ದಿವ್ಯಾಂಗರ ವಿಚಾರದಲ್ಲಿ ರಾಜಕಾರಣ ಸಲ್ಲ


Team Udayavani, Jun 24, 2019, 3:05 AM IST

divyana

ಬೆಂಗಳೂರು: ವಿಕಲಚೇತನರ ವಿಷಯದಲ್ಲಿ ರಾಜಕೀಯ ಮಾಡುವುದು ಅಮಾನವೀಯತೆಯ ಬಹುದೊಡ್ಡ ಪ್ರತಿಕ. ಹೀಗಾಗಿ ರಾಜ್ಯ ಸರ್ಕಾರ ಈ ಕೂಡಲೇ 2016ರ ದಿವ್ಯಾಂಗರ ಹಕ್ಕು ಕಾಯ್ದೆಯನ್ನು ಅನುಷ್ಠಾನ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಬಸವನಗುಡಿಯ ಬಿಎಂಎಸ್‌ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಕ್ಷಮ ಸಂಸ್ಥಾಪನಾ ದಿನಾಚರಣೆ, ಹೆಲನ್ಸ್‌ ಕೆಲ್ಲರ್‌ ಜಯಂತಿ ಹಾಗೂ ವಿಶ್ವಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ 2016ರಲ್ಲಿ ದಿವ್ಯಾಂಗರ ಹಕ್ಕು ಕಾಯ್ದೆ ರಾಜ್ಯದಲ್ಲಿ ಇನ್ನೂ ಅನುಷ್ಠಾನ ಆಗಿಲ್ಲ. ವಿಕಲಚೇತನರ ಕಲ್ಯಾಣ ರಾಜಕಾರಣದ ವಿಚಾರವಲ್ಲ. ಇವರ ಜತೆ ರಾಜಕಾರಣ ಮಾಡುವುದು ಅಮಾನವೀಯತೆಯ ಬಹುದೊಡ್ಡ ಪ್ರತಿಕ. ಕರ್ನಾಟಕದಲ್ಲೂ ಈ ಕಾಯ್ದೆ ಜಾರಿಗೆ ತರಲು ನಾವೆಲ್ಲರೂ ಒಟ್ಟಾಗಿ ಸರ್ಕಾರಕ್ಕೆ ಮನವಿ ಮಾಡಬೇಕು ಎಂದರು.

ವಿಕಲಚೇತನರ ಸಮಗ್ರ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರ 2016ರಲ್ಲಿ ದಿವ್ಯಾಂಗರ ಹಕ್ಕು ಕಾಯ್ದೆ ಜಾರಿಗೆ ತಂದಿದೆ. ಈ ಕಾಯ್ದೆಯಲ್ಲಿ ಇನ್ನಷ್ಟು ಬದಲಾವಣೆ ಅಥವ ತಿದ್ದುಪಡಿಗಳು ಆಗಬೇಕಿದ್ದರೆ ಸಲಹೆ ನೀಡಿದಲ್ಲಿ, ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಜತೆಗೆ ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ಪ್ರಯತ್ನಿಸಲಾಗುತ್ತದೆ ಎಂದು ಹೇಳಿದರು.

