ಎಲ್ಲ ವಿವಿಗಳಲ್ಲೂ ಏಕಕಾಲದಲ್ಲಿ ಪಿಎಚ್‌.ಡಿ ನೋಟಿಫಿಕೇಷನ್‌?


Team Udayavani, Dec 1, 2018, 6:00 AM IST

ph-d.jpg

ಬೆಂಗಳೂರು: ಪಿಎಚ್‌ಡಿ ನೋಟಿಫಿಕೇಷನ್‌ಗೆ ಅವಕಾಶ ನೀಡಿ ಎಂದು ಹಲವು ವಿಶ್ವವಿದ್ಯಾಲಯಗಳಿಂದ  ಪ್ರಸ್ತಾವನೆ ಸಲ್ಲಿಕೆಯಾಗಿ ತಿಂಗಳುಗಳೇ ಉರುಳಿದ್ದು, ಏಕಕಾಲದಲ್ಲಿ ಅನುಮತಿ ನೀಡುವ ಬಗ್ಗೆ ಸರ್ಕಾರ ಈಗ ಯೋಚನೆ ಮಾಡುತ್ತಿದೆ.

ಸ್ನಾತಕೋತ್ತರ ಪಡೆದ ಯಾರು ಬೇಕಾದರೂ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ನ ವಿದ್ಯಾರ್ಥಿಗಳಿಗೆ ಬೋಧನೆ ಮಾಡಬಹುದು. ಆದರೆ, ಸರ್ಕಾರಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಲು ನೆಟ್‌, ಸ್ಲೆಟ್‌ ಅಥವಾ ಪಿಎಚ್‌.ಡಿ ಅತಿಮುಖ್ಯ.  ನೆಟ್‌ ಉತ್ತೀರ್ಣರಾಗಿ ಪಿಎಚ್‌.ಡಿ ಪದವಿ ಪಡೆದಿದ್ದರೆ ಮೊದಲ ಅದ್ಯತೆ ನೀಡಲಾಗುತ್ತದೆ. ಪ್ರತಿ ವಿಶ್ವವಿದ್ಯಾಲಯದಲ್ಲೂ ಪ್ರತಿ ವರ್ಷ ಲಭ್ಯವಿರುವ ಸೀಟುಗಳ ಆಧಾರದಲ್ಲಿ ಪಿಎಚ್‌.ಡಿ ನೋಟಿಫಿಕೇಷನ್‌ ಹೊರಡಿಸಲಾಗುತ್ತದೆ.

ರಾಜ್ಯದ ವಿವಿಧ ವಿವಿಗಳು 2018-19ನೇ ಸಾಲಿನ ಪಿಎಚ್‌.ಡಿ ನೋಟಿಫಿಕೇಷನ್‌ಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ತಿಂಗಳುಗಳೇ ಕಳೆದಿವೆ. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ವಿವಿಯ ಅಧಿಕಾರಿಗಳಿಗೆ ಪಿಎಚ್‌.ಡಿ ನೋಟಿಫಿಕೇಷನ್‌ ಹೊರಡಿಸಲು ಸಾಧ್ಯವಾಗುತ್ತಿಲ್ಲ. ಸಾಮಾನ್ಯವಾಗಿ ಪಿಎಚ್‌.ಡಿ ನೋಂದಣಿ ಪ್ರಕ್ರಿಯೆಗಳು ಇಷ್ಟೊತ್ತಿಗಾಗಲೇ ಅಥವಾ ಡಿಸೆಂಬರ್‌ ಮೊದಲ ವಾರದೊಳಗೆ ಆರಂಭವಾಗಬೇಕು. ಆದರೆ, ಸರ್ಕಾರ ಅನುಮತಿ ಇನ್ನೂ ನೀಡದೇ ಇರುವುದರಿಂದ ಪ್ರಸಕ್ತ ಸಾಲಿನ ನೋಟಿಫಿಕೇಷನ್‌ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೂ ಏಕಕಾಲದಲ್ಲಿ ಪಿಎಚ್‌ಡಿ ನೋಟಿಫಿಕೇಷನ್‌ ಹೊರಡಿಸಲು ಅನುಮತಿ ನೀಡುವ ಬಗ್ಗೆ ಸರ್ಕಾರದ ಹಂತದಲ್ಲಿ ಯೋಚನೆ ನಡೆಯುತ್ತಿದೆ. ಹೀಗಾಗಿಯೆ ವಿವಿಧ ವಿವಿಗಳಿಂದ ನೀಡಿರುವ ಪಿಎಚ್‌.ಡಿ ನೋಟಿಫಿಕೇಷನ್‌ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. 

