ರಾಜಕಾರಣಿಗಳು ಪಂಚರ್‌ ಅಂಗಡಿಯವರಂತೆ!


Team Udayavani, Aug 28, 2017, 11:44 AM IST

manish-sisodia].jpg

ಬೆಂಗಳೂರು: “ಬಹುತೇಕ ರಾಜಕಾರಣಿಗಳು ಪಂಚರ್‌ ಅಂಗಡಿಯವರಿದ್ದಂತೆ. ತಾವೇ ರಸ್ತೆಯಲ್ಲಿ ಮೊಳೆ ಹಾಕಿ ವಾಹನಗಳು ಪಂಚರ್‌ ಆಗುವಂತೆ ಮಾಡಿ, ನಂತರ ಪಂಚರ್‌ ಹಾಕಿ ಉಪಕಾರ ಮಾಡಿದವರಂತೆ ವರ್ತಿಸುತ್ತಾರೆ,’ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್‌ ಸಿಸೋಡಿಯಾ ಹೇಳಿದ್ದಾರೆ.

ಬೆಂಗಳೂರಲ್ಲಿ ಆಮ್‌ ಆದ್ಮಿ ಪಕ್ಷ ಹಮ್ಮಿಕೊಂಡಿದ್ದ ದುಂಡು ಮೇಜಿನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಹುತೇಕ ರಾಜಕಾರಣಿಗಳು ಸರ್ಕಾರದಿಂದ ಜನ ಸಾಮಾನ್ಯರಿಗೆ ಸುಲಭವಾಗಿ ಸಿಗಬೇಕಾದ ಸೌಲಭ್ಯಗಳು ಸಿಗದಂತೆ ಮಾಡಿ, ನಂತರ ಸೌಲಭ್ಯ ಕೊಡಿಸಲು ತಾವು ಕಷ್ಟ ಪಟ್ಟಂತೆ ತೋರಿಸಿಕೊಂಡು ಜನಮನ್ನಣೆ ಗಳಿಸಿಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ. 

ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪರೇಡ್‌ ನಡೆಯುತ್ತದೆ. ನಮ್ಮ ಸೇನಾ ಸಾಮರ್ಥ್ಯ ಪ್ರದರ್ಶಿಸುತ್ತೇವೆ. ಆದರೆ, ನಮ್ಮ ಪ್ರಜಾಪ್ರಭುತ್ವ ಬಿಂಬಿಸುವ ಯಾವುದೇ ಸ್ಥಬ್ದ ಚಿತ್ರ ಇರುವುದಿಲ್ಲ. ಸರ್ಕಾರದ ಭವಿಷ್ಯದ ದೃಷ್ಠಿಕೋನವನ್ನು ಬಿಂಬಿಸುವ ಪ್ರಯತ್ನ ಯಾರೂ ಮಾಡುವುದಿಲ್ಲ ಎಂದರು.

ದೆಹಲಿಯಲ್ಲಿ ಆಪ್‌ ಸರ್ಕಾರ ಬಜೆಟ್‌ಗೂ ಮೊದಲು ಜನ ಸಾಮಾನ್ಯರ ಅಭಿಪ್ರಾಯ, ವಿಧಾನಸಭಾ ಕ್ಷೇತ್ರವಾರು ಜನರು ಸೂಚಿಸಿರುವ ಯೋಜನೆಗಳಿಗೆ ಮಾತ್ರ ಹಣ ಖರ್ಚು ಮಾಡಲು ಪ್ರತಿ ವಿಧಾನ ಸಭಾ ಕ್ಷೇತ್ರಗಳಿಗೆ 20 ಲಕ್ಷ ರೂಪಾಯಿ ಮೀಸಲಿಡಲು ತೀರ್ಮಾನಿಸಿದೆವು. ಸರ್ಕಾರದ ಈ ಯೋಜನೆಗೆ ಲೆಪ್ಟಿನೆಂಟ್‌ ಗೌರ್ನರ್‌ ಅನುಮತಿ ಕೊಡಲಿಲ್ಲ. ಅದರ ಪರಿಣಾಮವಾಗಿ ಯೋಜನೆ ಜಾರಿಯಾಗಲಿಲ್ಲ ಎಂದರು. 

