ವೃದ್ಧ ದಂಪತಿ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಗುಂಡು
Team Udayavani, Nov 29, 2017, 3:57 PM IST
ಬೆಂಗಳೂರು: ಎಚ್ಎಎಲ್ ಠಾಣೆ ವ್ಯಾಪ್ತಿಯ ಅಶ್ವತ್ಥನಗರದಲ್ಲಿ ಮಂಗಳವಾರ ವೃದ್ಧ ದಂಪತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಪ್ರಕರಣದ ತನಿಖೆಗಿಳಿದ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಮನೆಯೊಂದರ ಮೇಲೆ ದಾಳಿ ನಡೆಸಿ ಆರೋಪಿ ಹಸನ್ ಪಾಷಾ ನನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ, ಆದರೆ ಈ ವೇಳೆ ಪಾಷಾ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಕೂಡಲೆ ಸಬ್ ಇನ್ಸ್ಪೆಕ್ಟರ್ ಪ್ರಶೀಲಾ ಅವರು ಆತ್ಮರಕ್ಷಣೆಗಾಗಿ ಪಾಷಾ ಕಾಲಿಗೆ ಗುಂಡು ಹಾರಿಸಿದ್ದಾರೆ. ಪಾಷಾನನ್ನು ವಶಕ್ಕೆ ಪಡೆದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಹತ್ಯೆಗೀಡಾದ ಗೋವಿಂದನ್ ಬಿಇಎಲ್ ನಿವೃತ್ತ ನೌಕರರಾಗಿದ್ದು, ಆಸ್ತಿ ವಿಚಾರಕ್ಕೆ ಸಂಬಂಧಿಸಿ ಮೊಮ್ಮಕ್ಕಾಳ ಪ್ರವೀಣ್ ಮತ್ತು ಪ್ರಮೋದ್ ಸುಪಾರಿ ನೀಡಿದ್ದರು ಎಂದು ವರದಿಯಾಗಿದೆ.
ಎರಡು ದಿನಗಳ ಹಿಂದೆಯೇ ಕೊಲೆ ನಡೆದಿದ್ದು, ಮೃತ ದೇಹಗಳು ಕೊಳೆತ ಸ್ಥಿತಿಯಲ್ಲಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