪ್ರವೇಶ ಮತ್ತು ಗುರುವಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬುದ್ಧ ಮತ್ತು ಮಹಾವೀರ ಒಂದೇ ಪ್ರದೇಶದಲ್ಲಿ ಸದಾ ಸಂಚಾರ ಮಾಡುತ್ತಿದ್ದರು. ಒಬ್ಬರನ್ನೊಬ್ಬರು ಭೇಟಿಯಾಗಿಲ್ಲ. ಆದರೆ, ಬುದ್ಧನ ಬಗ್ಗೆ ಮಹಾವೀರನಿಗೆ, ಮಹಾವೀರನ ಬಗ್ಗೆ ಬುದ್ಧನಿಗೆ ತಿಳಿದಿತ್ತು. ಅವರು ಭೇಟಿಯಾಗಿದ್ದರೆ ಧಾರ್ಮಿಕ ಚರಿತ್ರೆ ಹಾಗೂ ಸಾಮಾಜಿಕ ವೈಭವವೇ ಬದಲಾಗುತಿತ್ತು. ತಮ್ಮ ತತ್ವ ಸಿದ್ಧಾಂತದ ಪ್ರಚಾರಕ್ಕಾಗಿ ಬುದ್ಧ ಪಾಲಿ ಭಾಷೆ ಬಳಸಿಕೊಂಡರೆ, ಮಹಾವೀರ ಪ್ರಾಕೃತ ಭಾಷೆ ಆಯ್ಕೆ ಮಾಡಿಕೊಂಡಿದ್ದರು ಎಂದರು.

ಜೈನ ಧರ್ಮ ಇಂದು ಸಾಕಷ್ಟು ಬೆಳೆದಿದೆ. ವಿದೇಶಿ ಬರಹಗಾರರಿಂದ ಈ ಧರ್ಮದ ವ್ಯಾಪ್ತಿಯ ನಿಜವಾದ ಅರ್ಥ ಸಿಕ್ಕಿದೆ. ಜೈನ ಧರ್ಮ, ಬೌದ್ಧ ಧರ್ಮದ ಶಾಖೆಯಲ್ಲ. ಅದು ಬೌದ್ಧಧರ್ಮಕ್ಕಿಂತ ಪುರಾತನವಾದದ್ದು. ಹಾಗೇ, ಜೈನ ಧರ್ಮದ ಪ್ರಭಾವದಿಂದ ಬೌದ್ಧಧರ್ಮ ಹುಟ್ಟಿದೆ ಎಂಬುದನ್ನು ವಿದೇಶಿ ಬರಹಗಾರರು ಬರೆದಿದ್ದಾರೆ ಎಂದು ವಿವರಿಸಿದರು.

ಜೈನ ಧರ್ಮವನ್ನು ಹೊಸ ಕಾಲಕ್ಕೆ ತಕ್ಕಂತೆ ಆಧುನಿಕ ಜಗತ್ತಿಗೆ ತಿಳಿಸುವ ಕೆಲಸ ಮಾಡಬೇಕು. ಸಿದ್ಧಾಂತಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಮಂಡ್ಯ ಜಿಲ್ಲೆಯ ಅರತಿಪುರದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿ ಸೇವಾ ಕಾರ್ಯ ಮಾಡಬೇಕು. ಸ್ಥಳೀಯರಿಗೆ ನೀರು, ನೆರಳು, ವಿದ್ಯೆ, ವಿವೇಕ ಈ ಕ್ಷೇತ್ರದಿಂದ ಸಿಗುವಂತಾಗಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮೊದಲು, ಸಿದ್ಧಾಂತಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರನ್ನು ಮಿಂಟೋ ಆಸ್ಪತ್ರೆ ವೃತ್ತದಿಂದ ಪೂರ್ಣಕುಂಭ ಸ್ವಾಗತ, ಮೆರವಣಿಗೆ ಮೂಲಕ ಕರೆತರಲಾಯಿತು. ಸಮಾರಂಭದಲ್ಲಿ ಸಾಧಕ ಎಂ.ಜೆ.ಬ್ರಹ್ಮಯ್ಯ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಜೈನ ಸಂಘದ ಅಧ್ಯಕ್ಷ ಎಸ್‌.ಜಿತೇಂದ್ರ ಕುಮಾರ್‌, ನಿವೃತ್ತ ನ್ಯಾಯಮೂರ್ತಿ ಅಜಿತ್‌ ಜೆ.ಗುಂಜಾಳ್‌, ಚಿಕ್ಕಪೇಟೆ ಜಿನಮಂದಿರ ಅಧ್ಯಕ್ಷ ಟಿ.ಜಿ.ದೊಡ್ಡಮನಿ, ಚಕ್ರೇಶ್ವರಿ ಮಹಿಳಾ ಸಮಾಜದ ಅಧ್ಯಕ್ಷೆ ಡಾ.ಎಸ್‌.ಡಿ.ಪ್ರೇಮಕುಮಾರಿ ಮೊದಲಾದವರು ಇದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.