ಆದಾಯಕ್ಕಾಗಿ ಪೆಟ್ರೋಲ್‌ ಬಂಕ್ ಹಾದಿ ತುಳಿದ ಬಿಎಂಟಿಸಿ

10 ಕಡೆ ಜಾಗ ಗುರುತು?15 ದಿನಗಳಲ್ಲಿಟೆಂಡರ್‌ ಪ್ರಕ್ರಿಯೆ ಶುರು!  ತೈಲ ಮಾರಾಟಕ್ಕೆ ಮುಂದಾದ ನಿಗಮ

Team Udayavani, Jul 12, 2021, 1:07 PM IST

cats

 

  • ವಿಜಯಕುಮಾರ್‌ ಚಂದರಗಿ

ಬೆಂಗಳೂರು: ನಿರಂತರ ಆರ್ಥಿಕ ನಷ್ಟ ಎದುರಿಸುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪರ್ಯಾಯ ಆದಾಯ ಮೂಲಗಳತ್ತ ಮುಖಮಾಡುತ್ತಿದ್ದು,ಈ ನಿಟ್ಟಿನಲ್ಲಿ ಪೆಟ್ರೋಲ್‌- ಡೀಸೆಲ್‌ ಮಾರಾಟಕ್ಕೆ ಮುಂದಾಗಿದೆ! ಇದಕ್ಕಾಗಿ ಪೆಟ್ರೋಲ್‌ ಬಂಕ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಶಾಂತಿನಗರ, ಮೈಸೂರು ರಸ್ತೆ ಸೇರಿದಂತೆ ಕೇಂದ್ರಭಾಗದಲ್ಲಿರುವ ಆಯ್ದ ಹತ್ತು ಘಟಕಗಳನ್ನು ಗುರುತಿಸಲಾಗಿದೆ. ಅಲ್ಲಿ ಖಾಸಗಿ ವಾಹನಗಳಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ ತುಂಬಲಿದೆ.

ಬಿಎಂಟಿಸಿ ಡಿಪೋಗಳಲ್ಲಿ ಖಾಲಿ ಜಾಗಗಳಿವೆ. ಅದನ್ನು ಬಂಕ್‌ ಸ್ಥಾಪನೆಗಾಗಿ ಬಾಡಿಗೆ ಕೊಡಬಹುದು ಅಥವಾ ಸ್ವತಃ ಸಾರಿಗೆ ಸಂಸ್ಥೆಯು ಡೀಲರ್‌ಶಿಪ್‌ ತೆಗೆದುಕೊಂಡು ನೇರವಾಗಿ ಗ್ರಾಹಕರಿಗೆ ಪೆಟ್ರೋಲ್‌-ಡೀಸೆಲ್‌ ಮಾರಾಟ ಮಾಡಬಹುದು. ಈ ಎರಡೂ ಮಾದರಿಗಳು ತನ್ನ ಮುಂದಿವೆ. ಸೂಕ್ತವಾದುದನ್ನು ಆಡಳಿತ ಮಂಡಳಿ ಮುಂದಿಟ್ಟು ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲ ಗಳು ತಿಳಿಸಿವೆ. ಮೂಲಗಳಪ್ರಕಾರ ಡೀಲರ್‌ಶಿಪ್‌ಪಡೆಯಲುಬಿಎಂ ಟಿಸಿ ಆಸಕ್ತಿ ಹೊಂದಿದೆ. ಇದಕ್ಕಾಗಿ ಟೆಂಡರ್‌ ಕರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಒಂದು ವೇಳೆ ಇದೆಲ್ಲವೂ ಅಂದುಕೊಂಡಂತಾದರೆ, ಪೆಟ್ರೋಲ್‌- ಡೀಸೆಲ್‌ ನೇರ ಮಾರಾಟದಿಂದಲೇ ತಲಾ ಒಂದು ಬಂಕ್‌ನಿಂದ ಸಂಸ್ಥೆಗೆ ಕನಿಷ್ಠ ಐದು ಲಕ್ಷ ರೂ. ಆದಾಯ ಬರುತ್ತದೆ ಎಂದು ಅಂದಾಜಿಸಲಾಗಿದೆ.

