ವರ್ಷ ಕಳೆದಂತೆ ಪಿಒಪಿ ಬಳಕೆ ಕಡಿಮೆಯಾಗಿದೆ
Team Udayavani, Sep 1, 2019, 3:03 AM IST
ಬೆಂಗಳೂರು: ವರ್ಷ ಕಳೆದಂತೆ ನಗರದಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಕೆದಾರರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೇಯರ್ ಗಂಗಾಂಬಿಕೆ ಹೇಳಿದರು.
ಬಾಂಧವ್ಯ ಸಂಸ್ಥೆ, ಶನಿವಾರ ಜಯನಗರದ ವಿಶ್ವೇಶ್ವರಯ್ಯ ಸಂಕೀರ್ಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಜೇಡಿ ಮಣ್ಣಿನ ಗೌರಿ-ಗಣೇಶ ಮೂರ್ತಿ ಉಚಿತವಾಗಿ ವಿತರಿಸಿ ಮಾತನಾಡಿದ ಅವರು, ಪರಿಸರದ ದೃಷ್ಟಿಯಿಂದ ಮಣ್ಣಿನ ಮೂರ್ತಿಗಳನ್ನು ಬಳಕೆ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮೊಬೈಲ್ ಟ್ಯಾಂಕ್ಗಳನ್ನು ಬಳಸಿ ನಗರದಲ್ಲಿ ಗಣೇಶ ವಿಸರ್ಜನೆಗೆ ಪಾಲಿಕೆ ಮುಂದಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಪರಿಸರ ಮಾಲಿನ್ಯ ಇಲಾಖೆ ನಿರ್ದೇಶನದಂತೆ ಆಯುಕ್ತರು ಕೂಡ ಸಭೆ ನಡೆಸಿದ್ದಾರೆ ಎಂದರು.
ಶಾಸಕಿ ಸೌಮ್ಯಾರೆಡ್ಡಿ ಮಾತನಾಡಿ, ಪಿಒಪಿ ಮೂರ್ತಿ ಬಳಕೆಯಿಂದ ನಗರದ ಕೆರೆಗಳು ಕಲುಷಿತಗೊಳ್ಳಲಿವೆ. ಆ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿ ಮೂರ್ತಿಗಳನ್ನು ಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಶಾಸಕ ರಾಮಲಿಂಗಾ ರೆಡ್ಡಿ, ಬಾಂಧವ್ಯ ಸಂಸ್ಥೆಯ ಮುಖ್ಯಸ್ಥ ಎನ್.ನಾಗರಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