ನೋಟು ಬದಲು ಮಾಡಲು ಚೆನ್ನೈಗೆ ಹೋಗಬೇಕೆ?


Team Udayavani, Jan 3, 2017, 3:45 AM IST

2BNP-(13).jpg

ಬೆಂಗಳೂರು: 500, 1000 ಮುಖಬೆಲೆಯ ನೋಟು ಬದಲಾವಣೆ ಪ್ರಕ್ರಿಯೆಯನ್ನು ದಿಢೀರ್‌ ರದ್ದುಪಡಿಸಿದ್ದನ್ನು ವಿರೋಧಿಸಿ ನೃಪ್ತತುಂಗ ರಸ್ತೆಯಲ್ಲಿರುವ ಆರ್‌ಬಿಐ ಪ್ರಾದೇಶಿಕ ಕಚೇರಿ ಎದುರು ಸೋಮವಾರ ಸಾರ್ವಜನಿಕರು ಪ್ರತಿಭಟನೆಗಿಳಿದ ಪರಿಣಾಮ ಕೆಲ ಹೊತ್ತು ಬಿಗುವಿನ ವಾತಾವರಣ ನೆಲೆಸಿತ್ತು.

ಗರಿಷ್ಠ ಮೌಲ್ಯದ ನೋಟುಗಳು ರದ್ದುಗೊಂಡ ಬಳಿಕ ಕೇಂದ್ರ ಸರ್ಕಾರವು ಆರ್‌ಬಿಐ ಶಾಖೆಗಳಲ್ಲಿ ನೋಟುಗಳ ಬದಲಾವಣೆಗೆ ಮಾ.31 ವರೆಗೆ ಗಡುವು ನೀಡಿದೆ. ಅದರಂತೆ ನೋಟು ಬದಲಾವಣೆ ಸಂಬಂಧ ಶನಿವಾರ ಕೂಡ ಆರ್‌ಬಿಐ ಕಚೇರಿ ಬಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಆದರೆ, ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ನೋಟು ಬದಲಾವಣೆಗೆ ಸ್ಥಗಿತಗೊಳಿಸಲಾಗಿದೆ ಎಂದು ಆರ್‌ಬಿಐ ಕೇಂದ್ರ ಕಚೇರಿಯು ಫ್ಯಾಕ್ಸ್‌ ಸಂದೇಶ ಕಳುಹಿಸಿತು. ಹೀಗಾಗಿ ಅಧಿಕಾರಿಗಳು, ಹಳೆ 500 ಮತ್ತು 1000 ಮುಖಬೆಲೆಯ ನೋಟುಗಳ ಸ್ವೀಕಾರವನ್ನು ನಿಲ್ಲಿಸಿದರು.

ಆರ್‌ಬಿಐ ದಿಢೀರ್‌ ತನ್ನ ನಿರ್ಧಾರ ಬದಲಿಸಿದ್ದು ಗೊಂದಲಕ್ಕೆ ಕಾರಣವಾಗಿದೆ. ಏಕಾಏಕಿ ತನ್ನ ನಿರ್ಧಾರ ಬದಲಿಸಿದ ಆರ್‌ಬಿಐ ಕೇಂದ್ರ ಕಚೇರಿಯು, ಬೆಂಗಳೂರು ಕೈ ಬಿಟ್ಟು ಚೆನ್ನೈ ಸೇರಿದಂತೆ ದೇಶದ ಆಯ್ದ ಐದು ಆರ್‌ಬಿಐ ಪ್ರಾದೇಶಿಕ ಕಚೇರಿಗಳಲ್ಲಿ ಮಾತ್ರವಷ್ಟೇ ರದ್ದುಗೊಂಡ ನೋಟುಗಳ ಬದಲಾವಣೆಗೆ ಅವಕಾಶ ನೀಡಿದೆ. ಇದರಿಂದ ಬೆಂಗಳೂರಿಗರು ಚೆನ್ನೈ ಆರ್‌ಬಿಐಗೆ ತೆರಳಿ ನೋಟು ಬದಲಾಯಿಸಿಕೊಳ್ಳಬೇಕಿದೆ ಎಂದು ಮೂಲಗಳು ಹೇಳಿವೆ.ಇದರಿಂದ ಕೆರಳಿದ ಸಾರ್ವಜನಿಕರು ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧರಣಿಗೆ ಮುಂದಾದರು.

ಅಲ್ಲದೆ, ಕೆಲವರು ಬ್ಯಾಂಕ್‌ ಅಧಿಕಾರಿಗಳ ಜತೆ ವಾಗ್ವಾದಕ್ಕಿಳಿದರು. ಇದರಿಂದ ಕೆಲ ಹೊತ್ತು ಬ್ಯಾಂಕ್‌ ಮುಂದೆ ಗೊಂದಲ ವಾತಾವರಣ ನೆಲೆಸಿತು. ಅಷ್ಟರಲ್ಲಿ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು, ಬ್ಯಾಂಕ್‌ ಅಧಿಕಾರಿಗಳನ್ನು ಭೇಟಿಯಾಗಿ ವಿಚಾರಿಸಿದಾಗ ಆರ್‌ಬಿಐ ಆದೇಶ ಪ್ರತಿ ನೀಡಿದ ಅಧಿಕಾರಿಗಳು ಪರಿಸ್ಥಿತಿ ವಿವರಿಸಿದರು.

ಈ ಆದೇಶ ಪ್ರತಿಯನ್ನು ಸಾರ್ವಜನಿಕರಿಗೆ ತೋರಿಸಿದ ಪೊಲೀಸರು, ಹಿರಿಯ ಅಧಿಕಾರಿಗಳ ಸೂಚನೆಯನ್ನು ಪ್ರಾದೇಶಿಕ ಕಚೇರಿ ಅಧಿಕಾರಿಗಳು ಪಾಲಿಸಬೇಕಿದೆ ಎಂದು ವಾಸ್ತವ ಸಂಗತಿ ಮನವರಿಕೆ ಮಾಡಿಕೊಟ್ಟ ಬಳಿಕ ಪರಿಸ್ಥಿತಿ ಶಾಂತವಾಯಿತು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.