ಪೊಲೀಸರೇ, ವರ್ಗಾವಣೆಗೆ ಪ್ರಭಾವ ಬಳಸೀರಾ ಜೋಕೆ!


Team Udayavani, Nov 22, 2018, 1:51 PM IST

blore-1.jpg

ಬೆಂಗಳೂರು: ಅನಾರೋಗ್ಯದ ನೆಪ ಹಾಗೂ ಸಚಿವ-ಶಾಸಕರ ಶಿಫಾರಸುಗಳ ಪ್ರಭಾವ ಬಳಸಿ ಹೇಳಿ ತಾವು ಬಯಸಿದ ಠಾಣೆಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಮುಂದಾಗುವ ಸಿಬ್ಬಂದಿಗೆ “ಕಡ್ಡಾಯ ನಿವೃತ್ತಿ’ ಅಸ್ತ್ರ ಬಳಸಲು ಪೊಲೀಸ್‌ ಇಲಾಖೆ ಮುಂದಾಗಿದೆ.

ಇತ್ತೀಚೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ತಮಗೆ ಬೇಕಾದ ಸ್ಥಳಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಅನಾರೋಗ್ಯದ ಕಾರಣಗಳಿನ್ನಿಟ್ಟು ಕೊಂಡು ಅಸಿಸ್ಟೆಂಟ್‌ ಸಬ್‌ ಇನ್ಸ್‌ ಪೆಕ್ಟರ್‌ (ಎಎಸ್‌ಐ) ಹೆಡ್‌ ಕಾನ್ಸ್‌ ಟೇಬಲ್‌, ಕಾನ್ಸ್‌ಟೇಬಲ್‌ಗ‌ಳ ಹೆಚ್ಚು ಮುಂದಾಗುತ್ತಿದ್ದಾರೆ. ಈ ಬೆಳವಣಿಗೆ ತಲೆನೋವಾಗಿ ಪರಿಣಮಿಸಿದೆ.

ಅನಾರೋಗ್ಯ ಹಾಗೂ ಜನಪ್ರತಿನಿಧಿಗಳ ಶಿಫಾರಸು ಪಡೆದು “ಆಯಕಟ್ಟಿನ’ ಪೊಲೀಸ್‌ ಠಾಣೆಗೆ ವರ್ಗಾವಣೆ ಪಡೆದುಕೊಳ್ಳುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪೊಲೀಸ್‌ ಇಲಾಖೆ, ಅಂಥವರು ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಅಸಮರ್ಥರು ಎಂದು ಪರಿಗಣಿಸಿ ಕೆಸಿಎಸ್‌ಆರ್‌ ನಿಯಮ 285ರ ಅನ್ವಯವೇ ಕಡ್ಡಾಯ ನಿವೃತ್ತಿಗೊಳಿಸಲು ಇಲಾಖೆ ನಿರ್ಧರಿಸಿದೆ.

 ಕನಿಷ್ಠ ವರ್ಗಾವಣೆ ಅವಧಿ ಪೂರೈಸದೆ, ಗಂಭೀರ ಅನಾರೋಗ್ಯ ಸಮಸ್ಯೆ ಇಲ್ಲದಿದ್ದರೂ, ಸಾಮಾನ್ಯ ಅನಾರೋಗ್ಯ ಕಾರಣಗಳಿಗೆ ವರ್ಗಾವಣೆ ಮಾಡುವಂತೆ ಮನವಿ ಸಲ್ಲಿಸುವ ಸಿಬ್ಬಂದಿಯನ್ನು ಕಡ್ಡಾಯ ನಿವೃತ್ತಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ರವಾನಿಸಲಾಗುತ್ತಿದೆ. ಜತೆಗೆ, ಅಂತಹ ಪ್ರಕರಣಗಳಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ (ಕೆಸಿಎಸ್‌ಆರ್‌)ಯ 285ರ ಅಡಿಯಲ್ಲಿರುವ ಅವಕಾಶದಂತೆ ಕಡ್ಡಾಯ ನಿವೃತ್ತಿ ಮಾಡುವ ಅಸ್ತ್ರವನ್ನು ಪರಿಣಾಮಕಾರಿಯಾಗಿ ಬಳಸಿ ಎಂದು ಆಯಾ ಘಟಕಗಳ
ಮುಖ್ಯಸ್ಥರಿಗೆ ಸೂಚನೆ ರವಾನಿಸಲಾಗಿದೆ.

ವರ್ಗಾವಣೆ ಅವಧಿ ಪೂರೈಸದೆ ಅನಾರೋಗ್ಯದ ಆಧಾರದಲ್ಲಿ ವರ್ಗಾವಣೆ ಬಯಸುವ ಸಿಬ್ಬಂದಿ ನೇರವಾಗಿ ವರ್ಗಾವಣೆ ಬಯಸಿ ಪದೇ ಪದೆ ಮನವಿ ಸಲ್ಲಿಸಿದರೆ ಕೆಸಿಎಸ್‌ಆರ್‌ ನಿಯಮಾವಳಿ 285ರ ಅಡಿಯ ಅವಕಾಶ ಬಳಸಿ ಕಡ್ಡಾಯ ನಿವೃತ್ತಿಗೊಳಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ಈ ವಿಚಾರದಲ್ಲಿ ಘಟಕಾಧಿಕಾರಿಗಳಿಗೆ ಅಧಿಕಾರವಿದೆ. ಹೀಗಾಗಿ ಅವರ ಘಟಕಗಳಲ್ಲಿರುವ ಪರಿಸ್ಥಿತಿಗೆ ಅನುಗುಣವಾಗಿ ಅವರೇ ಕ್ರಮವಹಿಸುತ್ತಿದ್ದಾರೆ ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.  

ಇಲಾಖೆ ಅಧಿಕಾರಿಗಳಿಗೆ ಡಿಜಿಪಿ ಚಾಟಿ ಕೆಲದಿನಗಳ ಹಿಂದಷ್ಟೇ ವರ್ಗಾವಣೆ ವಿಚಾರದಲ್ಲಿ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್ ಸೇರಿ ಹಿರಿಯ ಅಧಿಕಾರಿಗಳಿಗೂ ಬಿಸಿಮುಟ್ಟಿಸಿದ್ದ ಡಿಜಿಪಿ ನೀಲಮಣಿ ರಾಜು, , ವರ್ಗಾವಣೆ ಸಮಯದಲ್ಲಿಯೇ ಪದೇ ಪದೇ ವೈದ್ಯಕೀಯ ರಜೆ ಪಡೆಯುವ ಪೊಲೀಸ್‌ ಸಿಬ್ಬಂದಿ ಎಕ್ಸಿಕ್ಯೂಟೀವ್‌ ಹುದ್ದೆ ನಿರ್ವಹಿಸುವುದು ಸೂಕ್ತವಲ್ಲ, ಅವರ ದೈಹಿಕ ಸಾಮರ್ಥ್ಯ ಕಡಿಮೆಯಾಗಿದೆ ಎಂದು ಪರಿಗಣಿಸಿ ಕಡ್ಡಾಯವಾಗಿ 6 ತಿಂಗಳು ಅಥವಾ 1 ವರ್ಷ ನಾನ್‌ ಎಕ್ಸಿಕ್ಯೂಟೀವ್‌ ಹುದ್ದೆಗೆ ವರ್ಗಾಯಿಸುವ ಶಿಫಾರಸಿನ ಕುರಿತು ಸುತ್ತೋಲೆ ಹೊರಡಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.