ನಗರದಲ್ಲಿ ಪೊಲೀಸ್ ಬಂದೋಬಸ್
Team Udayavani, May 12, 2018, 12:31 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 26 ವಿಧಾನಸಭಾ ಕ್ಷೇತ್ರಗಳಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಿದ್ದು, ಸಾರ್ವ ಜನಿಕರು ಮುಕ್ತ, ನಿರ್ಭೀತಿಯಿಂದ ಮತ ಚಲಾಯಿಸಬಹುದು ಎಂದು ನಗರ ಪೊಲೀಸ್ ಆಯುಕ್ತ ಟಿ. ಸುನಿಲ್
ಕುಮಾರ್ ಹೇಳಿದ್ದಾರೆ.
ಶುಕ್ರವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 26 ವಿಧಾನಸಭಾ ಕ್ಷೇತ್ರಗಳಲ್ಲಿ 7,056 ಮತಗಟ್ಟೆಗಳಿದ್ದು, ಈ ಪೈಕಿ 1,469 ಮತಕೇಂದ್ರಗಳನ್ನು ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.
ಇನ್ನುಳಿಂದತೆ 6,008 ಮತಗಟ್ಟೆಗಳು ಸಾಮಾನ್ಯ ಮತಕೇಂದ್ರಗಳಾಗಿವೆ. ಈ ಹಿನ್ನೆಲೆಯಲ್ಲಿ 10,500 ನಗರ ಪೊಲೀಸರು, 44 ಕಂಪೆನಿಗಳ ಕೇಂದ್ರೀಯ ಮೀಸಲು ಪಡೆಯ 4,500 ಮಂದಿ ಸಿಬ್ಬಂದಿ, 35 ಕೆಎಸ್ಆರ್ಪಿ ತುಕಡಿ, 550 ಸೆಕ್ಟರ್ ಮೊಬೈಲ್(ಪಿಎಸ್ಐ), 150 ಸೂಪರ್ ವೈಸರಿ ಮೊಬೈಲ್(ಪಿಐ), 50 ಎಸಿಪಿ ಮೊಬೈಲ್ ಪಾರ್ಟಿ, ಮತಕ್ಷೇತ್ರದ ಉಸ್ತುವಾರಿಗೆ 18 ಡಿಸಿಪಿಗಳು, ಒಬ್ಬರು ಜಂಟಿ ಪೊಲೀಸ್ ಆಯುಕ್ತರು, ನಾಲ್ವರು ಅಪರ ಪೊಲೀಸ್ ಆಯುಕ್ತರು ಭದ್ರತೆಯ ಉಸ್ತುವಾರಿ ವಹಿಸಲಿದ್ದಾರೆ. ಒಟ್ಟಾರೆ ಶೇ.60ರಷ್ಟು ಮತಗಟ್ಟೆಗಳಿಗೆ ಕೇಂದ್ರೀಯ ಮೀಸಲು ಪಡೆಗಳ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದರು.
ಪ್ರತಿ 15ರಿಂದ 20 ಮತಗಟ್ಟಿಗಳಿಗೆ ಒಂದು ಸೆಕ್ಟರ್ ಎಂದು ಗುರುತಿಸಿ, ಸೆಕ್ಟರ್ ಮೊಬೈಲ್ಗಳಿಗೆ ಪಿಎಸ್ಐ ಮಟ್ಟದ
ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಪ್ರತಿ 4 ಸೆಕ್ಟರ್ ಮೊಬೈಲ್ಗಳ ಮೇಲ್ವಿಚಾರಣೆಗೆ ಒಬ್ಬರು ಪೊಲೀಸ್
ಇನ್ಸ್ಪೆಕ್ಟರ್ರನ್ನು ಸೂಪರವೈಸರಿ ಮೊಬೈಲ್ ಆಗಿ ನೇಮಿಸಲಾಗಿದೆ ಎಂದು ತಿಳಿಸಿದರು. ಸಿಸಿಬಿ ಡಿಸಿಪಿ ರಾಮ್ನಿವಾಸ್ ಸೆಪಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು