ದಂಧೆ ರೂಪ ಪಡೆದ ಮಾಲಿನ್ಯ ತಪಾಸಣೆ


Team Udayavani, Aug 3, 2019, 3:09 AM IST

dandhe

ಬೆಂಗಳೂರು: ನಗರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ನಕಲಿ ಮಾಲಿನ್ಯ ಪರೀಕ್ಷಾ ಪ್ರಮಾಣ ಪತ್ರ (ಎಮಿಷನ್‌ ಸರ್ಟಿಫಿಕೇಟ್‌) ವಿತರಿಸುತ್ತಿರುವ ನೂರಾರು ಕೇಂದ್ರಗಳು ನಾಯಿಕೊಡೆಗಳಂತೆ ತಲೆಯೆತ್ತುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಇದೊಂದು ಅಕ್ರಮ ದಂಧೆಯಾಗಿ ಬದಲಾಗುತ್ತಿದೆ. ಈ ದಂಧೆಯು ನಗರದ ವಾಯುಮಾಲಿನ್ಯದಲ್ಲಿ ಪರೋಕ್ಷವಾಗಿ ಕೊಡುಗೆ ನೀಡುತ್ತಿದೆ.

ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ವಂಚನೆ ಮತ್ತು ದುರುಪಯೋಗ ವಿಭಾಗದ ಅಧಿಕಾರಿಗಳ ತನಿಖೆಯಲ್ಲಿ ಈ ಅಂಶ ಬೆಳಕಿಗೆಬಂದಿದ್ದು, ಅನಧಿಕೃತ ಸಾಫ್ಟ್ವೇರ್‌ಗಳನ್ನು ಬಳಸಿಕೊಂಡು ನಕಲಿ ಪ್ರಮಾಣ ಪತ್ರ ನೀಡುತ್ತಿರುವುದು ಹಾಗೂ ಸರ್ಕಾರದ ಅಧಿಕೃತ ಹಾಲೋಗ್ರಾಂಗಳನ್ನು ನಕಲು ಮಾಡುತ್ತಿರುವುದು ಕಂಡುಬಂದಿದೆ. ಈಗಾಗಲೇ ವಾಹನಗಳದಟ್ಟಣೆಯಿಂದ ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಈ ಮಧ್ಯೆ ನಕಲಿ ಪ್ರಮಾಣಪತ್ರದ ಹಾವಳಿಯು ಮತ್ತಷ್ಟು ಮಾಲಿನ್ಯ ಹೆಚ್ಚಳಕ್ಕೆ ಕಾರಣವಾಗುತ್ತಿದೆ.

ಇದರೊಂದಿಗೆ ಅಕ್ರಮ ದಂಧೆಕೋರರು ವಿತರಿಸುತ್ತಿರುವ ನಕಲಿ ಪರೀಕ್ಷಾ ಪ್ರಮಾಣ ಪತ್ರಗಳಿಂದ ಪರಿಸರ ಹಾನಿ ಮಾತ್ರವಲ್ಲ; ಸಾರ್ವಜನಿಕರ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ದಾಖಲಾಗಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್‌ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.

ಬೆನ್ನಲ್ಲೇ ತನಿಖೆ ಕೈಗೊಂಡಿದ್ದ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು, ನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ 894 ಮಾಲಿನ್ಯ ಪರೀಕ್ಷಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಆ ಪೈಕಿ 650 ಕೇಂದ್ರಗಳ ಪರಿಶೀಲನೆ ನಡೆಸಿದ್ದು, ನಕಲಿ ಪ್ರಮಾಣಪತ್ರ ವಿತರಿಸುತ್ತಿದ್ದ 21 ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಅಕ್ರಮ ದಂಧೆ ಹೇಗೆ?: ನಿಯಮದ ಪ್ರಕಾರ ಮಾಲಿನ್ಯ ನಿಯಂತ್ರಣ ಪರೀಕ್ಷಾ ಕೇಂದ್ರ (ಎಮಿಷನ್‌ ಟೆಸ್ಟಿಂಗ್‌ ಸೆಂಟರ್‌) ತೆರೆಯಲು ಸಾರಿಗೆ ಇಲಾಖೆ ಅನುಮತಿ ಕಡ್ಡಾಯ. ಅರ್ಜಿ ಸಲ್ಲಿಸುವ ವ್ಯಕಿ ಕೇಂದ್ರದ ಸ್ಥಳದ ಸುತ್ತಳತೆ ಹಾಗೂ ಇತರೆ ಮಾಹಿತಿಯನ್ನು ಅರ್ಜಿ ನಮೂದಿಸಿ, ಎರಡು ಸಾವಿರ ರೂ. ಶುಲ್ಕ ಹಾಗೂ 10 ಸಾವಿರ ರೂ. ಠೇವಣಿ ಇಡಬೇಕು. ಬಳಿಕ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಪರವಾನಿಗೆ ನೀಡುತ್ತಾರೆ. ಇದರೊಂದಿಗೆ ಇಲಾಖೆ ಜತೆ ಒಡಂಬಡಿಕೆ ಮಾಡಿಕೊಂಡಿರುವ ಎವಿಎಂ ಸಂಸ್ಥೆಯ ಯಂತ್ರೋಪಕರಣ ಹಾಗೂ ಸಾಫ್ಟ್ವೇರ್‌ ಖರೀದಿಸಬೇಕು. ಬಳಿಕ ಇಲಾಖೆ ಕೊಡುವ ಹಾಲೋಗ್ರಾಂಗಳನ್ನು ಪರೀಕ್ಷಾ ಪ್ರಮಾಣ ಪತ್ರಕ್ಕೆ ಅಂಟಿಸಿ ಅಧಿಕೃತವಾಗಿ ವಾಹನ ಸವಾರರಿಗೆ ವಿತರಿಸಬೇಕು.