ಆರಂಭದಲ್ಲಿ ಹತ್ತು ಡಿಪೋಗಳನ್ನು ತೆಗೆದುಕೊಂಡರೂ 50 ಲಕ್ಷ ರೂ. ಆಗುತ್ತದೆ. ಕೋವಿಡ್‌ ನಂತರ ಬಿಎಂಟಿಸಿ ಕಾರ್ಯಾಚರಣೆ ಆದಾಯ ಒಂದೂವರೆಕೋಟಿ ರೂ. ಇದೆ. ಅಂದರೆ ಹೆಚ್ಚು-ಕಡಿಮೆ ಶೇ. 30-40ರಷ್ಟು ಆದಾಯ ಹೆಚ್ಚು ಶ್ರಮವಿಲ್ಲದೆ, ಅನಾಯಾಸವಾಗಿ ಬರುತ್ತದೆ ಎನ್ನಲಾಗಿದೆ. ಸರ್ಕಾರದಒಂದುಅಂಗಸಂಸ್ಥೆಪೆಟ್ರೋಲ್‌-ಡೀಸೆಲ್‌ ಮಾರಾಟ ಮಾಡುವುದರಿಂದ ಗ್ರಾಹಕರಿಗೆ ಹೆಚ್ಚು ವಿಶ್ವಾಸ ಇರುತ್ತದೆ. ಅಲ್ಲದೆ, ಕೇಂದ್ರ ಭಾಗದಲ್ಲಿ ಡಿಪೋಗಳಿವೆ. ಈ ಕಾರಣಗಳಿಂದ ಸಹಜವಾಗಿ ಗ್ರಾಹಕರುಬಿಎಂಟಿಸಿಬಂಕ್‌ ಗಳಿಗೆ ಬರುತ್ತಾರೆ. ಬಂಕ್‌ಗಳಿಗೆ ಲೈಟ್‌ ಡ್ಯುಟಿಗೆ ನೇಮಿಸುವವರನ್ನು (ಸಾಮಾನ್ಯವಾಗಿ 50 ವರ್ಷ ಮೇಲ್ಪಟ್ಟವರು) ನಿಯೋಜಿಸಲು ಉದ್ದೇಶಿಸಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದರು.

ಉಳಿತಾಯ ಮತ್ತು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಕೆಲಸಕ್ಕೆಕತ್ತರಿ,ಕಡ್ಡಾಯ ಸ್ವಯಂ ನಿವೃತ್ತಿಯಂತಹ ಹಲವು ಆಯ್ಕೆಗಳು ಬಿಎಂಟಿಸಿ ಮುಂದಿವೆ. ಆದರೆ, ಮುಂದಿನ ದಿನಗಳಲ್ಲಿ ಕೊರೊನಾ ಅಲೆಗಳುಬರುತ್ತಲೇ ಇರುತ್ತವೆ.ಹಾಗಾಗಿ,ಜನವೈಯಕ್ತಿಕ ವಾಹನಗಳತ್ತ ಮುಖಮಾಡುತ್ತಿದ್ದಾರೆ. ಈ ಮಧ್ಯೆ ನಮ್ಮ ಮೆಟ್ರೋ ಜಾಲ ವಿಸ್ತರಣೆಯಾಗುತ್ತಿದೆ. ಉಪನಗರ ರೈಲು ಕೂಡ ಬರುತ್ತಿದೆ. ಪರಿಣಾಮ ಮಹಾನಗರ ಸಾರಿಗೆ ಸಂಸ್ಥೆ ತನ್ನ ಪ್ರಯಾಣಿಕರನ್ನು ಕಳೆದುಕೊಳ್ಳುತ್ತಿದೆ. ಆದ್ದರಿಂದ ಶಾಶ್ವತಆದಾಯ ಮೂಲಕ್ಕಾಗಿ ಪೆಟ್ರೋಲ್‌ ಬಂಕ್‌ಗಳನ್ನು ತೆರೆಯಲು ಅದು ಆಸಕ್ತಿ ಹೊಂದಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು. ಮುಂದಿನ ದಿನಗಳಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇದೇ ಬಂಕ್‌ಗಳ ಆವರಣದಲ್ಲಿ ವಾಣಿಜ್ಯ ಮಳಿಗೆಗಳನ್ನು ತೆರೆಯಲೂ ಬಿಎಂಟಿಸಿ ಚಿಂತನೆ ನಡೆಸಿದೆ. ಇಲ್ಲಿ ರೈತರ ಉತ್ಪನ್ನಗಳ ನೇರ ಮಾರಾಟಕ್ಕೆ ವೇದಿಕೆಕಲ್ಪಿಸು ವುದು, ಇದರಿಂದ ಗ್ರಾಹಕರಿಗೆ ಗುಣಮಟ್ಟದ ತರಕಾರಿ- ಹಣ್ಣು ದೊರೆಯುತ್ತವೆ. ಮತ್ತೂಂದೆಡೆ ರೈತರಿಗೂ ಅನುಕೂಲ ಆಗುತ್ತದೆ.ಈನಿಟ್ಟಿನಲ್ಲಿ ರೈತ ಉತ್ಪಾದಕ ಸಂಘಗಳ ಹುಡುಕಾಟ ನಡೆದಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.