ಆರಕ್ಷಕರ ಅದ್ಧೂರಿ ಪರಿಸರ ದಿನ


Team Udayavani, Jun 6, 2019, 3:05 AM IST

sasi-nie

ಬೆಂಗಳೂರು: ಕೈಯಲ್ಲಿ ಲಾಠಿ ಹಿಡಿದು ಕಾನೂನು ಸುವ್ಯವಸ್ಥೆ ಕಾಪಾಡುವ, ಸಂಚಾರ ನಿರ್ವಹಣೆ ಮಾಡುವ ನಗರ ಪೊಲೀಸರು ಬುಧವಾರ ಸಸಿ ನೆಡುವ ಮೂಲಕ “ಪರಿಸರ ದಿನಾಚರಣೆ’ ಆಚರಿಸಿದರು.

ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ನಗರದ ಜಿ.ಕೆ. ಎಚ್‌.ಪಿ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಜತೆ ಗಿಡ ನೆಟ್ಟು ಪರಿಸರ ಜಾಗೃತಿ, ಪರಿಸರ ಮಹತ್ವದ ಬಗ್ಗೆ ಸಲಹೆ ನೀಡಿದರು. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ನೇತೃತ್ವದಲ್ಲಿ ಜಯನಗರ ಉಪವಿಭಾಗದ ಠಾಣೆಗಳಲ್ಲಿ ನಡೆದ ಆರಕ್ಷಕರ ಸಸಿ ನೆಡುವ ಕಾರ್ಯಕ್ಕೆ ಹಿರಿಯ ನಟ ಶ್ರೀನಾಥ್‌, ಸಾಹಿತಿ ಬರಗೂರು ರಾಮಚಂದ್ರಪ್ಪ ಸಾಥ್‌ ನೀಡಿದರು.

ಜಯನಗರ, ಬಸವನಗುಡಿ, ಜೆ.ಪಿ ನಗರ ಸೇರಿದಂತೆ ಹಲವು ಪೊಲೀಸ್‌ ಠಾಣೆಗಳ ಆವರಣಗಳಲ್ಲಿ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯ ಆಯೋಜಿಸಲಾಗಿತ್ತು. . ಠಾಣಾ ಸಿಬ್ಬಂದಿಯು ತಾವು ನೆಟ್ಟ ಸಸಿಗಳನ್ನು ಪೋಷಿಸುವ ಜವಾಬ್ದಾರಿ ಹೊತ್ತುಕೊಂಡರು. ಜತೆಗೆ, ಪ್ರತಿವರ್ಷವೂ ಸಸಿ ನೆಟ್ಟು ಪೋಷಿಸುವುದಾಗಿ ಕಂಕಣ ತೊಟ್ಟರು.

ಸಿಬ್ಬಂದಿ ಹೆಸರಲ್ಲಿ ಒಂದೊಂದು ಸಸಿ: ಪೀಣ್ಯ ಸಂಚಾರ ಪೊಲೀಸ್‌ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಎಸ್‌. ಪಾರ್ವತಮ್ಮ ಅವರ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮ ವಿಶೇಷವಾಗಿತ್ತು. ಠಾಣೆಯ ಆವರಣದಲ್ಲಿ 35ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ನೀರೆರೆಯಲಾಯಿತು. ಈ ವರ್ಷ ಸೇವೆಯಿಂದ ನಿವೃತ್ತರಾಗಲಿರುವ ಸಿಬ್ಬಂದಿಯ ಹೆಸರಿನಲ್ಲಿ ಒಂದೊಂದು ಸಸಿ ನೆಟ್ಟಿದ್ದು ವಿಶೇಷವಾಗಿತ್ತು.

ಹಲವು ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸಿಬ್ಬಂದಿ ನಿವೃತ್ತರಾಗುತ್ತಾರೆ. ಅವರ ನೆನಪು ಸದಾಕಾಲ ಉಳಿಯುವಂತೆ ಸ್ಮರಣೀಯವಾಗಿಸಲು ಸಸಿಗಳನ್ನು ಅವರ ಹೆಸರಿನಲ್ಲಿ ನೆಡಲಾಯಿತು. ಇದು ನಾವು ಅವರಿಗೆ ಸಲ್ಲಿಸುವ ಗೌರವವೂ ಸಹ ಆಗಿದೆ. ಠಾಣೆಯ ಎಲ್ಲ ಸಿಬ್ಬಂದಿಗಳಿಗೂ ಸಸಿಯೊಂದನ್ನು ಕೊಡುಗೆಯಾಗಿ ನೀಡಿದ್ದು ಅದನ್ನು ಪೋಷಿಸುವ ಬಗ್ಗೆ ಪ್ರಮಾಣ ವಚನ ಬೋಧಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ವಿವರಿಸಿದರು.

ಮಲ್ಲೇಶ್ವರಂ ಸಂಚಾರ ಠಾಣೆ ಸೇರಿದಂತೆ ಉತ್ತರ ವಿಭಾಗದ ಸಂಚಾರ ಪೊಲೀಸ್‌ ಠಾಣಾ ವಿಭಾಗ, ಬಾಣಸವಾಡಿ ಸಂಚಾರ ಠಾಣೆ ಸಿಬ್ಬಂದಿಯೂ ವೃಕ್ಷ ನೆಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಉಳಿದಂತೆ ನಗರದ ಹಲವು ಠಾಣೆಯ ಸಿಬ್ಬಂದಿಯು ಪರಿಸರ ದಿನದ ಅಂಗವಾಹಿ ನಡೆಸಿದ ಸಸಿನೆಡುವ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.