ಪಿಒಪಿ ಗಣೇಶ ಪೂಜೆ ಅನಿಷ್ಟ


Team Udayavani, Sep 7, 2018, 12:17 PM IST

pop-gan.jpg

ಬೆಂಗಳೂರು: ಪ್ಲಾಸ್ಟರ್‌ ಆಫ್ ಪ್ಯಾರೀಸ್‌ (ಪಿಒಪಿ) ಗಣೇಶ ಮೂರ್ತಿಯನ್ನು ಪೂಜಿಸುವುದರಿಂದ ಅನಿಷ್ಟ ಬರುತ್ತದೆ. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿ ಪೂಜಿಸುವುದರಿಂದ ಒಳಿತಾಗುತ್ತದೆ… ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳ ಪ್ರತಿಷ್ಠಾಪನೆ ಮೂಲಕ ಗಣೇಶೋತ್ಸವ ಆಚರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಗರದ ಹಲವು ದೇವಾಲಯಗಳಲ್ಲಿ ಅಳವಡಿಸಿರುವಂತಹ ಜಾಗೃತಿ ಫ‌ಲಕಗಳಲ್ಲಿನ ಸಂದೇಶದ ಸಾರಾಂಶವಿದು.

ಎಲ್ಲರೂ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಮುಂದಾಗಬೇಕೆಂಬ ಆಶಯ, ಒತ್ತಾಯ ಕೇಳಿಬರುತ್ತಿದೆ. ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ವಿವಿಧ ಸಂಘ-ಸಂಸ್ಥೆಗಳು ವಿನೂತನ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಅದರಂತೆ ನಗರದ ವಿವಿಧ ದೇವಾಲಯಗಳಲ್ಲಿಯೂ ಭಕ್ತರಿಗೆ ಮಣ್ಣಿನ ಮೂರ್ತಿ ಬಳಕೆ ಕುರಿತು ಜಾಗೃತಿ ಮೂಡಿಸುವ ಕಾರ್ಯವೂ ನಡೆದಿದೆ. ಪಿಒಪಿ ಮೂರ್ತಿಗಳನ್ನು ಪೂಜೆ ಮಾಡುವುದರಿಂದ ದರಿದ್ರ ಬರುತ್ತದೆ. ಮಣ್ಣಿನ ಮೂರ್ತಿಗಳ ಆರಾಧನೆಯಿಂದ ಅದೃಷ್ಟ ಒಲಿಯುತ್ತದೆ ಎಂಬ ಸಂದೇಶ ಸಾರಲಾಗುತ್ತಿದೆ.

ಒಂದೆಡೆ ಬಿಬಿಎಂಪಿ, ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಪಿಒಪಿ ಮೂರ್ತಿಗಳ ಬಳಕೆಯಿಂದ ಜಲಮೂಲಗಳಿಗೆ ಹಾನಿಯಾಗಲಿದೆ ಎಂದು ಜಾಗೃತಿ ಮೂಡಿಸುತ್ತಿದೆ. ಅಖೀಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರ ಸಂಘವು ವಿಭಿನ್ನವಾಗಿ ರೀತಿಯಲ್ಲಿ ಭಕ್ತರಲ್ಲಿ ಜಾಗೃತಿ ಮೂಡಿಸುತ್ತಿದೆ. ಮಣ್ಣಿನಿಂದ ಮಾಡಿದ ಪರಿಸರ ಸ್ನೇಹಿ ಮೂರ್ತಿ ಪೂಜಿಸಿದರೆ ಅದೃಷ್ಟ, ಅದೇ ಪಿಒಪಿ ಗಣೇಶ ಮೂರ್ತಿ ಪೂಜೆಯಿಂದ ಅನಿಷ್ಟ ಎಂದು ಹೇಳುವ ಮೂಲಕ ಮಣ್ಣಿನ ಗಣೇಶ ಮೂರ್ತಿ ಬಳಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ. 

