ಸಂಪುಟ ಸಭೆಯಲ್ಲಿ ಪವರ್ ಕಟ್
Team Udayavani, Oct 26, 2018, 6:30 AM IST
ಬೆಂಗಳೂರು: ಸಚಿವ ಸಂಪುಟ ಸಭೆಯ ನಂತರ ಸಚಿವ ಬಂಡೆಪ್ಪ ಕಾಂಶಪೂರ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಸಚಿವರಿಗೆ ಮುಜುಗರ ಉಂಟು ಮಾಡಿತು.
ಅದಕ್ಕೂ ಮೊದಲು ಮುಖ್ಯಮಂತ್ರಿ ಕುಮಾರಸ್ವಾಮಿ ಇಂಧನ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಮಾಧ್ಯಮಗಳು ಜವಾಬ್ದಾರಿಯಿಂದ ವರದಿ ಮಾಡಬೇಕೆಂದು ಖಾರವಾಗಿಯೇ ಮಾತನಾಡಿದ್ದರು.
ಆದರೆ, ಸಚಿವರು ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿರುವಾಗಲೇ ವಿದ್ಯುತ್ ಕೈ ಕೊಟ್ಟಿದ್ದು, ಸಚಿವರಿಗೆ ಮುಜುಗರ ಉಂಟು ಮಾಡಿತು.
ಸಚಿವರು ಗೈರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವುದರಿಂದ ಸಚಿವ ಸಂಪುಟ ಸಭೆಗೆ ಅರ್ಧಕ್ಕೂ ಹೆಚ್ಚು ಸಚಿವರು ಗೈರು ಹಾಜರಾಗಿದ್ದರು. ಸರ್ಕಾರ ಬಹುತೇಕ ಸಚಿವರಿಗೆ ಐದು ಕ್ಷೇತ್ರಗಳಲ್ಲಿ ಚುನಾವಣಾ ಉಸ್ತುವಾರಿಯನ್ನಾಗಿ
ನೇಮಿಸಿರುವುದರಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯಿಂದ ಬಹುತೇಕ ಸಚಿವರು ದೂರ ಉಳಿದಿದ್ದರು. ಪ್ರಮುಖ ಸಚಿವರಾದ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ್,ಜಮೀರ್ ಅಹಮದ್, ಕೃಷ್ಣ ಬೈರೇಗೌಡ ಸೇರಿದಂತೆ ಅರ್ಧಕ್ಕೂ ಹೆಚ್ಚು ಸಂಪುಟದ ಸಚಿವರು ಗೈರು ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