ರಾಜ್ಯದಲ್ಲಿ ಆಪ್‌ ಪಕ್ಷವನ್ನು ಬಲ ಪಡಿಸಲು ಆಪ್‌ ನಾಗರಿಕ ಸಬಲೀಕರಣ ಕಾರ್ಯಕ್ರಮ ಹಮ್ಮಿಕೊಂಡಿದೆ. ನಮ್ಮ ಪಕ್ಷದ ತರಬೇತಿ ಪಡೆದ ಕಾರ್ಯಕರ್ತರು ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸೇತುವೆಯಾಗಿ ನಿಂತು ಸರ್ಕಾರ ಮಟ್ಟದಲ್ಲಿ ಜನ ಸಾಮಾನ್ಯರ ಕೆಲಸಗಳನ್ನು ಮಾಡಿ ಕೊಡುತ್ತಾರೆ. ಎಲ್ಲಿಯೂ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಬಾರದು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದರು.

ಡೇರಾ ಸಚ್ಚಾ ವಿವಾದ ಆತಂಕಕಾರಿ: ಪಂಜಾಬ್‌, ಹರಿಯಾಣಗಳಲ್ಲಿ ನಡೆಯುತ್ತಿರುವ ಡೇರಾ ಸಚ್ಚಾ ಹಿಂಸಾಚಾರ ಆತಂಕಕಾರಿಯಾಗಿದೆ. ಪಂಜಾಬ್‌ ಹರಿಯಾಣ ಮಾತ್ರವಲ್ಲದೇ ದೆಹಲಿಯಲ್ಲಿಯೂ ಆತಂಕದ ವಾತಾವರಣ  ನಿರ್ಮಾಣವಾಗಿದೆ. ಕೋರ್ಟ್‌ ಆದೇಶವನ್ನೇ ಪಾಲಿಸುವುದಿಲ್ಲ ಎಂದರೆ ಯಾರನ್ನ ಕೇಳುವುದು.

ಹರಿಯಾಣ ಮತ್ತು ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಕೇಂದ್ರ ಸರ್ಕಾರ ಜವಾಬ್ದಾರಿ ತೆಗೆದುಕೊಂಡು ಪರಿಸ್ಥಿತಿ ನಿಯಂತ್ರಿಸಬೇಕು. ಹರಿಯಾಣದಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದಕ್ಕಿಂತ ಪ್ರಜಾಪ್ರತಿನಿಧಿ ಸರ್ಕಾರ ತನ್ನ ಕರ್ತವ್ಯ ನಿರ್ವಹಿಸುವಂತೆ ಮಾಡಬೇಕು ಎಂದರು. 

ಸಂಡೆ ರಾಜಕಾರಣ ನಿರುಪಯುಕ್ತ!
ಆಮ್‌ ಆದ್ಮಿ ಪಕ್ಷದ ಸಂಡೆ ರಾಜಕಾರಣದಿಂದ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ. ದರೋಡೆಕೋರರು, ಗೂಂಡಾಗಳು, ಲೈಂಗಿಕ ಹಗರಣ ಮಾಡಿದವರು ಅಧಿಕಾರಕ್ಕೆ ಬಂದರೆ ಏನು ಮಾಡುವುದು ಎಂಬ ಆತಂಕ ಕಾಡುತ್ತಿದೆ. ಚುನಾವಣೆ ಸಂದರ್ಭದಲ್ಲಿ ಆಯೋಗ ಪತ್ತೆ ಹಚ್ಚಿದ ಹಣ, ಹೆಂಡ, ಆಭರಣಗಳು ಏನಾಯ್ತು ಎಂದು ಕೇಳಿದರೆ, ಆಯೋಗ ಮತ್ತು ಜಿಲ್ಲಾಧಿಕಾರಿಗಳ ಬಳಿ ಉತ್ತರವೇ ಇಲ್ಲ.

ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ನಮ್ಮೊಂದಿಗೆ ಜೈಲಿನಲ್ಲಿದ್ದವರು, ಅಧಿಕಾರ ವಿಕೇಂದ್ರಿಕರಣದ ಬಗ್ಗೆ ತುಂಬಾ ತಿಳಿದುಕೊಂಡಿದ್ದರು. ಅವರು ಗೃಹ ಸಚಿವರಾದರೂ ಯಾವುದೇ ಬದಲಾವಣೆ ತರಲಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.