ಪೊಲೀಸ್ ವೇತನ ಹೆಚ್ಚಳ : ಔರಾದ್ಕರ್ ವರದಿ ಪರಿಗಣಿಸಲು ಪರಂ ಪತ್ರ
Team Udayavani, Jan 29, 2018, 6:50 AM IST
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಐಪಿಎಸ್ಯೇತರ ಸಿಬಂದಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಎಡಿಜಿಪಿ ರಾಘವೇಂದ್ರ ಔರಾದ್ಕರ್ ಸಮಿತಿ ವರದಿಯನ್ನು ವೇತನ ಪರಿಷ್ಕರಣೆ ಸಂದರ್ಭದಲ್ಲಿ ಪರಿಗಣಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್ ಆರನೇ ವೇತನ ಆಯೋಗದ ಅಧ್ಯಕ್ಷ ಎಂ.ಆರ್ ಶ್ರೀನಿವಾಸಮೂರ್ತಿಯವರಿಗೆ ಪತ್ರ ಬರೆದಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿ ಹಾಗು ಅಧಿಕಾರಿಗಳ ವೇತನ, ಭತ್ತೆ ಹೆಚ್ಚಳ ಕುರಿತು ತಾವು ಗೃಹ ಸಚಿವರಾಗಿದ್ದಾಗ ಉನ್ನತ ಪೊಲೀಸ್ ಅಧಿಕಾರಿಯಾಗಿದ್ದ ಔರಾದ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ದೇಶದ ವಿವಿಧ ರಾಜ್ಯಗಳ ಪೊಲೀಸ್ ಇಲಾಖೆಯ ಸಿಬಂದಿ ಪಡೆಯುತ್ತಿರುವ ವೇತನ ಮತ್ತು ಇತರೆ ಭತ್ತೆಗಳ ಬಗ್ಗೆ ಅಧ್ಯಯನ ನಡೆಸಿ ವೇತನ ಪರಿಷ್ಕರಣೆ ಮಾಡಬಹುದು ಎಂದು ಸರಕಾರಕ್ಕೆ ವರದಿ ಸಲ್ಲಿಸಿದೆ. ಸಮಿತಿಯ ವರದಿಯಲ್ಲಿನ ಅಂಶಗಳನ್ನು ಪರಿಗಣಿಸಿ ಪೊಲೀಸ್ ಇಲಾಖೆ ಸಿಬಂದಿ ವೇತನ ಹಾಗೂ ಭತ್ತೆ ಹೆಚ್ಚಳಕ್ಕೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