ಫಿನಿಕ್ಸ್‌ ಮಾಲ್‌ನಲ್ಲಿ ವಿಷಪೂರಿತ ರಾಸಾಯನಿಕ ಸೋರಿಕೆ


Team Udayavani, Mar 29, 2019, 11:49 AM IST

pinix-mall

ಬೆಂಗಳೂರು: ಮಹದೇವಪುರದ ಫಿನಿಕ್ಸ್‌ ಮಾಲ್‌ನಲ್ಲಿ ಗುರುವಾರ ವಿಷಪೂರಿತ ರಸಾಯನಿಕ ಹಾಗೂ ಪರಮಾಣು ಸೋರಿಕೆಯಾಗಿತ್ತು! ಕೆಲವೇ ನಿಮಿಷಗಳಲ್ಲಿ ಜನರು ದಿಕ್ಕಾಪಾಲಾಗಿ ಓಡಿದರು. ಭದ್ರತಾ ಸಿಬ್ಬಂದಿಯೂ ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು.

ಮಾಹಿತಿ ತಿಳಿದ ಕೆಲಹೊತ್ತಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ದೌಡಾಯಿಸಿ, ರಸಾಯನಿಕ ಸೋರಿಕೆ ವಿಫ‌ಲಗೊಳಿಸಲು ಕಾರ್ಯಾಚರಣೆ ಶುರುಮಾಡಿತು. ರಸಾಯನಿಕ ಸೇವಿಸಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗಂಟೆಗೂ ಅಧಿಕ ಕಾಲ ನಡೆದ ಕಾರ್ಯಾಚರಣೆ ಬಳಿಕ ಎಲ್ಲರೂ ನಿಟ್ಟುಸಿರು ಬಿಟ್ಟರು.

ಅದು ಅಣಕು ಪ್ರದರ್ಶನ: ವಿಷಪೂರಿತ ರಸಾಯನಿಕ, ಪರಮಾಣು, ಜೈವಿಕ ಇಂಧನಗಳು ಸೋರಿಕೆ ಆದರೆ ಅಥವಾ ದಾಳಿ ನಡೆದರೆ ಯಾವ ರೀತಿ ಸಾರ್ವಜನಿಕರು ಸ್ಪಂದಿಸಬೇಕು, ರಕ್ಷಣಾ ಕಾರ್ಯ ಹೇಗೆ ನಡೆಯಲಿದೆ ಎಂದು ಎನ್‌ಡಿಆರ್‌ಎಫ್ ತಂಡ ನಡೆಸಿಕೊಟ್ಟ ಅಣಕು ಪ್ರದರ್ಶನದಲ್ಲಿ ಕಂಡು ಬಂದ ಚಿತ್ರಣವಿದು.

ಭಾರೀ ಜನರು ಸೇರುವ ಮಾಲ್‌ಗ‌ಳಲ್ಲಿ ಈ ರೀತಿಯ ದಾಳಿಗಳು ನಡೆದರೆ ಹೇಗೆ ಪರಿಸ್ಥಿತಿ ನಿಭಾಯಿಸಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಡೆದ ಅಣಕು ಕಾರ್ಯಾಚರಣೆಯಲ್ಲಿ ರಾಜ್ಯ ಅಗ್ನಿಶಾಮಕ ದಳ ಹಾಗೂ ರಾಜ್ಯ ಸಿವಿಲ್‌ ಡಿಫೆನ್ಸ್‌ ತಂಡದವರು ಪಾಲ್ಗೊಂಡಿದ್ದರು.

ಅಣಕು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಎನ್‌ಡಿಆರ್‌ಎಫ್ನ ಅಸಿಸ್ಟೆಂಟ್‌ ಕಮಾಂಡೆಂಟ್‌ ಕೆ.ಎಸ್‌ ಸುಭೀಶ್‌ ಮಾತನಾಡಿ, ಮಾಲ್‌ಗ‌ಳಲ್ಲಿ ಸಹಸ್ರಾರು ಸಂಖ್ಯೆಯ ಜನರು ಸೇರುತ್ತಾರೆ. ಹೀಗಾಗಿ, ಮಾಲ್‌ನ ಸಿಬ್ಬಂದಿ ಹಾಗೂ ಸಾರ್ವಜನಿಕರು ರಾಸಾಯನಿಕ ದಾಳಿ ನಡೆದರೆ ಯಾವ ರೀತಿ ಸ್ಪಂದಿಸಬೇಕು.

ಹೀಗಾಗಿ ಮಾಲ್‌ಗ‌ಳಲ್ಲಿ ಅಣಕು ಪ್ರದರ್ಶನ ನೀಡಲಾಗುತ್ತಿದೆ. ಸಾರ್ವಜನಿಕರಿಗೆ ಕೂಡ ಇದರ ಬಗ್ಗೆ ಜಾಗೃತಿ ಮೂಡಿಸು ಉದ್ದೇಶ ಇದಾಗಿದೆ ಎಂದು ಕರಪತ್ರಗಳನ್ನು ಹಂಚಲಾಗಿದೆ ಎಂದು ತಿಳಿಸಿದರು.

ಅಣಕು ಕಾರ್ಯಾಚರಣೆಯಲ್ಲಿ ಪಾಲ್ಗೊಂಡವರು
-ಎನ್‌ಡಿಆರ್‌ಎಫ್ – 35 ಸಿಬ್ಬಂದಿ
-ಪೊಲೀಸರು – 25
-ಅಗ್ನಿಶಾಮಕ ದಳ -25
-ಸಿವಿಲ್‌ ಡಿಫೆನ್ಸ್‌ -10
-ವೈದ್ಯಕೀಯ ಸಿಬ್ಬಂದಿ -10
-ಮಾಲ್‌ ಭದ್ರತಾ ಸಿಬ್ಬಂದಿ -75
-ಮಾಲ್‌ನ ಆಡಳಿತ ಸಿಬ್ಬಂದಿ -10
-ಮಾಲ್‌ನ ಶಾಪ್‌ಗ್ಳ ಸಿಬ್ಬಂದಿ -140
-ಸಾರ್ವಜನಿಕರು -500

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.