ಪ್ಲಾಸ್ಟಿಕ್‌ ಬಳಕೆ: ದಂಡ ಪ್ರಯೋಗ


Team Udayavani, Jul 17, 2019, 3:09 AM IST

plastic-ba

ಬೆಂಗಳೂರು: ನಗರದಲ್ಲಿ ಪ್ಲಾಸ್ಟಿಕ್‌ ಬಳಸುವ ವ್ಯಾಪಾರಿಗಳ ಮೇಲೆ ದಂಡ ಪ್ರಯೋಗಿಸುವ ಅಸ್ತ್ರವನ್ನು ಬಿಬಿಎಂಪಿ ಮುಂದುವರಿಸಿದೆ.

ಪ್ಲಾಸ್ಟಿಕ್‌ ಬಳಕೆಯ ನಿಷೇಧ ಆಂದೋಲನದ ಭಾಗವಾಗಿ ಪಾಲಿಕೆಯ ಎಂಟು ವಲಯಗಳ ಪ್ರಮುಖ ಸ್ಥಳಗಳಲ್ಲಿರುವ ಸಗಟು ವ್ಯಾಪಾರ ಮಳಿಗೆಗಳ ಮತ್ತು ಅಂಗಡಿ ಮಾಲೀಕರ ಮೇಲೆ ಪಾಲಿಕೆಯ ಆರೋಗ್ಯಾಧಿಕಾರಿ ನೇತೃತ್ವದ ತಂಡಗಳು ದಾಳಿ ನಡೆಸಿದ್ದು,

ಪ್ಲಾಸ್ಟಿಕ್‌ ಕೈ ಚೀಲ, ತಟ್ಟೆ, ಪಾಲಿಥಿನ್‌ ಬ್ಯಾಗ್‌ ಸೇರಿದಂತೆ ವಿವಿಧ ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನ ಮಾರಾಟ ಮಾಡುತ್ತಿದ್ದ 559 ಮಳಿಗೆಗಳು ಮತ್ತು 439 ಬೀದಿಬದಿ ವ್ಯಾಪಾರಿ ಅಂಗಡಿಗಳಿಂದ ಒಟ್ಟು 1,335 ಕೆ.ಜಿ ಪ್ಲಾಸ್ಟಿಕ್‌ ಜಪ್ತಿ ಮಾಡಿದ್ದು, 4.36 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.

ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡುವ ಆಂದೋಲನಕ್ಕೆ ಸೋಮವಾರ ಮೇಯರ್‌ ಚಾಲನೆ ನೀಡಿದ್ದರು. ಸೋಮವಾರ 2.95 ಲಕ್ಷ ರೂ. ದಂಡ ಸಂಗ್ರಹಿಸಲಾಗಿತ್ತು. ಮಂಗಳವಾರ ಕಾರ್ಯಾಚರಣೆ ಮುಂದುವರಿದಿದ್ದು, 4.36 ಲಕ್ಷ ರೂ. ಮೊತ್ತದ ದಾಖಲೆ ದಂಡ ಸಂಗ್ರಹಿಸಲಾಗಿದೆ.

ದಕ್ಷಿಣ ವಲಯದಲ್ಲಿ ಶ್ರೀನಗರ, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್‌, ಕೋರಮಂಗಲ ಕ್ಲಬ್‌ ರಸ್ತೆ, ಮಡಿವಾಳ ಸಂತೆ, ಜಯನಗರ 2ನೇ ಬ್ಲಾಕ್‌ ಹಾಗೂ 8, 9ನೇ ಮುಖ್ಯ ರಸ್ತೆಗಳ ಸುತ್ತಮುತ್ತಲಿನ ಮಳಿಗೆಗಳ ಮೇಲೆ ದಾಳಿ ನಡೆಸಿ, 84 ಕೆ.ಜಿ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳಲಾಗಿದ್ದು, 51,500 ಸಾವಿರ ರೂ. ದಂಡ ಸಂಗ್ರಹಿಸಲಾಗಿದೆ.

ಪಶ್ಚಿಮ, ಪೂರ್ವ, ಬೊಮ್ಮನಹಳ್ಳಿ ಹಾಗೂ ಆರ್‌.ಆರ್‌. ನಗರ ವಲಯಗಳ ವಿವಿಧ ವಾರ್ಡ್‌ಗಳಲ್ಲಿರುವ ಅಂಗಡಿಗಳಲ್ಲಿ ತಪಾಸಣೆ ನಡೆಸಿ ಒಟ್ಟು 725 ಕೆ.ಜಿ. ಪ್ಲಾಸ್ಟಿಕ್‌ ಜಪ್ತಿ ಮಾಡಿ 2,69,500 ರೂ. ದಂಡ ಸಂಗ್ರಹಿಸಲಾಗಿದೆ.

ಮಹದೇವಪುರ ವಲಯದ ರಾಮಮೂರ್ತಿನಗರ ಮುಖ್ಯರಸ್ತೆ, ಹೊರಮಾವು, ಕಗ್ಗದಾಸಪುರ ಮುಖ್ಯರಸ್ತೆ, ಬೆಳ್ಳಂದೂರು, ದೇವಸಂದ್ರ, ದೊಡ್ಡನೆಕ್ಕುಂದಿ ಹಾಗೂ ವರ್ತೂರು ಮುಖ್ಯರಸ್ತೆಗಳಲ್ಲಿರುವ 46 ಮಳಿಗೆಗಳಲ್ಲಿ ತಪಾಸಣೆ ನಡೆಸಿ 43 ಸಾವಿರ ರೂ. ದಂಡ ಹಾಗೂ ದಾಸರಹಳ್ಳಿ ವಲಯದ ನೆಲಗದರನಹಳ್ಳಿ,

ಎಚ್‌ಎಂಟಿ ಬಡಾವಣೆ, ಚೊಕ್ಕಸಂದ್ರ, ಯಲಹಂಕ ವಲಯದ ಅಮೃತನಗರ, ಭದ್ರಪ್ಪ ಲೇಔಟ್‌, ಯಲಹಂಕ ಬಿಬಿ ರಸ್ತೆ, ಕಟ್ಟಿಗೇನಹಳ್ಳಿ, ದೊಡ್ಡಬೊಮ್ಮಸಂದ್ರ ಹಾಗೂ ಪುಟ್ಟೇನಹಳ್ಳಿಯಲ್ಲಿರುವ ಮಳಿಗೆಗಳಲ್ಲಿ ತಪಾಸಣೆ ನಡೆಸಿ ಒಟ್ಟು 72 ಸಾವಿರ ರೂ. ದಂಡ ಸಂಗ್ರಹ ಮಾಡಲಾಗಿದೆ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.