ರಾಜ್ಯಪಾಲರಿಂದ ಈವರೆಗೆ ಸರ್ಕಾರಕ್ಕೆ ಈ ಸಂಬಂಧ ಯಾವುದೇ ನಿರ್ದೇಶನ ಬಂದಿಲ್ಲ. ಹೀಗಾಗಿ ವಿವಿಗಳಿಗೆ ನೋಟಿಫಿಕೇಷನ್‌ ಕುರಿತು ಅನುಮತಿ ನೀಡಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಒಂದು ವರ್ಷ ಅವಶ್ಯಕ :ಪಿಎಚ್‌ಡಿ ನೋಟಿಫಿಕೇಷನ್‌ಗೆ ಸರ್ಕಾರ ಅನುಮತಿ ನೀಡಿದ ತಕ್ಷಣವೇ  ಅಭ್ಯರ್ಥಿಗಳನ್ನು ಸೇರಿಸಿಕೊಂಡು ಸಂಶೋಧನಾ ಪ್ರಕ್ರಿಯೆ ಆರಂಭಿಸಲು ಸಾಧ್ಯವಿಲ್ಲ. ವಿವಿಗಳಲ್ಲಿ ಲಭ್ಯವಿರುವ ಪ್ರಾಧ್ಯಾಪಕರು, ಸಹ ಮತ್ತು ಸಹಾಯಕ ಪ್ರಾಧ್ಯಾಪಕರ ಆಧಾರದಲ್ಲಿ ಕ್ರಮವಾಗಿ ಒಬ್ಬೊಬ್ಬರಿಗೆ ತಲಾ 8, 6 ಹಾಗೂ 4 ಸಂಶೋಧನಾ ವಿದ್ಯಾರ್ಥಿಗಳನ್ನು ಗೊತ್ತು ಮಾಡುವಂತೆ ಪ್ರಸ್ತಾವನೆಯಲ್ಲಿ ಸಲಹೆ ಮಾಡಲಾಗಿದೆ.

ಸರ್ಕಾರ ಇದಕ್ಕೆ ಒಪ್ಪಿಗೆ ಕೊಟ್ಟ ನಂತರ, ಪತ್ರಿಕೆಗಳಲ್ಲಿ ಈ ಸಂಬಂಧ ಜಾಹೀರಾತು ನೀಡಿ, ಅರ್ಜಿ ಆಹ್ವಾನಿಸಬೇಕು. ಬಂದಿರುವ ಅರ್ಜಿಗಳನ್ನೆಲ್ಲ ಪರಿಶೀಲಿಸಿ, ಅಗತ್ಯ ದಾಖಲೆಯ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಬೇಕು. ಪ್ರವೇಶ ಪತ್ರದಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಪಿಎಚ್‌.ಡಿ ನೋಂದಣಿ ಪ್ರಕ್ರಿಯೆ ನಡೆಯುತ್ತದೆ. ಇದಾದ ನಂತರ ಅಭ್ಯರ್ಥಿಗಳಿಂದ ಸಂಶೋಧನಾ ಪ್ರಬಂಧ ವಿಷಯ ಆಯ್ಕೆ, ಅದಕ್ಕೆ ಟಿಪ್ಪಣಿ ಪಡೆಯುವುದು, ಇದೆಲ್ಲ ಪ್ರಕ್ರಿಯೆ ಮುಗಿದ ನಂತರ 6 ತಿಂಗಳ ಕೋರ್ಸ್‌ ವರ್ಕ್‌ ಇರುತ್ತದೆ. ಇದು ಪುರ್ಣಗೊಂಡ ನಂತರ ಮಾರ್ಗದರ್ಶಕರ ಸೂಚನೆಯಂತೆ ಸಂಶೋಧನಾ ಪ್ರಕ್ರಿಯೆ ಆರಂಭವಾಗಲಿದೆ. ಇಷ್ಟೆಲ್ಲ ಪ್ರಕ್ರಿಯೆ ನಡೆಸಲು ಕನಿಷ್ಠ ಒಂದು ವರ್ಷ ಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪಿಎಚ್‌.ಡಿ ಸೀಟು ಲಭ್ಯತೆ ಹಾಗೂ ನಮ್ಮಲ್ಲಿರುವ ಪ್ರಾಧ್ಯಾಪಕರ ಮಾಹಿತಿ ಸಹಿತವಾಗಿ ಪ್ರಸ್ತಾವನೆಯನ್ನು ಮೂರೂವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಅಲ್ಲಿಂದ ಇನ್ನೂ ಅನುಮತಿ ಸಿಗದೇ ಇರುವುದರಿಂದ ವಿವಿ ನೋಟಿಫಿಕೇಷನ್‌ ಹೊರಡಿಸಲು ಸಾಧ್ಯವಿಲ್ಲ.
– ಪ್ರೊ.ಕೆ.ಆರ್‌.ವೇಣುಗೋಪಾಲ್‌, ಕುಲಪತಿ, ಬೆಂವಿವಿ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.