Bangalore: ಹೊರವಲಯದಲ್ಲಿ ಪ್ಲಾಸ್ಟಿಕ್‌ ರಾಶಿಗಳಿಗೆ ಬೆಂಕಿ


Team Udayavani, Jan 11, 2024, 11:27 AM IST

Bangalore: ಹೊರವಲಯದಲ್ಲಿ ಪ್ಲಾಸ್ಟಿಕ್‌ ರಾಶಿಗಳಿಗೆ ಬೆಂಕಿ

ಬೆಂಗಳೂರು: ಸಿಲಿಕಾನ್‌ಸಿಟಿಯ ಹೊರವಲಯ ವ್ಯಾಪ್ತಿಯಲ್ಲಿ ಕಸದ ರಾಶಿಗಳು ಎಲ್ಲೆಂದರಲ್ಲಿ ಕಾಣಿಸಿಕೊಳ್ಳುತ್ತಿರುವುದರ ಜತೆಗೆ ಕಸದ ರಾಶಿಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರು ಮೂಲದ ಎನ್‌ಜಿಒ ದತ್ತಾಂಶಗಳ ಪ್ರಕಾರ ಕಳೆದ 8 ತಿಂಗಳಲ್ಲಿ 37 ಕಸದ ರಾಶಿಗಳಿಗೆ ಬೆಂಕಿ ಹಾಕಲಾಗಿದೆ. ಇದಲ್ಲದೆ ಬೆಂಗಳೂರು ದಕ್ಷಿಣ ವ್ಯಾಪ್ತಿ ಕನಕಪುರ ರಸ್ತೆ ಹಲವು ಕಡೆಗಳಲ್ಲಿ ರಾಶಿ- ರಾಶಿ ಕಸ ರಸ್ತೆಗಳ ಇಕ್ಕೆಲಗಳಲ್ಲೇ ಹಾಕುತ್ತಿರುವುದು ಕಂಡು ಬಂದಿದೆ.

ಕೆಲವು ಕಡೆಗಳಲ್ಲಿ ಘನತಾಜ್ಯಕ್ಕೆ ಬೆಂಕಿ ಹಚ್ಚುವುದು ಮುಂದುವರಿದಿದೆ. ಕನಕಪುರ ರಸ್ತೆಯಲ್ಲಿ ಅಷ್ಟೇ ಅಲ್ಲ, ಸರ್ಜಾಪುರ, ವರ್ತೂರು, ಚಿಕ್ಕತಿರುಪತಿ ರಸ್ತೆಗಳು ಸೇರಿದಂತೆ ಬೆಂಗಳೂರಿನ ಸುತ್ತಮುತ್ತ ಇದೇ ಸ್ಥಿತಿಯಿದೆ. ಪಾಲಿಕೆ ಅಧಿಕಾರಿಗಳು ಮೌನವಹಿಸಿರುವುದೇ ಇದಕ್ಕೆ ಕಾರಣ ಎಂದು ತಲಘಟ್ಟಪುರದ ನಿವಾಸಿ ಜಗದೀಶನ್‌ ದೂರುತ್ತಾರೆ. ಘನ ತ್ಯಾಜ್ಯದಲ್ಲಿ ಪ್ಲಾಸ್ಟಿಕ್‌ ವಸ್ತುಗಳೇ ಹೆಚ್ಚು ಇರುವುದರಿಂದ ಮಾನವನಿಗೆ ಅಪಾಯಕಾರಿ. ಜತೆಗೆ ಹೊಗೆಯ ಮೂಲಕ ವಿಷ ಅನಿಲ ಹೊರ ಹೊಮ್ಮುವುದರಿಂದ ಜನರ ಮೇಲೆ ದುಷ್ಪರಿಣಾಮ ಬೀರುತ್ತದೆ. ಈ ಬಗ್ಗೆ ಪಾಲಿಕೆಯ ಅಧಿಕಾರಿಗಳು ಘನ ತ್ಯಾಜ್ಯಕ್ಕೆ ಬೆಂಕಿ ಹಚ್ಚುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಬೇಕು ಎಂದು ಒತ್ತಾಯಿಸುತ್ತಾರೆ. ಸುಧಾರಣೆ ಕಂಡುಬಂದಿಲ್ಲ: ಕಸದ ರಾಶಿ ಮತ್ತು ಸುಡುವಿಕೆಯು ನಗರದ ಹದಗೆಡುತ್ತಿರುವ ವಾಯು ಗುಣಮಟ್ಟ ಸೂಚ್ಯಂಕಕ್ಕೆ ಗಮನಾರ್ಹ ಕೊಡುಗೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಕಸ ಸುಡುವ ಮತ್ತು ಸುರಿಯುವುದಕ್ಕೆ ಬಿಬಿಎಂಪಿ ಯಿಂದ ಸಾಕಷ್ಟು ದಂಡ ವಿಧಿಸಲಾಗಿದ್ದರೂ, ಪ್ರತ್ಯೇಕಿಸದ ತ್ಯಾಜ್ಯ ರಾಶಿಯಲ್ಲಿ ಯಾವುದೇ ಗಮನಾರ್ಹ ಸುಧಾರಣೆ ಕಂಡುಬಂದಿಲ್ಲ ಎಂದು ಪರಿಸರವಾದಿ ಯಲ್ಲಪ್ಪ ರೆಡ್ಡಿ ಹೇಳುತ್ತಾರೆ. ಪ್ಲಾಸ್ಟಿಕ್‌ ತ್ಯಾಜ್ಯಗಳಿಗೆ ಬೆಂಕಿ ಹೆಚ್ಚುವುದರಿಂದ ಡೈಯಾಕ್ಸಿನ್‌ ಎಂಬ ರಾಸಾಯನಿಕವನ್ನು ಹೊರಹಾಕ ಲಿದೆ. ಇದು ಕ್ಯಾನ್ಸರ್‌ಗೆ ಮೂಲ ಕಾರಣವಾಗಿದೆ. ಆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯವ್ಯಾಪಿ ಕ್ಯಾನ್ಸರ್‌ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಸರ್ಕಾರವೂ ಎಚ್ಚೆತ್ತುಕೊಳ್ಳಬೇಕಿದೆ. ಈ ಹಿಂದೆ ಕಸದ ವಿಚಾರಕ್ಕೆ ಸಂಬಂಧಿಸಿದಂತೆ ಅದಾಲತ್‌ ನಡೆಸಲಾಗುತ್ತಿತ್ತು. ಆದರೆ ಈಗ ಅದು ನಿಂತು ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಂತ್ರಣ : ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಕ್ಕೆ ಬೆಂಕಿ ಹಚ್ಚುವುದು ಮತ್ತು ಎಲ್ಲೆಂದರಲ್ಲಿ ಕಸ ಹಾಕುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆ ಆಗಿದೆ. ಆದರೆ ರಾಜಧಾನಿ ಹಲವು ತಾಲೂಕುಗಳ ಪ್ರದೇಶಗಳು ನಗರ ಜಿಪಂ ಹಾಗೂ ಪಾಲಿಕೆ ವ್ಯಾಪ್ತಿಗೆ ಸೇರಿವೆ. ಆದರೆ ಸ್ಥಳ ಪರಿಶೀಲನೆ ಮಾಡಿದಾಗ ಆ ಪ್ರದೇಶ ಗ್ರಾಪಂ ವ್ಯಾಪ್ತಿಗೆ ಸೇರದಿರುವುದು ನಮ್ಮ ಅರಿವಿಗಿದೆ ಎಂದು ಪಾಲಿಕೆ ಘನತಾಜ್ಯ ವಿಶೇಷ ಆಯುಕ್ತ ಡಾ.ಹರೀಶ್‌ಕುಮಾರ್‌ ಹೇಳುತ್ತಾರೆ. ಆಯಾ ಗ್ರಾಪಂಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ. ಈ ಹಿಂದೆ ಎಲ್ಲೆಂದರಲ್ಲಿ ಘನ ತಾಜ್ಯ ಸುರಿಸುವುದು ಮತ್ತು ಬೆಂಕಿ ಹಚ್ಚುವ ಪ್ರಕರಣಗಳ ಬಗ್ಗೆ ನಗರ ಜಿಲ್ಲಾಡಳಿತದ ಗಮನಕ್ಕೆ ಬಿಬಿಎಂಪಿ ತಂದಿದೆ. ಪಪಂ, ಗ್ರಾಪಂಗಳು ಈ ಸಂಬಂಧ ಕ್ರಮ ಕೈಗೊಳ್ಳ ಬೇಕಾಗಿದೆ. ಆದರೆ ಪಾಲಿಕೆಯಂತೂ ಮಾರ್ಷಲ್‌ಗ‌ಳ ಮೂಲಕ ಕಸಕ್ಕೆ ಬೆಂಕಿ ಹಾಕುವವರ, ಕಸ ಸುರಿವವರ ಮೇಲೆ ಕಣ್ಣಿಟ್ಟಿದೆ. ಪ್ರಕರಣ ಕಂಡು ಬಂದರೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಪ್ಲಾಸ್ಟಿಕ್‌ ಉತ್ಪನ್ನಗಳಿಗೆ ಬೆಂಕಿ ಹಚ್ಚುವುದರಿಂದ ಅದು ಹಲವು ಹಾನಿಕಾರಕ ವಿಷ ಅಂಶಗಳನ್ನು ಹೊರಹಾಕಲಿದೆ. ಈ ವಿಷಕಾರಿ ಅನಿಲ ಸೇವನೆಯಿಂದ ದೇಹದ ಎಲ್ಲ ಅಂಗಾಂಗಳ ಮೇಲೆ ದುಷ್ಪರಿಣಾಮ ಬೀರಲಿದೆ. ಲೀವರ್‌, ಲಂಗ್‌, ಬ್ರೈನ್‌ ಕ್ಯಾನ್ಸರ್‌ಗಳು ಬರುವ ಸಾಧ್ಯತೆ ಇದೆ. ಡಾ.ವಿ.ಲೋಕೇಶ್‌, ನಿರ್ದೇಶಕರು ಕ್ವಿದಾಯಿ ಆಸ್ಪತ್ರೆ

 

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.