ನಿರ್ಗತಿಕರಿಗೆ ಆಹಾರ ವಿತರಿಸಿದ ಪೊಲೀಸರು
Team Udayavani, May 19, 2021, 9:55 PM IST
ಬೆಂಗಳೂರು: ಕೊರೊನಾದ ವಿಷಮಸ್ಥಿತಿಯಲ್ಲಿ ಕಾನೂನು ಸುವ್ಯವಸ್ಥೆ, ಲಾಕ್ಡೌನ್ಕರ್ತವ್ಯದ ಜತೆಗೆ ಮಾನವೀಯತೆ ಮೆರೆಯುವಂತಹ ಕೆಲಸಗಳಲ್ಲೂ ನಗರಪೊಲೀಸರು ತೊಡಗಿಸಿಕೊಂಡಿದ್ದಾರೆ. ಮೊದಲ ಅಲೆಯ ಲಾಕ್ ಡೌನ್ ಸಂದರ್ಭದಲ್ಲಿ ನಗರದ ಬಹುತೇಕ ಪೊಲೀಸ್ಠಾಣೆಗಳ ಪೊಲೀಸರು ನಿತ್ಯ ಕನಿಷ್ಠ 500ಮಂದಿಗೆ ಅಡುಗೆ ಮಾಡಿಸಿ ನಿರ್ಗತಿಕರು, ಭಿಕ್ಷುಕರು ಹಾಗೂ ಹಸಿದವರಿಗೆ ಅನ್ನದಾನಮಾಡಿದರು. ಅದೇ ಕಾರ್ಯವನ್ನು ಎರಡನೇಅಲೆಯಲ್ಲೂ ಮುಂದುವರಿಸಿದ್ದಾರೆ.
ಪಶ್ಚಿಮ ವಿಭಾಗದ ಜಗಜೀವನರಾಮ್ ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿ ತಮ್ಮ ಠಾಣಾವ್ಯಾಪ್ತಿಯಲ್ಲಿರುವ ನಿರ್ಗತಿಕರು, ಭಿಕ್ಷುಕರು,ತಳ್ಳು ಗಾಡಿ ವ್ಯಾಪಾರಿಗಳಿಗೆ ಅನ್ನದ ಪಾಕೆಟ್ಗಳನ್ನು ನೀಡಿ ಹಸಿದ ಹೊಟ್ಟೆತುಂಬಿಸುತ್ತಿದ್ದಾರೆ. ಅದೇ ಕಾರ್ಯವನ್ನು ನಗರದ ಕೆಲ ಪೊಲೀಸ್ಠಾಣೆಗಳ ಅಧಿಕಾರಿ-ಸಿಬ್ಬಂದಿ ಮಾಡುತ್ತಿದ್ದಾರೆ.
ಚಾಮರಾಜಪೇಟೆ ಪೊಲೀಸರು ಕೂಡ ಇದೇ ಕಾರ್ಯದಲ್ಲಿತೊಡಗಿದ್ದಾರೆ.ವಾಹನಗಳ ಜಪ್ತಿ: ಕಠಿಣ ಲಾಕ್ಡೌನ್ ನಡುವೆಯೂ ಅನಗತ್ಯವಾಗಿನಗರದಲ್ಲಿ ಸಂಚರಿಸುತ್ತಿದ್ದ 1404ವಾಹನಗಳನ್ನು ಮಂಗಳವಾರ ಪೊಲೀಸರು ಜಪ್ತಿ ಮಾಡಿದ್ದಾರೆ.1275 ದ್ವಿಚಕ್ರವಾಹನಗಳು, 62ತ್ರಿಚಕ್ರವಾಹನಗಳು,67 ನಾಲ್ಕು ಚಕ್ರದ ವಾಹನಗಳನ್ನುಜಪ್ತಿ ಮಾಡಲಾಗಿದೆ. ಇದೇ ವೇಳೆ 12ಎನ್ ಡಿಎಂಎ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