ಕೈ-ಕಾಲು ತುಂಡಾಗುವುದನ್ನು ನೋಡಲಾಗದು: ಜಾಗೃತಿ ಕಾರ್ಯಕ್ರಮ ಕುರಿತು “ಉದಯವಾಣಿ’ ಜತೆ ಮಾತನಾಡಿದ ಸಂಘದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌. ಎನ್‌ ದೀಕ್ಷಿತ್‌, ಗಣೇಶ ಮೂರ್ತಿಯನ್ನು ಶ್ರದ್ಧೆಯಿಂದ ಪೂಜಿಸುತ್ತೇವೆ. ಆದರೆ, ವಿಸರ್ಜನೆ ವೇಳೆ ಪಿಒಪಿ ಮೂರ್ತಿಗಳು ಬೇಗ ಮುಳುಗದ ಹಿನ್ನೆಲೆಯಲ್ಲಿ ಕೈ-ಕಾಲುಗಳನ್ನು ಭಗ್ನ ಮಾಡಲಾಗುತ್ತದೆ. ಇದು ಧಾರ್ಮಿಕ ಭಾವನೆಗೂ ಧಕ್ಕೆ ಉಂಟಾಗುತ್ತದೆ. ಹೀಗಾಗಿ ಸಾರ್ವಜನಿಕರು ಮಣ್ಣಿನ ಗಣೇಶ ಮೂರ್ತಿಗಳ ಬಳಕೆಗೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು.

ಪಿಒಪಿ ಗಣೇಶ ಮೂರ್ತಿಗಳನ್ನು ರಾಸಾಯನಿಕಗಳಿಂದ ತಯಾರಿಸಲಾಗುತ್ತದೆ. ಇಂತಹ ಮೂರ್ತಿ ಪೂಜೆಯಿಂದ ಯಾವುದೇ ಲಾಭವಾಗುವುದಿಲ್ಲ. ಮಣ್ಣನ್ನು ಭೂಮಿ ತಾಯಿ ಎಂದು ಪೂಜಿಸಲಾಗುತ್ತದೆ. ಇಂತಹ ಮಣ್ಣಿನಿಂದ ಮಾಡಿದ ಮೂರ್ತಿಗಳ ಪೂಜೆಯಿಂದ ಮನೆಗೆ ಒಳ್ಳೆಯದಾಗುತ್ತದೆ. ಹೀಗಾಗಿ ಸಾರ್ವಜನಿಕರು ಪಿಒಪಿ ಬಳಸದೆ, ಮಣ್ಣಿನಿಂದ ಮಾಡಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪೂಜಿಸಬೇಕು ಎಂದರು. 

ಫ‌ಲಕಗಳ ಅಳವಡಿಕೆ: ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಬೆಂಬಲ ಸೂಚಿಸಿರುವ ಸಂಘವು ತನ್ನೆಲ್ಲ ದೇವಾಲಯಗಳಲ್ಲಿ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಪ್ರೋತ್ಸಾಹಿಸುವಂತಹ ಜಾಗೃತಿ ಸಂದೇಶವುಳ್ಳ ಬರಹವಿರುವ ಫ‌ಲಕಗಳನ್ನು ಅಳವಡಿಸಿದೆ. ಇದರೊಂದಿಗೆ ವಿವಿಧ ದೃಶ್ಯ ಮಾಧ್ಯಮಗಳ ಚರ್ಚಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅರ್ಚಕರು ಸಹ ಚತುರ್ಥಿಯ ಮಹತ್ವ, ಆಚರಣೆಯ ವಿಧಿ- ವಿಧಾನ, ಪಿಒಪಿ ಗಣೇಶ ಮೂರ್ತಿ ಬಳಕೆಯಿಂದ ಆಗುವ ಪರಿಣಾಮಗಳ ಕುರಿತು ಜನರಿಗೆ ಮಾಹಿತಿ ನೀಡುವಂತಹ ಕೆಲಸ ಮಾಡುತ್ತಿದ್ದಾರೆ. 

* ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.