ಡೀಸೆಲ್‌ ಮೇಲಿನ ತೆರಿಗೆ ಇಳಿಕೆಗೆ ಪೆಟ್ರೋಲಿಯಂ ವರ್ತಕರ ಮನವಿ


Team Udayavani, Dec 15, 2019, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾಮಂಡಳ ಶನಿವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು.

ನಗರದ ಡಾಲರ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿಗಳ ನಿವಾಸ “ಧವಳಗಿರಿ’ಯಲ್ಲಿ ಮಹಾಮಂಡಳದ ಅಧ್ಯಕ್ಷ ಎಚ್‌.ಎಸ್‌. ಮಂಜಪ್ಪ ನೇತೃತ್ವದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಿಯೋಗ, ಮುಂಬರುವ ಬಜೆಟ್‌ನಲ್ಲಿ ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ. 21ರಿಂದ ಕನಿಷ್ಠ ಶೇ. 18ಕ್ಕೆ ತಗ್ಗಿಸಬೇಕು ಎಂದು ಮನವಿ ಮಾಡಿತು.

ಕಳೆದ ವರ್ಷ ಬಜೆಟ್‌ನಲ್ಲಿ ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ. 2 ಹೆಚ್ಚಳ ಮಾಡಲಾಯಿತು. ಪರಿಣಾಮ ಗಡಿಭಾಗದ ಪೆಟ್ರೋಲ್‌ ಬಂಕ್‌ಗಳಲ್ಲಿ ಏಕಾಏಕಿ ಖರೀದಿ ವಹಿವಾಟು ಕುಸಿತ ಕಂಡಿದ್ದು, ಮಹಾರಾಷ್ಟ್ರ ಗಡಿಯಲ್ಲಿನ ಊರುಗಳು ಹಾಗೂ ಅಂತಾರಾಜ್ಯ ಸಾರಿಗೆ ವಾಹನಗಳು ವಿಮುಖವಾಗಿವೆ. ಇದರಿಂದ ವರ್ತಕರಿಗೆ ವ್ಯಾಪಾರ-ವಹಿವಾಟಿನಲ್ಲಿ ಶೇ. 40 ಇಳಿಕೆ ಆಗಿದೆ ಎಂದು ಮಹಾಮಂಡಳದ ಸದಸ್ಯರು ಅಲವತ್ತುಕೊಂಡರು.

ಬೀದರ್‌, ಬಾಗಲಕೋಟೆ, ಬೆಳಗಾವಿ, ವಿಜಯಪುರ ಸೇರಿದಂತೆ ಮಹಾರಾಷ್ಟ್ರ ಗಡಿ ಭಾಗದ ಪ್ರದೇಶಗಳಲ್ಲಿ ಸುಮಾರು 600ರಿಂದ 800 ಬಂಕ್‌ಗಳಿವೆ. ಅಲ್ಲಿಂದ ಕೇವಲ 5-10 ಕಿ.ಮೀ. ಅಂತರದಲ್ಲಿ ನೆರೆಯ ರಾಜ್ಯ ಇದೆ. ರಾಜ್ಯಕ್ಕೆ ಹೋಲಿಸಿದರೆ, ಆ ರಾಜ್ಯದಲ್ಲಿ ಡೀಸೆಲ್‌ ದರ ಪ್ರತಿ ಲೀ.ಗೆ 1ರಿಂದ 1.50 ರೂ. ಕಡಿಮೆ ಇದೆ. ಹಾಗಾಗಿ, ವಾಹನಗಳೆಲ್ಲ ಅತ್ತ ಮುಖಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಒಂದು ವೇಳೆ ವ್ಯಾಟ್‌ ಅನ್ನು ಶೇ. 3 ಕಡಿಮೆ ಮಾಡಿದರೆ, ಸರ್ಕಾರಕ್ಕೆ 650 ಕೋಟಿ ರೂ. ಆದಾಯ ಖೋತಾ ಆಗಬಹುದು. ಆದರೆ, ಇದರ ಬೆನ್ನಲ್ಲೇ ಡೀಸೆಲ್‌ ಖರೀದಿ ವಹಿವಾಟು ಹೆಚ್ಚಾಗಲಿದ್ದು, ಇದರಿಂದ ಸಾವಿರ ಕೋಟಿ ರೂ. ಆದಾಯ ಬರಲಿದೆ. ಅಂದರೆ ಹೆಚ್ಚು-ಕಡಿಮೆ 350 ಕೋಟಿ ರೂ. ಹೆಚ್ಚುವರಿಯಾಗಿ ಹರಿದುಬರಲಿದೆ ಎಂದು ಮನವೊಲಿಸುವ ಪ್ರಯತ್ನ ಮಾಡಲಾಯಿತು ಎಂದು ಎಚ್‌.ಎಸ್‌. ಮಂಜಪ್ಪ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎನ್ನಲಾಗಿದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.