ಆದರೆ, ಕೆಲ ವ್ಯಕ್ತಿಗಳು ಸಾರಿಗೆ ಇಲಾಖೆಯನ್ನು ಸಂಪರ್ಕಿಸದೆ ನೇರವಾಗಿ ಕೇಂದ್ರಗಳನ್ನು ತೆರೆದು, ಖಾಸಗಿ ಕಂಪನಿಯ ಯಂತ್ರೋಪಕರಣಗಳನ್ನು ಬಳಸಿಕೊಂಡು, ಇಲಾಖೆಯ ಸಾಫ್ಟ್ವೇರ್‌ ಮಾದರಿಯ ನಕಲಿ ಸಾಫ್ಟ್ವೇರ್‌ಗಳನ್ನು ಕಂಪ್ಯೂಟರ್‌ಗೆ ಅಳವಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ನಕಲಿ ಹಾಲೋಗ್ರಾಂಗಳನ್ನು ತಾವೇ ಸಿದ್ಧಪಡಿಸಿಕೊಂಡು ನಕಲಿ ಪ್ರಮಾಣ ಪತ್ರ ವಿತರಣೆ ಮಾಡುತ್ತಿದ್ದಾರೆ ಎಂಬುದು ತನಿಖೆ ವೇಳೆ ಬಯಲಾಗಿದೆ.

ಡಿಸೇಲ್‌ ವಾಹನಗಳು 60ರಿಂದ 65 ಹ್ಯಾಟ್ರಿಡ್ಜ್ ಸ್ಮೋಕ್‌ ಯೂನಿಟ್‌(ಎಚ್‌ಎಸ್‌ಯು) ಇರಬೇಕು. ಪೆಟ್ರೋಲ್‌ ವಾಹನಗಳು “ಸಿ ಓ’ (ಕಾರ್ಬನ್‌ ಮೊನಾಕ್ಸೈಡ್‌) ಇಂತಿಷ್ಟು ಪ್ರಮಾಣದಲ್ಲಿ ಇರಬೇಕು ಎಂಬ ನಿಯಮ ಇದೆ. ಆದರೆ, ಈ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ದಂಧೆಕೋರರು ಹೆಚ್ಚು ವಿಷಯುಕ್ತ ಹೊಗೆ ಉಗುಳುವ ವಾಹನಗಳಿಗೂ ದೃಢಿಕೃತ ಪ್ರಮಾಣ ಪತ್ರ ವಿತರಣೆ ಮಾಡುತ್ತಿದ್ದಾರೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಹೇಳಿದರು.

ಪರಿಶೀಲನೆ ಹೀಗೆ: ಪರೀಕ್ಷಾ ಕೇಂದ್ರಗಳ ವಿರುದ್ಧ ಆರೋಪ ಕೇಳಿ ಬಂದ ಕೂಡಲೇ ದಾಳಿ ನಡೆಸಲಾಗುತ್ತಿತ್ತು. ಆದರೆ, ಕಳೆದೊಂದು ದಶಕಗಳಿಂದ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ ವಾಹನ ಅಥವಾ ಮಾಲಿನ್ಯ ಪರೀಕ್ಷಾ ಕೇಂದ್ರಗಳ ಮೇಲೆ ಹೆಚ್ಚು ನಿಗಾವಹಿಸಲು ಪ್ರತ್ಯೇಕ ವಿಭಾಗ ತರೆಯಲಾಗಿದ್ದು, ಅಗತ್ಯಬಿದ್ದಲ್ಲಿ ಕೂಡಲೇ ಅಧಿಕೃತ ಯಂತ್ರಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತಿದೆ.

