ರಾಜ್ಯಸಭೆ: 4 ಸ್ಥಾನಗಳಿಗೆ ಐವರ ಫೈಟ್‌, ಕುದುರೆ ವ್ಯಾಪಾರ ಭೀತಿ


Team Udayavani, Mar 16, 2018, 6:00 AM IST

Vidhana-Saudha-3-600.jpg

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆ ಕಣ ತೀವ್ರ ರಂಗೇರಿದ್ದು ನಾಲ್ಕು ಸ್ಥಾನಗಳಿಗೆ ಐವರು ಅಖಾಡದಲ್ಲಿದ್ದು ಮೂರೂ ಪಕ್ಷಗಳಿಗೆ ಕುದುರೆ ವ್ಯಾಪಾರ ಭೀತಿ ಶುರುವಾಗಿದೆ. ನಾಮಪತ್ರ ವಾಪಸ್‌ ಪಡೆಯಲು ಅಂತಿಮ ದಿನವಾದ ಗುರುವಾರ ಯಾರೊಬ್ಬರೂ ಕಣದಿಂದ ಹಿಂದೆ ಸರಿಯದಿರುವುದರಿಂದ ಚುನಾವಣೆ ನಡೆಯುವುದು ನಿಶ್ಚಿತವಾಗಿದೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ತನ್ನ  ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ರಹಸ್ಯ ಕಾರ್ಯತಂತ್ರದಲ್ಲಿ ತೊಡಗಿವೆ.

ಸಂಖ್ಯಾಬಲದ ಮೇಲೆ ಬಿಜೆಪಿ ಸುಲಭವಾಗಿ ತನ್ನ ಓರ್ವ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲಿದ್ದು ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ಗೆಲ್ಲಲು ಎರಡು ಮತಗಳ ಕೊರತೆ ಎದುರಾಗಲಿದೆ. ಜೆಡಿಎಸ್‌ಗೆ 14 ಮತಗಳ ಕೊರತೆಯಿದ್ದರೂ ಯಾವ ಧೈರ್ಯದ ಮೇಲೆ ಅಭ್ಯರ್ಥಿ ಕಣದಲ್ಲಿ ಉಳಿದಿದ್ದಾರೆ ಎಂಬ ಬಗ್ಗೆ ಕಾಂಗ್ರೆಸ್‌ ಮತ್ತು ಬಿಜೆಪಿ ತಲೆಕೆಡಿಸಿಕೊಂಡಿವೆ.

ಪಕ್ಷೇತರರು, ಕೆಲವು ಕಾಂಗ್ರೆಸ್‌, ಬಿಜೆಪಿ ಸದಸ್ಯರು ಜೆಡಿಎಸ್‌ ಅಭ್ಯರ್ಥಿಗೆ ಮತ ಹಾಕಲಿದ್ದಾರೆ. ಈಗಾಗಲೇ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಏಳು ಬಂಡಾಯ ಶಾಸಕರು ಈ ಬಾರಿ ಕಾಂಗ್ರೆಸ್‌ ಪರ ಮತದಾನ ಮಾಡದಂತೆ ಜೆಡಿಎಸ್‌ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಅದು ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದುನೋಡಬೇಕಾಗಿದೆ. ಕಾಂಗ್ರೆಸ್‌ನ  ಮೂರೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆ ಪ್ರಶ್ನೆಯಾಗಿದ್ದು, 2 ಮತಗಳ ಕೊರತೆಯಿದೆ. ದ್ವಿತೀಯ ಪ್ರಾಶಸ್ತ್ಯದ ಮತಗಳು ಮತ್ತು ಜೆಡಿಎಸ್‌ನ ಬಂಡಾಯ ಶಾಸಕರಲ್ಲದೆ ಇತರೆ ಜೆಡಿಎಸ್‌ ಶಾಸಕರ ಮತಗಳಿಗೂ ಗಾಳ ಹಾಕಲಾಗಿದೆ ಎಂಬ ಮಾತುಗಳು ಇವೆ.

