ಅರ್ಜಿದಾರರಿಗೆ ಪೊಲೀಸ್ ಭದ್ರತೆ
Team Udayavani, Apr 25, 2019, 3:58 AM IST
ಬೆಂಗಳೂರು: 2018ರ ವಿಧಾನಸಭೆ ಚುನಾವಣೆ ವೇಳೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೆಯೊಂದರಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿದ್ದ ದೂರುದಾರ ಎನ್.ರಾಕೇಶ್ ಹಾಗೂ ಇತರರಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಬುಧವಾರ ಸರ್ಕಾರ ಲಿಖೀತ ರೂಪದಲ್ಲಿ ಹೈಕೋರ್ಟ್ಗೆ ಮಾಹಿತಿ ನೀಡಿತು.
ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠಕ್ಕೆ ಸರ್ಕಾರಿ ವಕೀಲ ರಾಚಯ್ಯ ಈ ಮಾಹಿತಿ ನೀಡಿದರು. ರಾಕೇಶ್ ಅವರಿಗೆ ಇಬ್ಬರು ಗನ್ಮ್ಯಾನ್ಗಳನ್ನು ನಿಯೋಜಿಸಲಾಗಿದ್ದು, ಅವರ ಮನೆಗೂ ಭದ್ರತೆ ನೀಡಲು ನಗರ ಸಶಸ್ತ್ರ ಮೀಸಲು ಪಡೆ ಹಾಗೂ ಹೊಯ್ಸಳ ಸಿಬ್ಬಂದಿ ನಿಯೋಜಿಸಲು ನಗರ ಪೊಲೀಸ್ ಆಯುಕ್ತರು ಈಗಾಗಲೇ ಆದೇಶಿಸಿದ್ದಾರೆ ಎಂಬ ಆದೇಶ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ಕಮಿಷನರ್ ವಿರುದ್ಧ ಗರಂ: ಇದಕ್ಕೂ ಮೊದಲು ಬೆಳಗಿನ ಕಲಾಪದ ವೇಳೆ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಆದೇಶದ ಹೊರತಾಗಿಯೂ ಅರ್ಜಿದಾರರು ಇದುವರೆಗೂ ಪೊಲೀಸ್ ಭದ್ರತೆ ಒದಗಿಸಿಲ್ಲ ಎಂದು ದೂರಿದರು. ಇದಕ್ಕೆ ತೀವ್ರ ಆಕ್ರೋಶವ್ಯಕ್ತಪಡಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಭದ್ರತೆ ಒದಗಿಸುವಂತೆ ಆದೇಶ ನೀಡಿ 15 ದಿನಗಳು ಕಳೆದರೂ ಇನ್ನು ಆದೇಶ ಪಾಲಿಸಿಲ್ಲವೆಂದರೆ ಹೇಗೆ? ಆಯುಕ್ತರ ಈ ನಡೆ ಸಹಿಸಲು ಸಾಧ್ಯವಿಲ್ಲ. ಮಧ್ಯಾಹ್ನದ ಒಳಗೆ ಅರ್ಜಿದಾರರಿಗೆ ಸೂಕ್ತ ಭದ್ರತೆ ಒದಗಿಸಿ, ಆ ಕುರಿತ ವರದಿ ಸಲ್ಲಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಆಯುಕ್ತರನ್ನೇ ಕೋರ್ಟ್ಗೆ ಕರೆಯಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