ಕುಖ್ಯಾತ ರೌಡಿಗೆ ಕೈ ಕೋಳ ತೊಡಿಸಿ ರಸ್ತೆಯಲ್ಲಿ ಮೆರವಣಿಗೆ
Team Udayavani, Dec 10, 2022, 3:14 PM IST
ಬೆಂಗಳೂರು: ಪದೇ-ಪದೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಕುಖ್ಯಾತ ರೌಡಿ ಸುಹೇಲ್ನನ್ನು ಡಿಜೆ ಹಳ್ಳಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಕೈಗೆ ಬೇಡಿ ಹಾಕಿಕೊಂಡು ಮೆರವಣಿಗೆ ಮಾದರಿಯಲ್ಲಿ ಕರೆದುಕೊಂಡು ಹೋಗಿ ಸ್ಥಳೀಯರಿಗೆ ಧೈರ್ಯ ತುಂಬಿದ್ದಾರೆ.
ಸುಹೇಲ್ 15ಕ್ಕೂ ಅಧಿಕ ಪ್ರಕರಣಗಳಲ್ಲಿ ಈ ಹಿಂದೆ ಪೊಲೀಸರ ಬಲೆಗೆ ಬಿದ್ದು ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರ ಬಂದು ಮತ್ತೆ ಹಳೆ ಚಾಳಿ ಮುಂದುವರಿಸುತ್ತಿದ್ದ. ಆತನ ಉಪಟಳದಿಂದ ಸ್ಥಳೀಯರು ಹೈರಾಣಾಗಿ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು. ಇತ್ತ ಪೊಲೀಸರು ಹಲವಾರು ಬಾರಿ ಬಂಧಿಸಿದರೂ ಆರೋಪಿಗೆ ಬುದ್ಧಿ ಬಂದಿರಲಿಲ್ಲ. ಕೆಲ ದಿನಗಳ ಹಿಂದೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದಾಗ ಮತ್ತೆ ಡಿಜೆ ಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದ. ಈ ಬಾರಿ ಪೊಲೀಸರು ಆತನನ್ನು ಮಹಜರು
ನಡೆಸಲು ಆತನನ್ನು ಕರೆದುಕೊಂಡು ಹೋಗುವ ವೇಳೆ ಆತ ಕೃತ್ಯ ಎಸಗುತ್ತಿದ್ದ ಪ್ರದೇಶಗಳಲ್ಲಿ ಬೇಡಿ ಹಾಕಿ ಮೆರವಣಿಗೆ ಮಾದರಿಯಲ್ಲಿ ಕರೆದುಕೊಂಡು ಹೋಗಿದ್ದರು. ಈ ಮೂಲಕ ಆತನಿಂದ ಜನ ಸಾಮಾನ್ಯರು ಇನ್ನು ಭಯಪಡುವ ಅಗತ್ಯವಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ಸಾರಿದ್ದಾರೆ. ಇದನ್ನು ಕಂಡ ಸ್ಥಳೀಯರು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!