ಯಾರೂ ಹಿಂಪಡೆದಿಲ್ಲ: ನಾಮಪತ್ರ ವಾಪಸ್‌ ಪಡೆಯಲು ಗುರುವಾರ ಮಧ್ಯಾಹ್ನ 3 ಗಂಟೆವರೆಗೂ ಕಾಲಾವಕಾಶ ಇತ್ತಾದರೂ  ಯಾರೂ ವಾಪಸ್‌ ಪಡೆಯಲಿಲ್ಲ. ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ಕಾರ್ಯದರ್ಶಿ ಎಸ್‌.ಮೂರ್ತಿ, ರಾಜ್ಯಸಭೆಯ 4 ಸ್ಥಾನಗಳಿಗೆ ಐವರು ನಾಮಪತ್ರ ಸಲ್ಲಿಸಿದ್ದು ಯಾರೂ ನಾಮಪತ್ರ ವಾಪಸ್‌ ಪಡೆಯದ ಕಾರಣ ಮಾ. 23ರಂದು ಚುನಾವಣೆ ನಡೆಯಲಿದೆ ಎಂದರು. 224 ಸಂಖ್ಯಾಬಲದ ವಿಧಾನಸಭೆಯಲ್ಲಿ ರಾಜೀನಾಮೆ ಹಾಗೂ ನಿಧನ ಹಿನ್ನೆಲೆಯಲ್ಲಿ ಏಳು ಸ್ಥಾನ ತೆರವಾಗಿದ್ದು 217 ಶಾಸಕರು ಮತದಾನದ ಹಕ್ಕು ಹೊಂದಿದ್ದಾರೆ. ಮತದಾನ ಕುರಿತು ಎಲ್ಲ ಶಾಸಕರಿಗೂ ಮಾಹಿತಿ ಕಳುಹಿಸಲಾಗುವುದು ಎಂದು ತಿಳಿಸಿದರು.

ಪ್ರತಿ ಅಭ್ಯರ್ಥಿ ಗೆಲ್ಲಲು ಎಷ್ಟು ಮತ ಪಡೆಯಬೇಕು ಎಂಬ ಪ್ರಶ್ನೆಗೆ, ಪ್ರತಿ ಸದಸ್ಯನ ಮತ ಮೌಲ್ಯ 100. ಆದರೆ ಅಂದು ಎಷ್ಟು ಶಾಸಕರು ಮತದಾನ ಮಾಡಲಿದ್ದಾರೆ. ಪುರಸ್ಕೃತ ಎಷ್ಟು? ಒಂದೊಮ್ಮೆ ಇದ್ದರೆ ತಿರಸ್ಕೃತ ಎಷ್ಟು ಎಂಬುದರ ಆಧಾರದ ಮೇಲೆ ಗೆಲ್ಲಲು ಎಷ್ಟು ಮತ ಎಂಬುದು ನಿರ್ಧಾರವಾಗುತ್ತದೆ ಎಂದರು.

ಜೆಡಿಎಸ್‌ನ 7 ಬಂಡಾಯ ಶಾಸಕರು ಕಳೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ವಿಪ್‌ ಉಲ್ಲಂಘಿಸಿರುವ ಬಗ್ಗೆ 
ಸ್ಪೀಕರ್‌ಗೆ ಕೊಟ್ಟಿರುವ ದೂರಿನ ಬಗ್ಗೆ ಇನ್ನೂ ಕ್ರಮ ಕೈಗೊಳ್ಳದಿರುವ ಬಗ್ಗೆ ಕೇಳಿದಾಗ, ಆ ವಿಚಾರ ಸಭಾಧ್ಯಕ್ಷರ ಮುಂದಿದ್ದು ಅವರೇ ತೀರ್ಮಾನ ಕೈಗೊಳ್ಳಲಿದ್ದಾರೆ. 

ಸ್ಪರ್ಧಾ ಕಣದಲ್ಲಿರುವ ಅಭ್ಯರ್ಥಿಗಳು
ಡಾ|ಎಲ್‌. ಹನುಮಂತಯ್ಯ (ಕಾಂಗ್ರೆಸ್‌)
ನಾಸಿರ್‌ ಹುಸೇನ್‌ (ಕಾಂಗ್ರೆಸ್‌)
ಜಿ.ಸಿ.ಚಂದ್ರಶೇಖರ್‌ (ಕಾಂಗ್ರೆಸ್‌)
ರಾಜೀವ್‌ಚಂದ್ರಶೇಖರ್‌ (ಬಿಜೆಪಿ)
ಬಿ.ಎಂ.ಫಾರೂಕ್‌ (ಜೆಡಿಎಸ್‌)

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.