ಹೂವಿನ ಕರಗ ಪ್ರಯುಕ್ತ ಶಕ್ತಿಪೀಠಕ್ಕೆ ಪೂಜ


Team Udayavani, Mar 26, 2018, 12:22 PM IST

blore-1.jpg

ಬೆಂಗಳೂರು: ಇತಿಹಾಸ ಪ್ರಸಿದ್ಧ ಬೆಂಗಳೂರಿನ ಹೂವಿನ ಕರಗ ಶಕ್ತ್ಯೋತ್ಸವದ ಧಾರ್ಮಿಕ ವಿಧಿವಿಧಾನಗಳು ಭರದಿಂದ ಸಾಗಿವೆ. ಕರಗ ಶಕ್ತ್ಯೋತ್ಸವದ ಮೂರನೇ ದಿನ ಭಾನುವಾರ ಸಂಪಂಗಿ ಕೆರೆಯ ಅಂಗಳದಲ್ಲಿ ಶಕ್ತಿಪೀಠಕ್ಕೆ ಪೂಜೆ ನಡೆಯಿತು. ಬಳಿಕ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳು, ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ನೂರಾರು ಮಂದಿ ಭಕ್ತರು ಪಾಲ್ಗೊಂಡಿದ್ದರು. ಕರಗ ವಿಶೇಷವಾಗಿ ಏಪ್ರಿಲ್‌ 2ರವರೆಗೆ ದೇವಾಲಯದಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಗಳು ನಡೆಯಲಿವೆ. ಮಾ.28ರಂದು ವಹಿಕುಲ ಬಾಂಧವರಿಂದ ಆರತಿ ನಡೆಯಲಿದೆ. 

29ರಂದು ಹಸಿ ಕರಗ, 30ರಂದು ಪೊಂಗಲ್‌ ಸೇವೆ ನಡೆಯಲಿದೆ. 31ರಂದು ಐತಿಹಾಸಿಕ ಕರಗ ಶಕ್ತ್ಯೋತ್ಸವದ ಹಾಗೂ ಧರ್ಮರಾಯ ಸ್ವಾಮಿ ದೇವರ ರಥೋತ್ಸವ ಜರುಗಲಿದ್ದು, ಬೆಳಗ್ಗೆ 9 ಗಂಟೆಯಿಂದ ಶ್ರೀಧರ್ಮರಾಯ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಅಂದು ರಾತ್ರಿ 12 ಗಂಟೆಗೆ ಹೂವಿನ ಕರಗ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ.

ಹೂವಿನ ಕರಗ ಮೆರವಣಿಗೆ ಅಲಸೂರು ಪೇಟೆ ಆಂಜನೇಯಸ್ವಾಮಿ, ಶ್ರೀರಾಮ ದೇವಾಲಯ ಮತ್ತು ಶ್ರೀಪ್ರಸ್ನ ಗಂಗಾಧರೇಶ್ವರ ಸ್ವಾಮಿ ದೇವಾಲಯ. ನಗರ್ತ ಪೇಟೆಯ ವೇಣುಗೋಪಾಲಸ್ವಾಮಿ ದೇವಾಲಯದಿಂದ ಸಿದ್ದಣ್ಣ ಗಲ್ಲಿ, ಭೈರವೇಶ್ವರ ದೇವಾಲಯದ ಮಾರ್ಗವಾಗಿ ಕಬ್ಬನ್‌ ಪೇಟೆಯ ಶ್ರೀರಾಮ ಮಂದಿರ,ಆಂಜನೇಯ ಸ್ವಾಮಿ ದೇವಾಲಯ ಗಾಣಿಗರ ಪೇಟೆ ಚೆನ್ನಕೇಶವ ಸ್ವಾಮಿ ದೇವಸ್ಥಾನ, ಚಾಮುಂಡೇಶ್ವರಿ ದೇವಾಲಯ, ಅವೆನ್ಯೂ ರಸ್ತೆಯ ಈಶ್ವರದೇವಾಲಯಗಳಲ್ಲಿ ಪೂಜೆ ಸ್ವೀಕರಿಸಲಿದೆ. ಏ.1ರಂದು ದೇವಾಲಯದಲ್ಲಿ ಪುರಾಣ ಪ್ರವಚನ, ಗಾವುಶಾಂತಿ ನಡೆದು 2ರಂದು ಧ್ವಜಾರೋಹಣದೊಂದಿಗೆ ಕರಗ ಶಕ್ತ್ಯೋತ್ಸವದ ತೆರೆಬೀಳಲಿದೆ.

ಮೊದಲ ಬಾರಿ ಕರಗ ಹೊರುವ ಮನು: ಮುಜರಾಯಿ ಇಲಾಖೆ ಆದೇಶದಂತೆ ಈ ಬಾರಿ ಅರ್ಚಕ ಮನು ಕರಗ ಹೊರಲಿದ್ದು, ಸಂಪ್ರದಾಯ ದಂತೆ ಮಡಿ ಕಾಪಾಡುವ ಸಲುವಾಗಿ ಮೂರು ತಿಂಗಳ ಹಿಂದೇ ದೇವಾಲಯಕ್ಕೆ ಆಗಮಿಸಿರುವ ಮನು, ಪೂಜಾ ಕೈಂಕರ್ಯಗಳು, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುತ್ತಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.