ನಾಯಕರ ದೌಡು; ಸಮಸ್ಯೆಗಳ ಆಲಿಕೆ


Team Udayavani, Mar 22, 2017, 12:10 PM IST

umashri.jpg

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಧರಣಿ ಸ್ಥಳಕ್ಕೆ ವಿವಿಧ ಪಕ್ಷಗಳ ನಾಯಕರು ಮಂಗಳವಾರ ಭೇಟಿ ನೀಡಿದ್ದರು.  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಬೆಳಗ್ಗೆ ಹಾಗೂ ರಾತ್ರಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾ ನಿರತರ ಜತೆ ಚರ್ಚಿಸಿ “ನಿಮ್ಮ ಪರವಾಗಿ ಹೋರಾಟ ಮಾಡುತ್ತೇನೆ,” ಎಂದು ಭರವಸೆ ನೀಡಿದರು.

“ಪ್ರತಿಭಟನಾ ನಿರತರಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ ಅವರು, ಊಟ-ತಿಂಡಿ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದಾಗ, ಮಹಿಳೆಯರು ಬೇಡ,” ಎಂದು ನಿರಾಕರಿಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ಶೆಟ್ಟರ್‌, ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ನಮ್ಮ ಪಕ್ಷದ ಬೆಂಬಲವಿದೆ ಎಂದು ಹೇಳಿದರು. ಬಿಜೆಪಿ ವಕ್ತಾರ ಸಿ.ಟಿ.ರವಿ ಈ ವೇಳೆ ಹಾಜರಿದ್ದರು. 

ವಿಧಾನಪರಿಷತ್‌ ಸದಸ್ಯ, ಕಾಂಗ್ರೆಸ್‌ ಮುಖಂಡ ವಿ.ಎಸ್‌.ಉಗ್ರಪ್ಪ ಭೇಟಿ ನೀಡಿ, ಶೇ.50ರಷ್ಟಾದರೂ ಕೊಡುವಂತೆ ಮನವಿ ಮಾಡುತ್ತೇವೆ ಎಂದು ಭರವಸೆ ನೀಡಿದರು. 
ಪ್ರತಿಭಟನಾ ಸ್ಥಳಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿದ ವಿಧಾನಪರಿಷತ್‌ ಸದಸ್ಯೆ ಜಯಮಾಲಾ, ಶೀಘ್ರವೇ ಹೋರಾಟಗಾರರಿಗೆ ಜಯ ಲಭಿಸಲಿದೆ. ನಾನು, ಸರ್ಕಾರ ಮತ್ತು ಮುಖ್ಯಮಂತ್ರಿಗಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪರವಾಗಿಯೇ ಇದ್ದೇವೆ.

ಹೋರಾಟದ ಬಗ್ಗೆ ಈಗಾಗಲೇ ಉಮಾಶ್ರೀಯವರು ಸರ್ಕಾರದ ಗಮನಕ್ಕೆ ತಂದಿದ್ದು, ಅಗತ್ಯ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ. ಪ್ರತಿಭಟನಾನಿರತರಿಗೆ ಅಗತ್ಯವಾದ ನೀರು ಸರಬರಾಜಿಗೆ ಆದೇಶ ನೀಡಲಾಗಿದೆ. ಸಂಚಾರಿ ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಭದ್ರತೆ ಒದಗಿಸಲು ಹೆಚ್ಚಿನ ಮಹಿಳಾ ಪೊಲೀಸರನ್ನು ನೇಮಿಸುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಲಾಗಿದೆ. ಸರ್ಕಾರ ನಿಮ್ಮ ಪರವಾಗಿದೆ. ಕುಳಿತು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಕೊಳ್ಳೋಣವೆಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರರು ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿಯವರೇ ಆಗಮಿಸಿ, ಸಮಸ್ಯೆ ಬಗೆಹರಿಸಬೇಕು. ಅಲ್ಲಿಯವರೆಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆಸಲಾಗುವುದು ಎಂದು ಪಟ್ಟುಹಿಡಿದರು. ಮಾಜಿ ಸಚಿವ ಬಸವರಾಜ ಹೊರಟಿ, ಮಾಜಿ ಸಚಿವೆ ಮೋಟಮ್ಮ, ಮಾಜಿ ಶಾಸಕ ಶಿವರಾಮರೆಡ್ಡಿ, ಆಮ್‌ಆದ್ಮಿ ರಾಜ್ಯ ಸಂಚಾಲಕ ಶಿವಕುಮಾರ್‌ ಚೆಂಗಲರಾಯ ಸೇರಿದಂತೆ ಹಲವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. 

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.