ವಿಕಲಚೇತನರ ಕಲ್ಯಾಣದ ಹಿತದೃಷ್ಟಿಯಿಂದ ಸಮಾಜ ಸೂಕ್ಷ್ಮ ಸಂವೇದನೆ ಬೆಳೆಸಿಕೊಳ್ಳಬೇಕಿದೆ. ವಿಕಲಚೇತನರ ಕುರಿತಾಗಿ ಪ್ರತಿಯೊಬ್ಬರೂ ಕೆಲವೊಂದು ಸೂಕ್ಷ್ಮತೆಗಳನ್ನು ವೈಯಕ್ತಿಕವಾಗಿ ಅವಡಿಸಿಕೊಳ್ಳಬೇಕಾಗುತ್ತದೆ. ಜತೆಗೆ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ವಿಕಲಚೇತನರ ಸ್ನೇಹಿ ನೀತಿ, ನಿರೂಪಣೆಗಳು ಸಿದ್ಧವಾಗಬೇಕಿದೆ. ಮೆಟ್ರೋ, ಬಸ್‌, ವಿಮಾನ ನಿಲ್ದಾಣಗಳಲ್ಲಿ ದಿವ್ಯಾಂಗರಿಗೆ ಪೂರಕವಾದ ನೀತಿ ಭಾರತದಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದಿವ್ಯಾಂಗರನ್ನು ಗಮನದಲ್ಲಿಟ್ಟುಕೊಂಡು ಆರ್ಕಿಟೆಕ್ಚರ್‌ ಯೋಜನೆ ಸಿದ್ಧಪಡಿಸುವುದು ನಮ್ಮ ಸಂಸ್ಕೃತಿಯಲ್ಲೇ ಬರಬೇಕು. ಹೀಗಾಗಿ ಸಕ್ಷಮವು ಆರ್ಕಿಟೆಕ್ಚರ್‌ ಕಾಲೇಜು ಹಾಗೂ ನಗರಾಭಿವೃದ್ಧಿ ಯೋಜನೆಗಳ ಜತೆಗೆ ಸಮಾಲೋಚನೆ ಮಾಡಿ, ದಿವ್ಯಾಂಗರಿಗೆ ಪೂರಕವಾದ ನೀತಿ ಸಿದ್ಧಪಡಿಸಲು ಮನವಿ ಮಾಡಬೇಕು ಎಂದು ಸಲಹೆ ನೀಡಿದರು.

ಸಮಾಜ ಅಥವಾ ದೇಶದ ಪಯಣದಲ್ಲಿ ಯಾರನ್ನು ಹಿಂದೆ ಬಿಡಬಾರದು. ಪ್ರಧಾನಿಯವರ ಸಬ್‌ ಕಾ ಸಾತ್‌ ಸಬ್‌ ಕಾ ವಿಕಾಸ್‌ನ ಮೂಲ ಪರಿಕಲ್ಪನೆಯೇ ಎಲ್ಲರ ಅಭಿವೃದ್ಧಿಯಾಗಿದೆ. ರಾಷ್ಟ್ರೀಯ ಪಯಣದಲ್ಲಿ ನಾವೆಲ್ಲರೂ ಒಟ್ಟಿಗೆ ಗುರಿ ಮುಟ್ಟಬೇಕು. ಇದು 100 ಮೀಟರ್‌ ಓಟದ ಸ್ಪರ್ಧೆಯಲ್ಲ. ಎಲ್ಲರ ಅಭಿವೃದ್ಧಿಯ ಪಯಣ ಎಂದು ವಿಶ್ಲೇಷಿಸಿದರು.

ದಿವ್ಯಾಂಗ ಮಕ್ಕಳಿಗೆ ಶಾಲಾ ಪರಿಕರ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. ಮಿತ್ರ ಜೋತಿ ಸಂಸ್ಥೆಯ ಮ್ಯಾನೇಜಿಂಗ್‌ ಟ್ರಸ್ಟಿ ಮಧು ಸಿಂಘಲ್‌ ಅವರನ್ನು ಸನ್ಮಾನಿಸಲಾಯಿತು. ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿರ್ದೇಶಕ ಜಯ ವಿಭವ ಸ್ವಾಮಿ, ಸಕ್ಷಮ ಕರ್ನಾಟಕ ಅಧ್ಯಕ್ಷ ಸುಧೀರ್‌ ಪೈ, ಬೆಂಗಳೂರು ಘಟಕದ ಅಧ್ಯಕ್ಷ ಡಾ.ಕಿರಣ್‌ ಎಸ್‌.ಮೂರ್ತಿ ಮೊದಲಾದವರು ಇದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.