ಒಂದು ವೇಳೆ ನಕಲಿ ಪ್ರಮಾಣ ಪತ್ರ ವಿತರಣೆ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದರೆ ಸಾರ್ವಜನಿಕರು ಕೂಡಲೇ ಸಾರಿಗೆ ಇಲಾಖೆಗೆ ಮಾಹಿತಿ ನೀಡಬಹುದು. ನಂತರ ತಪ್ಪಿತಸ್ಥ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿ ವಿವರಿಸಿದರು. ಆದರೆ, ಇದುವರೆಗೂ ರಾಜ್ಯದ ಯಾವುದೇ ಅಕ್ರಮ ಪರೀಕ್ಷಾ ಕೇಂದ್ರಗಳ ಮೇಲೆ ಸ್ವಯಂಪ್ರೇರಿತವಾಗಿ ಇಲಾಖೆ ದಾಳಿಯೇ ಮಾಡಿಲ್ಲ ಎಂಬ ಅಂಶವು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಗೊಂದಲವೇ ಅಕ್ರಮಕ್ಕೆ ದಾರಿ?: ಸಾರಿಗೆ ಇಲಾಖೆ ಮತ್ತು ಸಂಚಾರ ಪೊಲೀಸರ ತಪಾಸಣೆ ಗೊಂದಲವೇ ಅಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಲಾಗಿದೆ. ಮೋಟಾರ್‌ ವಾಹನ ಕಾಯ್ದೆ ಪ್ರಕಾರ ಸಾರಿಗೆ ಮತ್ತು ಸಂಚಾರ ವಿಭಾಗದ ಪೊಲೀಸರಿಗೆ ಮಾತ್ರ ಹೊಗೆ ಉಗುಳುವ ವಾಹನಗಳ ತಪಾಸಣೆ ಮಾಡುವ ಅಧಿಕಾರ ಇದೆ. ಆದರೆ, ಈ ಎರಡು ಇಲಾಖೆಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ.

ಮಾಲಿನ್ಯ ತಪಾಸಣಾ ಯಂತ್ರೋಪಕರಣಗಳು ಇಲ್ಲದಿರುವುದರಿಂದ ವಾಹನಗಳ ಹೊಗೆ ಪ್ರಮಾಣ ಪರೀಕ್ಷೆ ಮಾಡುವುದಿಲ್ಲ. ಆದರೆ, ಪ್ರಮಾಣ ಪತ್ರದ ಬಗ್ಗೆ ಮಾತ್ರ ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎನ್ನುತ್ತಾರೆ ಸಂಚಾರ ಪೊಲೀಸರು. ಇನ್ನು ಸಾರಿಗೆ ಇಲಾಖೆ ಬಳಿ ಉಪಕರಣಗಳು ಇದ್ದರೂ ಅವುಗಳನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಇದು ನಕಲಿ ಪ್ರಮಾಣ ಪತ್ರಗಳ ವಿತರಣೆಗೆ ಮತ್ತಷ್ಟು ಅವಕಾಶ ನೀಡಿದಂತಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸುತ್ತವೆ.

ಆರೋಗ್ಯದ ಮೇಲೆ ಪರಿಣಾಮ: ಪೆಟ್ರೋಲ್‌ ಆಧಾರಿತ ವಾಹನಗಳು ಉಗುಳುವ ಕಾರ್ಬನ್‌ಮೋನಾಕ್ಸೈಡ್‌ ಮತ್ತು ಹೈಡ್ರೋಕಾರ್ಬನ್‌ ಹಾಗೂ ಡಿಸೇಲ್‌ ವಾಹನಗಳಿಂದ ಹೊರ ಬರುವ ಹೊಗೆಯಿಂದ ನೈಟ್ರೋಜನ್‌ ಆಕ್ಸಿಡ್‌, ಸಲ್‌ಫ್ಯೂರ್‌ ಡೈಆಕ್ಸಿಡ್‌ನಿಂದ ಪರಿಸರ ಮತ್ತು ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಮಂಡಳಿಯಿಂದ ತಪಾಸಣೆ ಇಲ್ಲ!: ಪರಿಸರದಲ್ಲಿ ಉಂಟಾಗುವ ನೀರು, ಶಬ್ಧ ಮತ್ತು ವಾಯು ಮಾಲಿನ್ಯದ ಬಗ್ಗೆ ಮಾತ್ರ ಮಾಹಿತಿ ಸಂಗ್ರಹಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಮಾಲಿನ್ಯ ಪರೀಕ್ಷಾ ಪ್ರಮಾಣ ಪತ್ರ ಕೇಂದ್ರಗಳಾಗಲಿ, ಹೊಗೆ ಉಗುಳುವ ವಾಹನಗಳ ತಪಾಸಣೆ ಮಾಡುವುದಿಲ್ಲ. ಮಾಲಿನ್ಯ ಪರೀಕ್ಷಾ ಕೇಂದ್ರಗಳಿಗೆ ಪರವಾನಿಗೆ ಕೊಡುವುದು ಹಾಗೂ ವಾಹನ ತಪಾಸಣೆ ಮಾಡುವುದು ಸಾರಿಗೆ ಇಲಾಖೆ ಮತ್ತು ಸಂಚಾರ ಪೊಲೀಸರ ಕೆಲಸ. ಒಂದು ವೇಳೆ ಸಾರಿಗೆ ಇಲಾಖೆ ಅಥವಾ ಸಂಚಾರ ಪೊಲೀಸರ ಮನವಿ ಮೇರೆಗೆ ಇಲಾಖೆಯ ಅಧಿಕಾರಿ ಹಾಗೂ ಮಾಲಿನ್ಯ ಪರೀಕ್ಷಾ ಯಂತ್ರವನ್ನೊಳಗೊಂಡ ವಾಹನ ಕಳುಹಿಸುತ್ತೇವೆ. ಅಕ್ರಮ ಕೇಂದ್ರಗಳ ಬಗ್ಗೆ ಸಾರಿಗೆ ಇಲಾಖೆಯೇ ನಿಗಾ ವಹಿಸಬೇಕು ಎನ್ನುತ್ತಾರೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು.

ಬಿಎಂಟಿಸಿ ಬಸ್‌ಗಳ ಪರೀಕ್ಷೆ: ನಗರದಲ್ಲಿ ಸಂಚರಿಸುವ ಸಾವಿರಾರು ಬಿಎಂಟಿಸಿ ಬಸ್‌ಗಳ ಹೊಗೆ ತಪಾಸಣೆ ನಡೆಸಲು ಘಟಕಗಳಲ್ಲಿ ಪ್ರತ್ಯೇಕ ಯಂತ್ರ ಅಳವಡಿಸಿಕೊಂಡಿದ್ದು, ಪ್ರತಿ ಮೂರು ದಿನಕ್ಕೊಮ್ಮೆ ಎಲ್ಲ ಬಸ್‌ಗಳನ್ನು ಪರಿಶೀಲಿಸುತ್ತಾರೆ. ಆದರೂ ನಗರದಲ್ಲಿ ಸಂಚರಿಸುವ ಬಸ್‌ಗಳು ದಟ್ಟವಾದ ಹೊಗೆ ಉಗುಳುತ್ತಿವೆ. ಹೀಗಾಗಿ ಬಿಎಂಟಿಸಿ ಘಟಕಗಳಲ್ಲಿರುವ ತಪಾಸಣಾ ಯಂತ್ರಗಳನ್ನು ಪರಿಶೀಲಿಸುವ ಅಗತ್ಯವಿದೆ ಎನ್ನುತ್ತಾರೆ ಸಂಚಾರ ಪೊಲೀಸ್‌ ಅಧಿಕಾರಿಯೊಬ್ಬರು.

ಮಾಲಿನ್ಯ ಪ್ರಮಾಣ ಪತ್ರ ವಿತರಣಾ ಕೇಂದ್ರಗಳು (ಸಾರಿಗೆ ಇಲಾಖೆ ಪ್ರಕಾರ)
ಬೆಂಗಳೂರು 356
ಬೆಂಗಳೂರು ಹೊರತು ಪಡಿಸಿ 654
ಒಟ್ಟು- 1,010

ನಕಲಿ ಸೆಂಟರ್‌ಗಳ ಮೇಲೆ ನಿಗಾವಹಿಸಲಾಗಿದ್ದು, 21 ಕೇಂದ್ರಗಳ ವಿರುದ್ಧ ವಿಲ್ಸನ್‌ಗಾರ್ಡ್‌ನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಸರದ ಮೇಲೆ ಉಂಟಾಗುವ ಪರಿಣಾಮವನ್ನು ಪರಿಗಣಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಅಕ್ರಮ ಮಾಲಿನ್ಯ ಪರೀಕ್ಷಾ ಪ್ರಮಾಣ ಪತ್ರ ವಿತರಿಸುವ ಕೇಂದ್ರಗಳ ಮೇಲೆ ಇ-ಆಡಳಿತ ಮತ್ತು ಪರಿಸರ ವಿಭಾಗದ ಅಧಿಕಾರಿಗಳಿಂದ ವಿಶೇಷ ಕಾರ್ಯಾಚರಣೆಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಅಕ್ರಮ ದಂಧೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ.
-ಶಿವರಾಜ್‌ ಬಿ.ಪಾಟೀಲ್‌, ಅಪರ ಸಾರಿಗೆ ಆಯುಕ್ತರು

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.